ಮಹಾಭಾರತವನ್ನು ತೆರೆ ಮೇಲೆ ತರಲು ಹೊರಟಿದ್ದಾರೆ ಬಾಹುಬಲಿ ನಿರ್ದೇಶಕ ರಾಜಮೌಳಿ; ಪ್ರಮುಖ ಪಾತ್ರದಲ್ಲಿ ನಾನಿ ನಟನೆ
ಕನ್ನಡ ಸುದ್ದಿ  /  ಮನರಂಜನೆ  /  ಮಹಾಭಾರತವನ್ನು ತೆರೆ ಮೇಲೆ ತರಲು ಹೊರಟಿದ್ದಾರೆ ಬಾಹುಬಲಿ ನಿರ್ದೇಶಕ ರಾಜಮೌಳಿ; ಪ್ರಮುಖ ಪಾತ್ರದಲ್ಲಿ ನಾನಿ ನಟನೆ

ಮಹಾಭಾರತವನ್ನು ತೆರೆ ಮೇಲೆ ತರಲು ಹೊರಟಿದ್ದಾರೆ ಬಾಹುಬಲಿ ನಿರ್ದೇಶಕ ರಾಜಮೌಳಿ; ಪ್ರಮುಖ ಪಾತ್ರದಲ್ಲಿ ನಾನಿ ನಟನೆ

ನಾನಿ ಅಭಿನಯದ ಇನ್ನಷ್ಟೇ ತೆರೆ ಕಾಣಲಿರುವ ಹಿಟ್ 3 ಚಿತ್ರ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಮಹಾಭಾರತ ಸಿನಿಮಾ ಮಾಡುವ ಬಗ್ಗೆ ಮಾತನಾಡಿದ್ದಾರೆ ನಿರ್ದೇಶಕ ಎಸ್‌ಎಸ್‌ ರಾಜಮೌಳಿ. ಈ ಚಿತ್ರದಲ್ಲಿ ನಾನಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬುದನ್ನೂ ಹೇಳಿದ್ದಾರೆ. (ಬರಹ: ಚೇತನ್ ನಾಡಿಗೇರ್‌)

ಮಹಾಭಾರತವನ್ನು ತೆರೆ ಮೇಲೆ ತರಲು ಹೊರಟಿದ್ದಾರೆ ಬಾಹುಬಲಿ ನಿರ್ದೇಶಕ ರಾಜಮೌಳಿ
ಮಹಾಭಾರತವನ್ನು ತೆರೆ ಮೇಲೆ ತರಲು ಹೊರಟಿದ್ದಾರೆ ಬಾಹುಬಲಿ ನಿರ್ದೇಶಕ ರಾಜಮೌಳಿ

ಇತ್ತೀಚೆಗಷ್ಟೇ ‘ಮಹಾಭಾರತ’ ಚಿತ್ರವನ್ನು ಮಾಡುವುದಾಗಿ ಬಾಲಿವುಡ್‌ ನಟ ಅಮೀರ್‌ ಖಾನ್‍ ಘೋಷಣೆ ಮಾಡಿದ್ದರು. ಇದು ತಮ್ಮ ಜೀವನದ ಮಹಾತ್ವಾಕಾಂಕ್ಷೆಯ ಚಿತ್ರ ಎಂದು ಅವರಿ ಹೇಳಿಕೊಂಡಿದ್ದರು. ಈಗ ನಿರ್ದೇಶಕ ರಾಜಮೌಳಿ ಸಹ ‘ಮಹಾಭಾರತ’ವನ್ನು ತೆರೆ ಮೇಲೆ ತರುವುದು ನಿಜ ಎಂದು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ‘ಹಿಟ್‍ 3’ ಚಿತ್ರದ ಪ್ರೀ-ರಿಲೀಸ್ ಇವೆಂಟ್‍ ಸಂದರ್ಭದಲ್ಲಿ ಮಾತನಾಡಿರುವ ಅವರು, ‘ಮಹಾಭಾರತ’ ಚಿತ್ರವನ್ನು ಮಾಡುತ್ತಿರುವುದು ನಿಜ ಮತ್ತು ಅದರಲ್ಲಿ ನಾನಿ ಒಂದು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಸೂಚನೆ ಕೊಟ್ಟಿದ್ದಾರೆ.

‘ಮಹಾಭಾರತ’ ಚಿತ್ರ ಮಾಡಬೇಕೆನ್ನುವುದು ರಾಜಮೌಳಿ ಅವರ ಬಹುವರ್ಷಗಳ ಕನಸು. ಕೆಲವು ವರ್ಷಗಳ ಹಿಂದೆಯೇ ಅವರು ‘ಮಹಾಭಾರತ’ ಸರಣಿಯ 10 ಚಿತ್ರಗಳನ್ನು ನಿರ್ದೇಶಿಸುವುದಾಗಿ ಹೇಳಿದ್ದರು. ‘ಮಹಾಭಾರತ’ ಚಿತ್ರ ಮಾಡಬೇಕೆಂದರೆ, ದೇಶದಲ್ಲಿರುವ ಹಲವು ‘ಮಹಾಭಾರತ’ಗಳ ಕುರಿತು ಓದುವುದಕ್ಕೆ ಒಂದು ವರ್ಷ ಬೇಕಾಗುತ್ತದೆ. ‘ಮಹಾಭಾರತ’ವನ್ನು ತೆರೆಗೆ ತರಬೇಕೆಂದರೆ, 10 ಸರಣಿಗಳು ಬೇಕಾಗುತ್ತದೆ. ಯಾವಾಗ ಆಗುತ್ತದೋ ಗೊತ್ತಿಲ್ಲ’ ಎಂದು ಹೇಳಿದ್ದರು.

ಹೀಗಿರುವಾಗಲೇ, ‘ಹಿಟ್ 3’ ಚಿತ್ರದ ಪ್ರೀ-ರಿಲೀಸ್ ಇವೆಂಟ್‍ನಲ್ಲಿ ಭಾಗವಹಿಸಿದ್ದ ಅವರನ್ನು ‘ಮಹಾಭಾರತ’ ಚಿತ್ರದ ಕುರಿತು ಕೇಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿರುವ ರಾಜಮೌಳಿ, ಚಿತ್ರದ ಬಗ್ಗೆ ಹೆಚ್ಚು ಮಾತನಡಲಿಲ್ಲ. ಆದರೆ, ಖಂಡಿತಾ ನಾನಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಸದ್ಯ ರಾಜಮೌಳಿ, ಮಹೇಶ್‍ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಅಭಿನಯದಲ್ಲಿ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಹೆಸರೇನು? ಯಾವಾಗ ಬಿಡುಗಡೆ? ಯಾರೆಲ್ಲಾ ಇರುತ್ತಾರೆ? ಈ ಬಾರಿ ರಾಜಮೌಳಿ ಏನು ಹೇಳುವುದಕ್ಕೆ ಹೊರಟಿದ್ದಾರೆ? ಮುಂತಾದ ವಿಷಯಗಳು ಇನ್ನಷ್ಟೇ ಬಹಿರಂಗವಾಗಬೇಕಿದೆ.

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.