ಗಂಗಾವತಿ ತಾಲೂಕು ಆನೆಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯ ಸಮಾಧಿ ಸ್ಮಾರಕದಲ್ಲಿ ಪ್ರಾಣಿ ವಧೆ ವಿಡಿಯೋ ವೈರಲ್‌, ಕೊನೆಗೂ ಭದ್ರತೆ ನೀಡಿದ ಸರ್ಕಾರ
ಕನ್ನಡ ಸುದ್ದಿ  /  ಕರ್ನಾಟಕ  /  ಗಂಗಾವತಿ ತಾಲೂಕು ಆನೆಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯ ಸಮಾಧಿ ಸ್ಮಾರಕದಲ್ಲಿ ಪ್ರಾಣಿ ವಧೆ ವಿಡಿಯೋ ವೈರಲ್‌, ಕೊನೆಗೂ ಭದ್ರತೆ ನೀಡಿದ ಸರ್ಕಾರ

ಗಂಗಾವತಿ ತಾಲೂಕು ಆನೆಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯ ಸಮಾಧಿ ಸ್ಮಾರಕದಲ್ಲಿ ಪ್ರಾಣಿ ವಧೆ ವಿಡಿಯೋ ವೈರಲ್‌, ಕೊನೆಗೂ ಭದ್ರತೆ ನೀಡಿದ ಸರ್ಕಾರ

ಗಂಗಾವತಿ ತಾಲೂಕು ಆನೆಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯ ಸಮಾಧಿ ಸ್ಮಾರಕದಲ್ಲಿ ಪ್ರಾಣಿ ವಧೆ ವಿಡಿಯೋ ವೈರಲ್‌ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಸರ್ಕಾರ ಅಲ್ಲಿ ಸ್ವಚ್ಛಗೊಳಿಸಿ ಭದ್ರತಾ ಸಿಬ್ಬಂದಿ ನಿಯೋಜಿಸಿದೆ.

ಗಂಗಾವತಿ ತಾಲೂಕು ಆನೆಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯ ಸಮಾಧಿ ಸ್ಮಾರಕದಲ್ಲಿ ಪ್ರಾಣಿ ವಧೆ ವಿಡಿಯೋ ವೈರಲ್‌ ಆಗಿದ್ದು, ಸರ್ಕಾರ ಎಚ್ಚೆತ್ತುಕೊಂಡು ಕೂಡಲೇ ಅಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಿದೆ.
ಗಂಗಾವತಿ ತಾಲೂಕು ಆನೆಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯ ಸಮಾಧಿ ಸ್ಮಾರಕದಲ್ಲಿ ಪ್ರಾಣಿ ವಧೆ ವಿಡಿಯೋ ವೈರಲ್‌ ಆಗಿದ್ದು, ಸರ್ಕಾರ ಎಚ್ಚೆತ್ತುಕೊಂಡು ಕೂಡಲೇ ಅಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಿದೆ.

ಗಂಗಾವತಿ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಆನೆಗೊಂದಿಯಲ್ಲಿರುವ ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯ ಸ್ಮಾರಕ ನಿರ್ಲಕ್ಷಿಸಲ್ಪಟ್ಟ ಕಾರಣ ಅಲ್ಲಿ ನಿರಂತರ ಪ್ರಾಣಿವಧೆ ನಡೆಯುತ್ತಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆದ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದೆ. ಸ್ಮಾರಕ ಸ್ವಚ್ಛಗೊಳಿಸಿ ಸೂಕ್ತ ಭದ್ರತೆಯನ್ನು ಒದಗಿಸಿದೆ. ಸ್ಮಾರಕದ ಮೇಲೆ ಪ್ರಾಣಿ ವಧೆ ಮಾಡಿದ ವಿಡಿಯೊ ಸಾಮಾಜಿಕ ತಾಣಗಳಲ್ಲಿ ಹರಿದಾಡಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ. ವೈಷ್ಣವಿ ಅವರು ಇಲಾಖೆಗೆ ವರದಿ ಕೇಳಿದ್ದರು. ಇನ್ನೊಂದೆಡೆ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ವಿಡಿಯೋ ಇರುವ ಟ್ವೀಟ್ ಅನ್ನು ಶೇರ್ ಮಾಡಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.

ಶ್ರೀಕೃಷ್ಣದೇವ ರಾಯನ ಸಮಾಧಿಯಲ್ಲಿ ಪ್ರಾಣಿವಧೆ ವಿಡಿಯೋ ವೈರಲ್

ಆನೆಗೊಂದಿಯಲ್ಲಿರುವ 64 ಕಂಬಗಳ ಮಂಟಪ ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವ ರಾಯನ ಸಮಾಧಿ ಸ್ಮಾರಕವಾಗಿದ್ದು ನಿರ್ಲಕ್ಷಿತ ತಾಣವಾಗಿತ್ತು. ಇಲ್ಲಿ ಕೆಲವು ಪ್ರಾಣಿ ವಧೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ. ವೈಷ್ಣವಿ ಈ ವಿಚಾರಕ್ಕೆ ಸ್ಪಷ್ಟೀಕರಣ ಕೋರಿ ರಾಜ್ಯ ಪುರಾತತ್ವ ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆ ಪತ್ರ ಬರೆದಿದ್ದರು.

ಇದಕ್ಕೆ ಸ್ಪಂದಿಸಿದ ಪುರಾತತ್ವ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಜರುಗಿಸಿದರು. ಬಳಿಕ ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವ ರಾಯನ ಸಮಾಧಿ ಸ್ಮಾರಕದಲ್ಲಿ ಪ್ರಾಣಿ ವಧೆ ಮಾಡಿದ್ದರಿಂದ ಅಲ್ಲಿನ ಸ್ಥಳ ಸ್ವಚ್ಛಗೊಳಿಸಲಾಗಿದ್ದು, ತಾತ್ಕಾಲಿಕವಾಗಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ವರದಿ ಕಳುಹಿಸಿದ್ದಾರೆ.

74 ರಾಜ್ಯ ಸಂರಕ್ಷಿತ ಸ್ಮಾರಕಗಳ ಪೈಕಿ ಶ್ರೀಕೃಷ್ಣದೇವರಾಯ ಸಮಾಧಿಯೂ ಒಂದು

ಆನೆಗೊಂದಿ ಪರಿಸರದಲ್ಲಿ 74 ರಾಜ್ಯ ಸಂರಕ್ಷಿತ ಸ್ಮಾರಕಗಳಿದ್ದು ಇದರಲ್ಲಿ ಶ್ರೀಕೃಷ್ಣ ದೇವರಾಯ ಸಮಾಧಿಯ 64 ಕಂಬಗಳ ಮಂಟಪವೂ ಒಂದು. ಈ ಸ್ಥಳದಲ್ಲಿ ಮಾಂಸವನ್ನು ಕತ್ತರಿಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಲಾಗಿದೆ. ಸ್ಥಳವನ್ನು ಸ್ವಚ್ಛಗೊಳಿಸಲಾಗಿದೆ. ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ಪುರಾತತ್ತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕ ಡಾ. ಶೇಜೇಶ್ವರ ತಿಳಿಸಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ; ಯತ್ನಾಳ್ ಟ್ವೀಟ್‌

ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ.

ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ [ASI] ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ; ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ; ಕಲೆ,ಸಾಹಿತ್ಯ ರಂಗಗಳ ಪೋಷಕ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ? ಎಂದು ಪ್ರಶ್ನಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌, ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ, ಮಾಂಸವನ್ನು ಮಾರುತ್ತ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ ಎಂದು ಆಗ್ರಹಿಸಿದ್ದರು.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.