ಕನ್ನಡ ಸುದ್ದಿ  /  Entertainment  /  Vijayananda Movie Release On December 9 Here Is The Theatre List And Other Details

Vijayananda Theatre List: ಜಗತ್ತಿನೆಲ್ಲೆಡೆ ಎಷ್ಟು ಸ್ಕ್ರೀನ್‌ಗಳಲ್ಲಿ ‘ವಿಜಯಾನಂದ’ ಚಿತ್ರ ರಿಲೀಸ್? ಇಲ್ಲಿದೆ ನೋಡಿ ಚಿತ್ರಮಂದಿರಗಳ ಪಟ್ಟಿ.

ಟ್ರೇಲರ್‌ ಮೂಲಕವೇ ಕುತೂಹಲ ಮೂಡಿಸಿರುವ ಈ ಸಿನಿಮಾ ಇನ್ನೇನು ಬಿಡುಗಡೆಗೆ ಒಂದೇ ದಿನ ಬಾಕಿ ಉಳಿದಿದ್ದು, ಬೇರೆ ಬೇರೆ ರಾಜ್ಯಗಳಿಗೂ ಚಿತ್ರತಂಡ ತೆರಳಿ ಪ್ರಚಾರ ಮಾಡಿದೆ.

ಜಗತ್ತಿನೆಲ್ಲೆಡೆ ಎಷ್ಟು ಸ್ಕ್ರೀನ್‌ಗಳಲ್ಲಿ ‘ವಿಜಯಾನಂದ’ ಚಿತ್ರ ರಿಲೀಸ್? ಇಲ್ಲಿದೆ ನೋಡಿ ಚಿತ್ರಮಂದಿರದ ಪಟ್ಟಿ..
ಜಗತ್ತಿನೆಲ್ಲೆಡೆ ಎಷ್ಟು ಸ್ಕ್ರೀನ್‌ಗಳಲ್ಲಿ ‘ವಿಜಯಾನಂದ’ ಚಿತ್ರ ರಿಲೀಸ್? ಇಲ್ಲಿದೆ ನೋಡಿ ಚಿತ್ರಮಂದಿರದ ಪಟ್ಟಿ.. (Twitter)

Vijayananda Movie Release: ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉದ್ಯಮಿ, ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನವನ್ನು ಆಧರಿಸಿ ತಯಾರಾಗಿರುವ ಚಿತ್ರ 'ವಿಜಯಾನಂದ'. ಈ ಚಿತ್ರ ಡಿಸೆಂಬರ್ 9ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ.

ಈಗಾಗಲೇ ಬಿಡುಗಡೆ ಆಗಿರುವ ಟೀಸರ್‌, ಹಾಡು ಮತ್ತು ಟ್ರೇಲರ್‌ ಮೂಲಕವೇ ಸದ್ದು ಮಾಡಿರುವ ‘ವಿಜಯಾನಂದ’ ಸಿನಿಮಾ, ಇದೀಗ ಬಿಡುಗಡೆಗೆ ಬಂದು ನಿಂತಿದೆ. ನಿಹಾಲ್‌ ರಜಪೂತ್‌ ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಕಾಣಿಸಿಕೊಂಡರೆ, ಈ ಚಿತ್ರಕ್ಕೆ ರಿಷಿಕಾ ಶರ್ಮಾ ನಿರ್ದೇಶನ ಮಾಡಿದ್ದಾರೆ. ಟ್ರಂಕ್‌ ಸಿನಿಮಾ ಬಳಿಕ ಎರಡನೇ ಅವಕಾಶದಲ್ಲಿ ದೊಡ್ಡ ಪ್ರಾಜೆಕ್ಟ್‌ಗೆ ಕೈ ಹಾಕಿದ್ದಾರೆ.

ಚಿತ್ರತಂಡ ಸದ್ಯ ಹೇಳಿಕೊಂಡಿರುವಂತೆ ವಿಶ್ವದಾದ್ಯಂತ ಸರಿಸುಮಾರು 1200ಕ್ಕೂ ಅಧಿಕ ತೆರೆಗಳ ಮೇಲೆ ‘ವಿಜಯಾನಂದ’ ಸಿನಿಮಾ ಬಿಡುಗಡೆ ಆಗಲಿದೆ. ಆಸ್ಟ್ರೇಲಿಯಾ, ದುಬೈ, ನ್ಯೂಜಿಲೆಂಡ್‌, ಲಂಡನ್‌ ಸೇರಿ ಹಲವು ದೇಶಗಳಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ. ಟ್ರೇಲರ್‌ ಮೂಲಕವೇ ಕುತೂಹಲ ಮೂಡಿಸಿರುವ ಈ ಸಿನಿಮಾ ಇನ್ನೇನು ಬಿಡುಗಡೆಗೆ ಒಂದೇ ದಿನ ಬಾಕಿ ಉಳಿದಿದ್ದು, ಬೇರೆ ಬೇರೆ ರಾಜ್ಯಗಳಿಗೂ ಚಿತ್ರತಂಡ ತೆರಳಿ ಪ್ರಚಾರ ಮಾಡಿದೆ.

1976ರಲ್ಲಿ ಒಂದು ಟ್ರಕ್‌ನಿಂದ ಪ್ರಾರಂಭವಾಗಿ ಇಂದು ಭಾರತದ ಅತೀ ದೊಡ್ಡ ಲಾಜಿಸ್ಟಿಕ್ಸ್ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಆರ್‌ಎಲ್‌ ಸಂಸ್ಥೆಯ ಮಾಲೀಕರಾಗಿರುವ ವಿಜಯ ಸಂಕೇಶ್ವರ ಅವರ ಸಾಹಸಮಯ ಮತ್ತು ರೋಮಾಂಚನಕಾರಿ ಕಥೆಯನ್ನು ಸಾರುವ ಈ ಚಿತ್ರದಲ್ಲಿ ಡಾ. ವಿಜಯ ಸಂಕೇಶ್ವರ ಮತ್ತು ಅವರ ಮಗ ಡಾ. ಆನಂದ ಸಂಕೇಶ್ವರ ಅವರು ನಡೆದು ಬಂದ ಹಾದಿಯ ಕಥೆ ಇದೆ.

ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ರಿಲೀಸ್‌ ಮಾಡಿದ್ದರು. "ವಿಜಯ ಸಂಕೇಶ್ವರ ಅವರ ಜೀವನವನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಪಠ್ಯವನ್ನಾಗಿ ಅಳವಡಿಸಬೇಕು ಎಂದು ಸಿಎಂ ಹೇಳಿದ್ದರು. ಅವರೊಬ್ಬ ನಿಜವಾದ ಕಾಯಕಪುರುಷ ಎಂದು ಸಂಕೇಶ್ವರ ಅವರನ್ನು ಬಣ್ಣಿಸಿದ್ದರು. ಅಂತಹ ಕಾಯಕಪುರುಷನ ಜೀವನ ತೆರೆಯ ಮೇಲೆ ಬರುವುದಕ್ಕೆ ತಯಾರಾಗಿದ್ದು, ನಾಳೆಯಿಂದ ಪ್ರೇಕ್ಷಕರು ಜಗತ್ತಿನಾದ್ಯಂತ ಚಿತ್ರವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಈಗಾಗಲೇ ಈ ಚಿತ್ರದ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆಯಾಗಿದ್ದು, ಎಲ್ಲ ಭಾಷೆಗಳಲ್ಲೂ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಈ ಹಿಂದೆ ‘ಟ್ರಂಕ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ರಿಷಿಕಾ ಶರ್ಮ, ‘ವಿಜಯಾನಂದ’ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಆ ಚಿತ್ರದಲ್ಲಿ ನಾಯಕನಾಗಿದ್ದ ನಿಹಾಲ್ ರಜಪೂತ್, ಈ ಚಿತ್ರದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಅಭಿನಯಿಸಿದ್ದು, ಮೂರು ವಯೋಮಾನ ಮತ್ತು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅನಂತ್ ನಾಗ್, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್, ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ, ಶೈನ್ ಶೆಟ್ಟಿ, ದಯಾಳ್ ಪದ್ಮನಾಭನ್, ರಮೇಶ್ ಭಟ್ ಮುಂತಾದ ಪ್ರತಿಭಾವಂತ ಕಲಾವಿದರು ವಿಜಯಾನಂದ ಚಿತ್ರದ ಭಾಗಗವಾಗಿದ್ದಾರೆ.

ವಿಆರ್‌ಎಲ್ ಪ್ರೊಡಕ್ಷನ್ಸ್‌ ಅಡಿ ಡಾ. ಆನಂದ ಸಂಕೇಶ್ವರ ನಿರ್ಮಿಸಿರುವ 'ವಿಜಯಾನಂದ' ಚಿತ್ರಕ್ಕೆ ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಸಂಗೀತ ಸಂಯೋಜಿಸಿದ್ದು, ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣವಿದೆ.

IPL_Entry_Point