Shivarajkumar and Upendra: ಮತ್ತೆ ತೆರೆ ಮೇಲೆ ಒಂದಾಗಲಿದ್ದಾರೆ ಉಪೇಂದ್ರ-ಶಿವಣ್ಣ...ಯಾವ ಸಿನಿಮಾ ಗೆಸ್ ಮಾಡಿ
ಉಪೇಂದ್ರ ಹಾಗೂ ಶಿವರಾಜ್ಕುಮಾರ್ ಮೊದಲ ಬಾರಿಗೆ 2000 ರಲ್ಲಿ ಪ್ರೀತ್ಸೆ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ನಂತರ 2007 ರಲ್ಲಿ ಲವ-ಕುಶ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಇದೀಗ ಅರ್ಜುನ್ ಜನ್ಯಾ ನಿರ್ದೇಶನದ ಚಿತ್ರದಲ್ಲಿ ಮತ್ತೆ ಒಂದಾಗುತ್ತಿರುವ ವಿಚಾರ ಕೇಳಿ ಇಬ್ಬರ ಅಭಿಮಾನಿಗಳು ಖುಷಿಯಾಗಿದ್ದಾರೆ.
ಕೆಜಿಎಫ್ ಖ್ಯಾತಿಯ ರವಿ ಬಸ್ರೂರು, ಸಂಗೀಗ ನಿರ್ದೇಶಕ ಹರಿಕೃಷ್ಣ, ವಿ. ಮನೋಹರ್, ಕವಿರಾಜ್, ಸಾಧು ಕೋಕಿಲ ತಾವು ಸಂಗೀತ ನಿರ್ದೇಶಕರು ಮಾತ್ರವಲ್ಲ, ಸಿನಿಮಾ ನಿರ್ದೇಶನದಲ್ಲೂ ಸೈ ಎಂದು ತೋರಿಸಿಕೊಟ್ಟಿದ್ದಾರೆ. ಈಗ ಅರ್ಜುನ್ ಜನ್ಯಾ ಕೂಡಾ ಸಿನಿಮಾವೊಂದನ್ನು ನಿರ್ದೇಶನ ಮಾಡಲು ಹೊರಟಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಅರ್ಜುನ್ ಜನ್ಯಾ ತಾವು ಸಿನಿಮಾವೊಂದನ್ನು ನಿರ್ದೇಶಿಸುತ್ತಿರುವುದಾಗಿ ಹೇಳಿದ್ದರು.
ಅರ್ಜುನ್ ಜನ್ಯಾ, ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ದಾರೆ ಎಂದು ತಿಳಿದಾಗ, ಅವರ ಸಿನಿಮಾಗೆ ಹೀರೋ ಯಾರಾಗಬಹುದು ಎಂಬು ಕುತೂಹಲ ಎಲ್ಲರಿಗೂ ಕಾಡಿತ್ತು. ನಂತರ, ಸೆಂಚುರಿ ಸ್ಟಾರ್ಗೆ ಅವರು ಆಕ್ಷನ್ ಕಟ್ ಹೇಳುತ್ತಿದ್ದಾರೆ ಎಂಬ ವಿಚಾರ ಕೇಳಿ ಎಲ್ಲರಿಗೂ ಖುಷಿಯಾಗಿತ್ತು. ಸಿನಿಮಾದಲ್ಲಿ ಮತ್ತೊಬ್ಬ ಹೀರೋ ಇದ್ದಾರೆ ಎಂದಾಗ ಯಾರಿರಬಹುದು ಎಂದು ಮತ್ತಷ್ಟು ಕುತೂಹಲ ಹೆಚ್ಚಾಯ್ತು. ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಜೊತೆಗೆ ಉಪೇಂದ್ರ ನಟಿಸುತ್ತಿದ್ದಾರಂತೆ.
ಅರ್ಜುನ್ ಜನ್ಯಾ ನಿರ್ದೇಶನದಲ್ಲಿ ನಾನು ನಟಿಸಲು ತಯಾರಿದ್ದೇನೆ ಎಂದು ಆಗಲೇ ಶಿವರಾಜ್ಕುಮಾರ್ ಹೇಳಿದ್ದರು. ಇದೀಗ ಉಪೇಂದ್ರ ಕೂಡಾ ಒಪ್ಪಿದ್ದಾರಂತೆ. ಈ ಮೂಲಕ ಶಿವರಾಜ್ಕುಮಾರ್ ಹಾಗೂ ಉಪೇಂದ್ರ ಮೂರನೇ ಬಾರಿ ಜೊತೆಯಾಗಿ ನಟಿಸುತ್ತಿದ್ದಾರೆ. ಉಪೇಂದ್ರ ಹಾಗೂ ಶಿವರಾಜ್ಕುಮಾರ್ ಮೊದಲ ಬಾರಿಗೆ 2000 ರಲ್ಲಿ ಪ್ರೀತ್ಸೆ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ನಂತರ 2007 ರಲ್ಲಿ ಲವ-ಕುಶ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಇದೀಗ ಅರ್ಜುನ್ ಜನ್ಯಾ ನಿರ್ದೇಶನದ ಚಿತ್ರದಲ್ಲಿ ಮತ್ತೆ ಒಂದಾಗುತ್ತಿರುವ ವಿಚಾರ ಕೇಳಿ ಇಬ್ಬರ ಅಭಿಮಾನಿಗಳು ಖುಷಿಯಾಗಿದ್ದಾರೆ.
ಶಿವರಾಜ್ ಕುಮಾರ್ ಸದ್ಯಕ್ಕೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ವಿಜಯ್ ಮಿಲ್ಟನ್ ನಿರ್ದೇಶನದ ಬೈರಾಗಿ ಇತ್ತೀಚೆಗೆ ತರೆ ಕಂಡಿತ್ತು. ತೆಲುಗಿನ ರವಿ ಧುಲಿಪುಡಿ ನಿರ್ದೇಶನದ ನೀ ಸಿಗೊವರೆಗೂ, ಎ. ಹರ್ಷ ನಿರ್ದೇಶನದ ವೇದಾ, ಯೋಗರಾಜ್ ಭಟ್ ಅವರ ಕುಲದಲ್ಲಿ ಕೀಳ್ಯಾವುದೋ, ರಿಷಭ್ ಶೆಟ್ಟಿ ನಿರ್ದೇಶನದ ಹೊಸ ಸಿನಿಮಾಗಳಲ್ಲಿ ಶಿವಣ್ಣ ಬ್ಯುಸಿ ಇದ್ದಾರೆ. ಈ ಸಿನಿಮಾಗಳು ಮುಗಿದ ನಂತರ ಅರ್ಜುನ್ ಜನ್ಯಾ ನಿರ್ದೇಶನದ ಸಿನಿಮಾ ಆರಂಭವಾಗುವ ಸಾಧ್ಯತೆ ಇದೆ. ಈಗಾಗಲೇ ಶಿವರಾಜ್ ಕುಮಾರ್, ಚಿತ್ರದ ಕಥೆಯನ್ನು ಕೇಳಿದ್ದು ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿದೆ ಎಂದು ತಿಳಿದುಬಂದಿದೆ. ರಮೇಶ್ ರೆಡ್ಡಿ, ಅರ್ಜುನ್ ಜನ್ಯಾ ಅವರ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.
ಇನ್ನು ಉಪೇಂದ್ರ ಬಹುನಿರೀಕ್ಷಿತ ಕಬ್ಜ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಆರ್. ಚಂದ್ರು ನಿರ್ಮಿಸಿ, ನಿರ್ದೇಶಿಸುತ್ತಿರುವ ಈ ಸಿನಿಮಾ ಬಹುತೇಕ ಮುಕ್ತಾಯವಾಗಿದೆ. ಈ ಸಿನಿಮಾ ಸುಮಾರು 7 ಭಾಷೆಗಳಲ್ಲಿ ತೆರೆ ಕಾಣುತ್ತಿರುವುದರಿಂದ ಕೊಂಚ ತಡವಾಗುತ್ತಿದೆ. ಸೆಪ್ಟೆಂಬರ್ 17 ರಂದು ಟೀಸರ್ ಬಿಡುಗಡೆ ಮಾಡಲಾಗಿತ್ತು. ಶೀಘ್ರದಲ್ಲೇ ಸಿನಿಮಾ ರಿಲೀಸ್ ದಿನಾಂಕವನ್ನು ಕೂಡಾ ಘೋಷಿಸುವುದಾಗಿ ನಿರ್ದೇಶಕ-ನಿರ್ಮಾಪಕ ಆರ್. ಚಂದ್ರು ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಉಪ್ಪಿ 'UI' ಸಿನಿಮಾ ಕೂಡಾ ಒಪ್ಪಿಕೊಂಡಿದ್ದಾರೆ. ಈ ಚಿತ್ರವನ್ನು 'ಟಗರು' ಸಿನಿಮಾ ಖ್ಯಾತಿಯ ಕೆ.ಪಿ ಶ್ರೀಕಾಂತ್ ಮತ್ತು ನವೀನ್ ಮನೋಹರನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಉಪೇಂದ್ರ ವಹಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಹಾಗೂ ಉಪೇಂದ್ರ ಸದ್ಯಕ್ಕೆ ಒಪ್ಪಿಕೊಂಡಿರುವ ಸಿನಿಮಾಗಳನ್ನು ಮುಗಿಸಿ ನಂತರ ಅರ್ಜುನ್ ಜನ್ಯಾ ಸಿನಿಮಾದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.