ಕನ್ನಡ ಸುದ್ದಿ  /  ಮನರಂಜನೆ  /  Siima Awards 2022: ಪ್ಯಾನ್‌ ಇಂಡಿಯಾದಲ್ಲಿ ಕನ್ನಡ ಸಿನಿಮಾಗಳ ಮಿಂಚು; ಬೆಂಗಳೂರಿನಲ್ಲಿ ಮೊದಲ ಸಲ 'ಸೈಮಾ ಅವಾರ್ಡ್ಸ್ 2022'

SIIMA Awards 2022: ಪ್ಯಾನ್‌ ಇಂಡಿಯಾದಲ್ಲಿ ಕನ್ನಡ ಸಿನಿಮಾಗಳ ಮಿಂಚು; ಬೆಂಗಳೂರಿನಲ್ಲಿ ಮೊದಲ ಸಲ 'ಸೈಮಾ ಅವಾರ್ಡ್ಸ್ 2022'

ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ 'ಸೈಮಾ ಅವಾರ್ಡ್ಸ್ 2022' ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಬೆಂಗಳೂರಿನಲ್ಲಿ 'ಸೈಮಾ ಅವಾರ್ಡ್ಸ್ 2022' ಹಬ್ಬ; ಅಪ್ಪು ಸ್ಮರಣೆಯಲ್ಲಿ ಸೌತ್‌ ಚಿತ್ರೋದ್ಯಮದ ಸಮಾಗಮ...
ಬೆಂಗಳೂರಿನಲ್ಲಿ 'ಸೈಮಾ ಅವಾರ್ಡ್ಸ್ 2022' ಹಬ್ಬ; ಅಪ್ಪು ಸ್ಮರಣೆಯಲ್ಲಿ ಸೌತ್‌ ಚಿತ್ರೋದ್ಯಮದ ಸಮಾಗಮ...

ಬೆಂಗಳೂರು: ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ 'ಸೈಮಾ ಅವಾರ್ಡ್ಸ್ 2022' ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಟ್ರೆಂಡಿಂಗ್​ ಸುದ್ದಿ

ಈ ವಿಚಾರವನ್ನು ಹೇಳಿಕೊಳ್ಳಲೆಂದೇ ಪತ್ರಿಕಾಗೋಷ್ಠಿ ಆಯೋಜಿಸಿದ್ದ "ಸೈಮಾ" ಅವಾರ್ಡ್ಸ್ ನ ಮುಖ್ಯಸ್ಥೆ ಬೃಂದಾ ಪ್ರಸಾದ್, ಈ ಇವೆಂಟ್‌ನ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡರು. "SIIMA" 2022 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲು ಖುಷಿಯಾಗುತ್ತಿದೆ. ಇದು ಹತ್ತನೇ ವರ್ಷದ ಪ್ರಶಸ್ತಿ ಸಮಾರಂಭ. ಬೆಂಗಳೂರಿನಲ್ಲಿ "ಸೈಮಾ" ಅವಾರ್ಡ್ಸ್ ನಡೆಸಲು ಎರಡು ಪ್ರಮುಖ ಕಾರಣಗಳಿವೆ. ಒಂದು ನಮ್ಮೆಲ್ಲರ ನೆಚ್ಚಿನ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ‌. ಮತ್ತೊಂದು ಕನ್ನಡ ಚಿತ್ರಗಳು ಈಗ ಪ್ಯಾನ್ ಇಂಡಿಯಾದಲ್ಲಿ ಸಾಕಷ್ಟು ಜನಪ್ರಿಯವಾಗುತ್ತಿವೆ. ಹಾಗಾಗಿ ಈ ಬಾರಿ ಬೆಂಗಳೂರನ್ನೇ ಆಯ್ಕೆ ಮಾಡಿಕೊಂಡಿದ್ದೇವೆ" ಎಂದರು.

ಟಾಲಿವುಡ್‌ ನಟ ರಾಣಾ ದಗ್ಗುಬಾಟಿ ಮಾತನಾಡಿ, "ಒಂದು ಪ್ರಶಸ್ತಿ ಸಮಾರಂಭವನ್ನು ಹತ್ತು ವರ್ಷಗಳ ಕಾಲ ನಡೆಸುವುದು ಸುಲಭವಲ್ಲ. ಆ ನಿಟ್ಟಿನಲ್ಲಿ ನಾನು ಮೊದಲು ಇದರ ಉಸ್ತುವಾರಿ ಬೃಂದಾ ಪ್ರಸಾದ್ ಮತ್ತು ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಈ ಬಾರಿ ಹತ್ತನೇ ವರ್ಷದ "ಸೈಮಾ" ಅವಾರ್ಡ್ಸ್ ನನಗೆ ಪ್ರಿಯವಾದ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಖುಷಿ" ಎನ್ನುತ್ತಾರೆ ಖ್ಯಾತ ನಟ ರಾಣಾ ದಗ್ಗುಬಾಟಿ.

ಸ್ಯಾಂಡಲ್‌ವುಡ್‌ ನಟ ಧನಂಜಯ್‌ ಸಹ ಪತ್ರಿಕಾಗೋಷ್ಠಿಯಲ್ಲಿದ್ದರು. "ನನಗೆ "ಸೈಮಾ" ಬರೀ ಪ್ರಶಸ್ತಿ ಅಲ್ಲ. ಅದೊಂದು ನೆನಪು. ನಾನು ಮೊದಲ ಬಾರಿ ಈ ಪ್ರಶಸ್ತಿ ಸ್ವೀಕರಿಸಲು ಮಲೇಷಿಯಾ ಗೆ ಹೋಗಿದ್ದು ನನ್ನ ಹೃದಯದಲ್ಲಿ ಇನ್ನೂ ಹಸಿರಾಗಿದೆ. ಈ ಬಾರಿ ನಮ್ಮ ಬೆಂಗಳೂರಿನಲ್ಲಿ ಪ್ರಶಸ್ತಿ ಸಮಾರಂಭ ನಡೆಯುತ್ತಿರುವುದು ಹೆಚ್ಚು ಖುಷಿ ತಂದಿದೆ. ನಿಮ್ಮೆಲ್ಲರಿಗೂ ನಮ್ಮೂರಿಗೆ ಆತ್ಮೀಯ ಸ್ವಾಗತ. ಪದೇಪದೆ ಬೆಂಗಳೂರಿನಲ್ಲೇ ಈ ಸಮಾರಂಭ ಮಾಡಬೇಕು ಅನಿಸಬೇಕು. ಆ ಮಟ್ಟದಲ್ಲಿ ಈ ಸಮಾರಂಭ ಯಶಸ್ವಿಯಾಗಲಿ‌" ಎಂದು ನಟ ಡಾಲಿ ಧನಂಜಯ ಹಾರೈಸಿದರು.

"ನನಗೆ ಬೆಂಗಳೂರು ತುಂಬಾ ಇಷ್ಟ. ಸಾಕಷ್ಟು ಕನ್ನಡ ಚಿತ್ರಗಳಲ್ಲಿ ನಟಿಸಿದ್ದೇನೆ.. ಚಿತ್ರೀಕರಣ ಸಮಯದಲ್ಲಿ ಹಲವು ದಿನಗಳನ್ನು ಇಲ್ಲೇ ಕಳೆದಿದ್ದೇನೆ. ಈ ಬಾರಿ ಅಪ್ಪು ಅವರ ಸ್ಮರಣೆಯೊಂದಿಗೆ ಈ ಸಮಾರಂಭ ನಡೆಯುತ್ತಿದೆ" ಎಂದ ನಟಿ ಶಾನ್ವಿ ಶ್ರೀವಾಸ್ತವ್ ತಿಳಿಸಿದರು. ಇನ್ನುಳಿದಂತೆ ನಟಿಯರಾದ ಫರಿಯಾ ಅಬ್ದುಲ್ಲಾ, ನಟಿ ಶ್ರೀಲೀಲಾ ಹಾಗೂ ಕೆಲವು ಪ್ರಾಯೋಜಕರು ಸಹ "ಸೈಮಾ" ಬಗ್ಗೆ ಮಾತನಾಡಿದರು.

IPL_Entry_Point