ಕನ್ನಡ ಸುದ್ದಿ  /  ಮನರಂಜನೆ  /  Pavitra Lokesh: ದೇವತೆಗಳು ರಾಜರು ಬಹುಪತ್ನಿತ್ವ ಅನುಸರಿಸುತ್ತಿದ್ದರು, ನಾನು ಪವಿತ್ರಾ ಲಿವ್‌ ಇನ್‌ ರಿಲೇಶನ್‌ನಲ್ಲಿದ್ದೇವೆ; ನರೇಶ್‌ ಕೃಷ್ಣ

Pavitra Lokesh: ದೇವತೆಗಳು ರಾಜರು ಬಹುಪತ್ನಿತ್ವ ಅನುಸರಿಸುತ್ತಿದ್ದರು, ನಾನು ಪವಿತ್ರಾ ಲಿವ್‌ ಇನ್‌ ರಿಲೇಶನ್‌ನಲ್ಲಿದ್ದೇವೆ; ನರೇಶ್‌ ಕೃಷ್ಣ

ಹಿಂದೆ ದೇವಾನುದೇವತೆಗಳೇ ಬಹುಪತ್ನಿತ್ವದಲ್ಲಿದ್ದರು. ರಾಜರೂ ಒಂದಕ್ಕಿಂತ ಹೆಚ್ಚು ಮದುವೆ ಆಗುತ್ತಿದ್ದರು. ಅದೆಲ್ಲವನ್ನೂ ನಾವು ಸ್ವೀಕರಿಸಿ, ಒಪ್ಪಿಕೊಂಡಿದ್ದೇವೆ. ಈಗಲೂ ಸುಪ್ರೀಂಕೋರ್ಟ್‌ ಲಿವ್‌ ಇನ್‌ ರಿಲೇಶನ್‌ಶಿಪ್‌ ತಪ್ಪಲ್ಲ ಎಂದು ತೀರ್ಪು ನೀಡಿದೆ.

ನರೇಶ್‌ ಕೃಷ್ಣ, ಪವಿತ್ರಾ ಲೋಕೇಶ್
ನರೇಶ್‌ ಕೃಷ್ಣ, ಪವಿತ್ರಾ ಲೋಕೇಶ್

ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಮೇ 26ರಂದು ತೆರೆ ಕಾಣುತ್ತಿದೆ. ಪವಿತ್ರಾ ಹಾಗೂ ನರೇಶ್‌ ಸದ್ಯಕ್ಕೆ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಬುಧವಾರ, ಈ ಜೋಡಿ ಬೆಂಗಳೂರಿಗೆ ಆಗಮಿಸಿತ್ತು. ನಗರದ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ ಬಗ್ಗೆ ಮಾತನಾಡಲು ಸುದ್ದಿಗೋಷ್ಠಿ ಏರ್ಪಡಿಸಿದ್ದರು.

ಟ್ರೆಂಡಿಂಗ್​ ಸುದ್ದಿ

ಇದು ನಿಮ್ಮಿಬ್ಬರ ರಿಯಲ್‌ ಲೈಫ್‌ ಸ್ಟೋರಿನಾ? ಟೀಸರ್‌ ನೋಡಿದರೆ ಇದುವರೆಗೂ ನಡೆದ ಘಟನೆಗಳನ್ನೇ ಅಲ್ಲಿ ತೋರಿಸಲಾಗಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪವಿತ್ರಾ ಲೋಕೇಶ್, ''ಒಂದೆರಡು ನಿಮಿಷದ ಟೀಸರ್‌ ಟ್ರೇಲರ್‌ ನೋಡಿ ಯಾವ ನಿರ್ಧಾರಕ್ಕೂ ಬರಬೇಡಿ, ಸಿನಿಮಾ ನೋಡಿದರೆ ನಾವು ಏನು ಹೇಳಲು ಹೊರಟಿದ್ದೇವೆ ಎನ್ನುವುದು ಅರ್ಥವಾಗುತ್ತದೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡಲು ಹೊರಟಿದ್ದೇವೆ. ಈಗಲೇ ಸಿನಿಮಾ ಕಥೆಯನ್ನು ಹೇಳಲು ಸಾಧ್ಯವಿಲ್ಲ. ನಮ್ಮ ಜೀವನಕ್ಕೂ ಸಿನಿಮಾಗೂ ಏನೂ ಸಂಬಂಧ ಇಲ್ಲ. ಸಿನಿಮಾ ಬೇರೆ, ವೈಯಕ್ತಿಕ ಜೀವನವೇ ಬೇರೆ.''

ವೃತ್ತಿಗೂ ವೈಯಕ್ತಿಕ ಜೀವನಕ್ಕೂ ಲಿಂಕ್‌ ಮಾಡುವುದು ಬೇಡ

''ನನ್ನ‌ ವೃತ್ತಿಗೂ ವೈಯಕ್ತಿಕ ವಿಚಾರಕ್ಕೂ ಲಿಂಕ್‌ ಮಾಡುವುದು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ, ಬೇಕಂತಲೇ ಯಾರೂ ಸುದ್ದಿಯಾಗುವುದಿಲ್ಲ. 1994ನಲ್ಲಿ ಅಂಬರೀಶ್‌ ಅವರು ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಅಲ್ಲಿಂದ ಇದುವರೆಗೂ ನಾನು ಯಾವುದೇ ವಿಚಾರವನ್ನು ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಿರಲಿಲ್ಲ. ದುರುದ್ದೇಶಪೂರ್ವಕವಾಗಿ ನನ್ನ ಹೆಗಲ ಮೇಲೆ ಗನ್‌ ಇಟ್ಟು ನರೇಶ್‌ ಅವರನ್ನು ಶೂಟ್‌ ಮಾಡುವ ಪಿತೂರಿ ನಡೆದಿತ್ತು'' ಎಂದು ಪವಿತ್ರಾ ಹೇಳಿದರು.

ಲಿವ್‌ ಇನ್‌ ರಿಲೇಶನ್‌ ಬಗ್ಗೆ ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ

ನರೇಶ್‌ ಮಾತನಾಡಿ, ''ಹಿಂದೆ ದೇವಾನುದೇವತೆಗಳೇ ಬಹುಪತ್ನಿತ್ವದಲ್ಲಿದ್ದರು. ರಾಜರೂ ಒಂದಕ್ಕಿಂತ ಹೆಚ್ಚು ಮದುವೆ ಆಗುತ್ತಿದ್ದರು. ಅದೆಲ್ಲವನ್ನೂ ನಾವು ಸ್ವೀಕರಿಸಿ, ಒಪ್ಪಿಕೊಂಡಿದ್ದೇವೆ. ಈಗಲೂ ಸುಪ್ರೀಂಕೋರ್ಟ್‌ ಲಿವ್‌ ಇನ್‌ ರಿಲೇಶನ್‌ಶಿಪ್‌ ತಪ್ಪಲ್ಲ ಎಂದು ತೀರ್ಪು ನೀಡಿದೆ. ಅಂತದ್ದರಲ್ಲಿ ನಮ್ಮಿಬ್ಬರ ತಪ್ಪು ಏನಿದೆ? ನಾನಂತೂ ಸಿಂಗಲ್‌ ಅಲ್ಲ, ಪವಿತ್ರಾ ಹಾಗೂ ನಾವಿಬ್ಬರೂ ಲಿವ್‌ ಇನ್‌ ರೀಲೇಶನ್‌ಶಿಪ್‌ನಲ್ಲಿದ್ದೇವೆ ಎಂದು ಬಹಿರಂಗವಾಗಿ ಒಪ್ಪಿಕೊಂಡರು.

ಮೈಸೂರು ಹೋಟೆಲ್‌ನಲ್ಲಿ ಒಟ್ಟಿಗೆ ಕಂಡುಬಂದ ಪವಿತ್ರಾ ಲೋಕೇಶ್

ಪವಿತ್ರಾ ಹಾಗೂ ನರೇಶ್‌ ಇಬ್ಬರೂ ತಮ್ಮ ರಿಲೇಶನ್‌ಶಿಪ್‌ನಿಂದಲೇ ಸುದ್ದಿಯಾದವರು. ಪವಿತ್ರಾ ಲೋಕೇಶ್‌ ಟಾಲಿವುಡ್‌ ನಟ ನರೇಶ್‌ ಅವರನ್ನು ಮದುವೆಯಾಗುತ್ತಿದ್ದಾರೆ ಎಂದು ಆರಂಭದಲ್ಲಿ ತಿಳಿದಾಗ ವಿಷಯ ಅಷ್ಟು ಗಂಭೀರವಾಗಿರಲಿಲ್ಲ. ಆದರೆ ನರೇಶ್‌ಗೆ ಇದು 4ನೇ ಮದುವೆ ಪವಿತ್ರಾಗೆ ಮೂರನೇ ಮದುವೆ ಎಂದು ತಿಳಿದಾಗ ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸಿದ್ದರು. ಅಲ್ಲದೆ ಇಬ್ಬರೂ ಮೈಸೂರಿನ ಹೋಟೆಲ್‌ವೊಂದರಲ್ಲಿ ಮಾಧ್ಯಮಗಳ ಎದುರಾದಾಗ ದೊಡ್ಡ ಡ್ರಾಮಾ ಕ್ರಿಯೇಟ್‌ ಆಗಿತ್ತು. ನರೇಶ್‌ ರಾಜಾರೋಷವಾಗಿ ಎಲ್ಲರಿಗೂ ಬೈ ಹೇಳಿ ಶಿಳ್ಳೆ ಹಾಕುತ್ತಾ ಪವಿತ್ರಾ ಜೊತೆ ಕಾರಿಗೆ ಹತ್ತಿ ಹೈದರಾಬಾದ್‌ನತ್ತ ಪ್ರಯಾಣ ಬೆಳೆಸಿದ್ದರು.

ಇದಾದ ನಂತರ ಇಬ್ಬರೂ ಅಂದರೂ ಬಾವುಂಡಾಲಿ ಸಿನಿಮಾ ಪ್ರಮೋಷನ್‌ ಸಮಯದಲ್ಲಿ ಮಾಧ್ಯಮಗಳ ಮುಂದೆ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇದೀಗ 'ಮತ್ತೆ ಮದುವೆ' ಸಿನಿಮಾ ಮೂಲಕ ಇಬ್ಬರೂ ಮತ್ತೆ ಜನರ ಎದುರು ಬರುತ್ತಿದ್ದಾರೆ.‌ʼ

ಮೇ 26ಕ್ಕೆ ಸಿನಿಮಾ ರಿಲೀಸ್

ವಿಜಯ ಕೃಷ್ಣ ಮೂವೀಸ್ ಬ್ಯಾನರ್ ಅಡಿ ಈ ಚಿತ್ರವನ್ನು ನರೇಶ್ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ.‌ ಮೇ 26ಕ್ಕೆ ಸಿನಿಮಾ ತೆರೆ ಕಾಣುತ್ತಿದೆ.

IPL_Entry_Point