Fact Check: ಫ್ಯಾಕ್ಟ್‌ ಚೆಕ್‌ ಮಾಡಿ, ಸುಳ್ಳು ಸುದ್ದಿ ಹರಡಬೇಡಿ, ಸಿಎಂ ಸಿದ್ದರಾಮಯ್ಯ ಸಲಹೆ
ಕನ್ನಡ ಸುದ್ದಿ  /  ಕರ್ನಾಟಕ  /  Fact Check: ಫ್ಯಾಕ್ಟ್‌ ಚೆಕ್‌ ಮಾಡಿ, ಸುಳ್ಳು ಸುದ್ದಿ ಹರಡಬೇಡಿ, ಸಿಎಂ ಸಿದ್ದರಾಮಯ್ಯ ಸಲಹೆ

Fact Check: ಫ್ಯಾಕ್ಟ್‌ ಚೆಕ್‌ ಮಾಡಿ, ಸುಳ್ಳು ಸುದ್ದಿ ಹರಡಬೇಡಿ, ಸಿಎಂ ಸಿದ್ದರಾಮಯ್ಯ ಸಲಹೆ

Press Day ಬೆಂಗಳೂರಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ( Press day) ಸಿಎಂ ಸಿದ್ದರಾಮಯ್ಯ( CM Siddaramaiah) ಭಾಗಿಯಾದರು.

ಬೆಂಗಳೂರಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಬೆಂಗಳೂರಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬೆಂಗಳೂರು: ಸಾಮಾಜಿಕ ಮಾಧ್ಯಮ ಎನ್ನುವುದು ಈಗ ಪ್ರತಿಯೊಬ್ಬರ ಬದುಕಿನ ಅವಿಭಾಜ್ಯ ಅಂಗವೇ ಆಗಿದೆ. ತಂತ್ರಜ್ಞಾನದ ಫಲವಾಗಿ ಇದೆಲ್ಲಾ ನಮಗೆ ಲಭ್ಯವಾಗಿದೆ. ಆದರೆ ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಸಿ.ಎಂ.ಸಿದ್ದರಾಮಯ್ಯ ಸಲಹೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ ಜಾಲ ತಾಣ ಇರಲೇಬಾರದು ಎಂದು ವಾದಿಸುವವನು ನಾನಲ್ಲ. ಸಮಾಜದಲ್ಲಿ ಏನು ಆಗುತ್ತಿದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದುಕೊಳ್ಳಬೇಕಾಗುತ್ತದೆ. ಆದರೆ ಸುಳ್ಳು ಸುದ್ದಿ ಹರಡುವುದನ್ನುತಡೆಯಬೇಕು.ಸುದ್ದಿ ಹಾಕುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ತಂತ್ರಜ್ಞಾನದಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಬಾರದು. ಅದರಿಂದ ಒಳಿತಾಗಬೇಕು. ಇದು ತಂತ್ರಜ್ಞಾನ ಬಳಕೆ ಮಾಡುವವರ ಮೇಲೆ ಬಿಟ್ಟಿದೆ. ಇದನ್ನು ಪ್ರತಿಯೊಬ್ಬರು ಗಮನ ಹರಿಸುವುದು ಸೂಕ್ತ ಎಂದು ಸೂಚಿಸಿದರು.

ಮದ್ಯಪ್ರಿಯರಿಗೆ ನಿರಾಸೆ, ಮದ್ಯ ಉತ್ಪಾದಕ ಕಂಪನಿಗಳ ಅಸಹಕಾರ; ಪ್ರೀಮಿಯಂ ಮದ್ಯದ ದರ ಇಳಿಕೆ ಮುಂದೂಡಿಕೆ, ಇಂದಿನಿಂದ ಅಗ್ಗವಾಗಬೇಕಿದ್ದ ಮದ್ಯ

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್‌ ಚೆಕ್‌( Fact check) ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ. ಪೊಲೀಸರೂ ಕೂಡ ಈ ಬಗ್ಗೆ ಪರಿಶೀಲಿಸಲಿದ್ದಾರೆ ಎಂದರು.

ಧರ್ಮಪ್ರಚಾರಕರಾಗಿ ಬಂದಿದ್ದಂತಹ ಮೋಗ್ಲಿಂಗ್‌ ಎನ್ನುವವರು ಪತ್ರಿಕಾ ದಿನಾಚರಣೆಯನ್ನು ಆರಂಭಿಸಿದರು. 1896ರ ಜುಲೈ 1ರಂದು ಇದು ಶುರುವಾಯಿತು. ಈಗಲೂ ಅದು ಮುಂದುವರೆದಿದೆ ಎಂದು ಹೇಳಿದರು.

ಹಿಂದೆ ಪತ್ರಿಕೆ. ರೇಡಿಯೋ ಮೂಲಕ ಮಾಹಿತಿ ಪಡೆಯಲಾಗುತ್ತಿತ್ತು. ಈಗ ಸಾಮಾಜಿಕ ಜಾಲತಾಣಗಳ ಮೂಲಕ ಸುದ್ದಿ, ವಿಡಿಯೋಗಳು ವೇಗವಾಗಿ ಜನರನ್ನು ತಲುಪಲಿದೆ. ಇದಕ್ಕೆ ಜನರೂ ಕೂಡ ಹೊಂದಿಕೊಂಡಿದ್ದಾರೆ. ಪತ್ರಿಕೆಗಳು, ರೇಡಿಯೋ, ಟಿವಿ ಚಾನೆಲ್‌, ಡಿಜಿಟಲ್‌ ಮಾಧ್ಯಮಗಳ ಮೂಲಕ ಮಾಹಿತಿ ಪಡೆಯಲಾಗುತ್ತಿದೆ. ವಿಶ್ವಾಸಾರ್ಹತೆ ಬಹುಮುಖ್ಯ, ಕೆಲವೊಂದು ಸುದ್ದಿ ಕೆಟ್ಟ ಪರಿಣಾಮ ಬೀರಬಹುದು. ಕೆಲವೊಮ್ಮೆ ಒಳಿತೂ ಆಗಲಿದೆ. ಸರಿಯಾಗಿ ಬಳಸಿಕೊಳ್ಳುವುದು ನಮ್ಮ ಕೈಯಲ್ಲಿದೆ. ಫೇಕ್‌ ನ್ಯೂಸ್‌ನಿಂದ ಅನಾಹುತವೇ ಹೆಚ್ಚಾಗಲಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣವನ್ನು ನೋಡುವುದನ್ನೇ ನಾನು ಬಿಟ್ಟಿದ್ದೇನೆ. ಮೊಬೈಲ್‌ ಫೋನ್‌ ಅನ್ನು ನಾನು ಇಟ್ಟುಕೊಂಡಿಲ್ಲ. ಆರು ತಿಂಗಳು ಇಟ್ಟುಕೊಂಡಿದ್ದೆ. ರಾತ್ರಿಯೆಲ್ಲಾ ಕರೆ ಬರುತ್ತಿದ್ದವು. ನಿದ್ರೆ ಮಾಡಲು ಬಿಡುತ್ತಿರಲಿಲ್ಲ. ಗನ್‌ ಮ್ಯಾನ್‌, ಪಿಎಗಳ ಮೊಬೈಲ್‌ ಮೂಲಕ ಮಾತನಾಡುತ್ತೇನೆ. ಸಾಮಾಜಿಕ ಮಾಧ್ಯಮದಲ್ಲಿ ಏನಾಗುತ್ತಿದೆ ಎನ್ನುವುದನ್ನು ನನ್ನ ಮಗ ಹೇಳುತ್ತಾನೆ. ಸರ್ಕಾರದ ಇರುವ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಬರುವುದನ್ನು ಗಮನಿಸುತ್ತೇನೆ ಎಂದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

Whats_app_banner