ಆಪರೇಷನ್ ಸಿಂದೂರ ನಂತರ ಬಿಗಿ ಭದ್ರತೆ: ಬೆಂಗಳೂರಿನಲ್ಲಿ ವಿಮಾನದಿಂದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್‌ ಇಂಡಿಯಾ
ಕನ್ನಡ ಸುದ್ದಿ  /  ಕರ್ನಾಟಕ  /  ಆಪರೇಷನ್ ಸಿಂದೂರ ನಂತರ ಬಿಗಿ ಭದ್ರತೆ: ಬೆಂಗಳೂರಿನಲ್ಲಿ ವಿಮಾನದಿಂದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್‌ ಇಂಡಿಯಾ

ಆಪರೇಷನ್ ಸಿಂದೂರ ನಂತರ ಬಿಗಿ ಭದ್ರತೆ: ಬೆಂಗಳೂರಿನಲ್ಲಿ ವಿಮಾನದಿಂದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್‌ ಇಂಡಿಯಾ

ಆಪರೇಷನ್ ಸಿಂದೂರ ಕಾರ್ಯಾಚರಣೆಯ ನಂತರ ಬೆಂಗಳೂರು ಸಹಿತ ರಾಜ್ಯದ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. (ವರದಿ: ಎಚ್.ಮಾರುತಿ)

ಬೆಂಗಳೂರಿನಲ್ಲಿ ವಿಮಾನದಿಂದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್‌ ಇಂಡಿಯಾ
ಬೆಂಗಳೂರಿನಲ್ಲಿ ವಿಮಾನದಿಂದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್‌ ಇಂಡಿಯಾ

ಬೆಂಗಳೂರು: ಬುಧವಾರ ಆಪರೇಷನ್‌ ಸಿಂದೂರ ನಡೆದ ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಭದ್ರತಾ ಕಾರಣಕ್ಕೆ ಬುಧವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಏರ್ ಇಂಡಿಯಾ ವಿಮಾನದಿಂದ ಒಬ್ಬ ಪ್ರಯಾಣಿಕನನ್ನು ಕೆಳಗಿಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಖಚಿತಪಡಿಸಿವೆ.

ಈ ಪ್ರಯಾಣಿಕ ಬೆಂಗಳೂರಿನಿಂದ ನವದೆಹಲಿಗೆ AI-2820 ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಬುಧವಾರ ಸಂಜೆ 6.05 ಕ್ಕೆ ವಿಮಾನ ಹೊರಡುವ ಮೊದಲು, ಗುರುತು ಬಹಿರಂಗಪಡಿಸದ ಕಾರಣಕ್ಕೆ ಅವರನ್ನು ಕೆಳಗಿಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಮಗೆ ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಯಾವುದೇ ವಿವರಗಳನ್ನು ಹಂಚಿಕೊಳ್ಳುವಂತಿಲ್ಲ.ಪ್ರಯಾಣಿಕನನ್ನು ಕೆಳಗಿಳಿಸಿದ್ದೇವೆ ಎಂದರೆ ಅದಕ್ಕೊಂದು ನಿರ್ದಿಷ್ಟ ಕಾರಣವಿರುತ್ತದೆ. ಆ ಕಾರಣವನ್ನು ನಾವು ಬಹಿರಂಗಪಡಿಸುವಂತಿಲ್ಲ ಎಂದು ಏರ್ ಇಂಡಿಯಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವರದಿ: ಎಚ್.ಮಾರುತಿ

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in