Bangalore News: ಬಿಎಂಟಿಸಿಗೆ ಬರಲಿವೆ ಬಿಎಸ್6 ಡೀಸೆಲ್ ನ 840 ಬಸ್ಗಳು, ಸಚಿವ ಸಂಪುಟ ಒಪ್ಪಿಗೆ, ಪ್ರತಿ ಬಸ್ನ ದರವೆಷ್ಟು?
Cabinet Decisions ಕರ್ನಾಟಕ ಸಚಿವ ಸಂಪುಟವು ಬಿಎಂಟಿಸಿಯಲ್ಲಿ ಬಸ್ ಖರೀದಿ ಅನುಮತಿ ಸೇರಿ ಹಲವು ನಿರ್ಣಯಗಳನ್ನು ಹಲವು ನಿರ್ಣಯ ಕೈಗೊಂಡಿದೆ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಂಚರಿಸುವ ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( BMTC) ಗೆ ಹೊಸ ಬಸ್ಗಳು ಸೇರ್ಪಡೆಯಾಗಲಿವೆ. ಅದರಲ್ಲೂ ಅತ್ಯಾಧುನಿಕ ಬಿಎಸ್ ಡೀಸೆಲ್ ಬಸ್ಗಳನ್ನಿ ಖರೀದಿಸುವುದಕ್ಕೆ ಕರ್ನಾಟಕ ಸರ್ಕಾರವು ಒಪ್ಪಿಗೆ ನೀಡಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಸಂಬಂಧಿಸಿದ ಅನುಮತಿಯನ್ನು ನೀಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 840 ಬಿ.ಎಸ್-6 ಡೀಸೆಲ್ ಬಸ್ಸುಗಳನ್ನು ಒಟ್ಟು ರೂ.363.82 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಸರಬರಾಜಾಗಿರುವ 20 ಬಸ್ಸುಗಳಿಗೆ ಪ್ರತಿ ಬಸ್ಗೆ ರೂ.41.72 ಲಕ್ಷಗಳಂತೆ ಒಟ್ಟು ರೂ.835.00 ಲಕ್ಷಗಳ ಪರಿಷ್ಕೃತ ವೆಚ್ಚವನ್ನು ಭರಿಸಲು ಒಪ್ಪಿಗೆ ನೀಡಲಾಗಿದೆ. 820 ಬಸ್ಸುಗಳನ್ನು ಪ್ರತಿ ಬಸ್ಗೆ ರೂ.43.35 ಲಕ್ಷಗಳಂತೆ ಒಟ್ಟು ರೂ.355.47 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಅಂಗೀಕಾರ ದೊರೆತಿದೆ.
ಸಚಿವ ಸಂಪುಟದ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ.ಪಾಟೀಲ್ ಅವರು ಸಭೆಯ ವಿವರಗಳನ್ನು ನೀಡಿದರು.
ಕೋವಿಡ್-19 ಕಾರಣದಿಂದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 20(1)(ಸಿ) ಅನ್ನು ಸಡಿಲಿಸಿ, ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಹೇರೂರು ಗ್ರಾಮದ ಸ.ನಂ. 105 ರಲ್ಲಿ 5-00 ಎಕರೆ ಜಮೀನನ್ನು ಗುಬ್ಬಿ ತಾಲ್ಲೂಕಿನಲಿ ಬಸ್ ಘಟಕ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಉಚಿತವಾಗಿ ಮಂಜೂರು ಮಾಡಲು ಸಚಿವ ಸಂಪುಟ ಅನುಮೋದಿಸಿದೆ ಎಂದು ಹೇಳಿದರು.
ಇತರೆ ಅನುಮೋದನೆಗಳು
1.ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ .2023ರ ನವೆಂಬರ್ 04 ರಲ್ಲಿ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ “To bring all urban and Local Bodies Election wing under the control of DPAR” ಎಂಬ ಶಿಫಾರಸ್ಸನ್ನು ಕೈಬಿಡುವುದು. ಹಾಗೂ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ.
2.ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು,ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು; ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ 2020ರ ಏಪ್ರಿಲ್ ನಿಂದ 2022ರ ಅಂತ್ಯದ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ.
3.5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು 28ನೇ ಫೆಬ್ರವರಿ 2025 ರವರೆಗೆ ವಿಸ್ತರಿಸುವ ಬಗ್ಗೆ ಹಾಗೂ ಡಿಸೆಂಬರ್ 2024ರ ಒಳಗೆ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ತಿಳಿಸುವ ಬಗ್ಗೆ ಅನುಮೋದನೆ ನೀಡಿದೆ.
4.563 ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳಿಗೆ ಪ್ರಯೋಗಾಲಯಗಳನ್ನು ಅಗತ್ಯವಿರುವ ಸಾಮಗ್ರಿಗಳನ್ನು ರೂ.2964.20 ಲಕ್ಷಗಳು ಹಾಗೂ ರೂ.2402.28 ಲಕ್ಷಗಳ ಔಷಧಿಗಳು ಒಟ್ಟು ರೂ.53.66 ಕೋಟಿಗಳ 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಭರಿಸಿ ಕೆಟಿಪಿಪಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಖರೀದಿಸಿ ಸರಬರಾಜು ಮಾಡಲು ಸಚಿವ ಸಂಪುಟ ಒಪ್ಪಿದೆ.
5.2024-25ನೇ ಸಾಲಿನ ಆಯವ್ಯಯ ಕಂಡಿಕೆ 114ರ ಘೋಷಣೆಯನ್ವಯ 100 ಹಾಸಿಗೆಗಳ ಸಾಮಥ್ರ್ಯದ 07 ತಾಲ್ಲೂಕು ಆಸ್ಪತ್ರೆಗಳ (ಆನೇಕಲ್, ಹೊಸಕೋಟೆ, ಖಾನಾಪುರ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ, ಯಳಂದೂರು ತಾಲ್ಲೂಕುಗಳು) ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ರೂ.256.15 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
6.ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾದ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಹಾಗೂ ವಿವಿಧ ವೃಂದದ ಒಟ್ಟು 158 ಹುದ್ದೆಗಳನ್ನು ಸೃಜಿಸಲು; ಹೆಚ್ಚುವರಿ 217 ಹುದ್ದೆಗಳನ್ನು ಕಡಿಮೆ ಒತ್ತಡ ಇರುವ ಸ್ಥಳಗಳಿಂದ ಅವಶ್ಯವಿರುವ ಕೇಂದ್ರಗಳಿಗೆ ಸ್ಥಳಾಂತರಿಸಲುನಿರ್ಣಯಿಸಿದೆ.
7.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಸ್ತುತ ಇರುವ ಕಟ್ಟಡದ ಉನ್ನತೀಕರಣ ಹಾಗೂ ಹೆಚ್ಚುವರಿ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ರೂ.30.00 ಕೋಟಿ ಅಂದಾಜು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಅನುಮತಿ ನೀಡಿದೆ.
8.ಕೊಪ್ಪಳ ಜಿಲ್ಲೆ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಎರಡನೇ ಹಂತದ/ಹೆಚ್ಚುವರಿ ಕಾಮಗಾರಿಗಳ ಪರಿಷ್ಕೃತ ಮೊತ್ತ ರೂ.59.32 ಕೋಟಿಗಳ ಅಂದಾಜಿಗೆ ಅನುಮೋದನೆ ನೀಡಿದೆ..
9.ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ “ಕಾನೂನು ಮತ್ತು ನೀತಿ-2023” ಪ್ರಸ್ತಾವನೆಗೆ ಕರ್ನಾಟಕ ಸರ್ಕಾರದ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಅನುಸೂಚಿ-1ರ ಅಂಶ 28ರನ್ವಯ ಸಚಿವ ಸಂಪುಟ ಅನುಮೋದನೆ ನೀಡಿದೆ.
10.ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಧಾರ್ಮಿಕ ಮತ್ತು ಇನ್ನಿತರೆ ಕಾರ್ಯ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಮೂಡಿಗೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದ ಸ.ನಂ.434 ರಲ್ಲಿ 20 ಗುಂಟೆ “ಗೋಮಾಳ” ಜಮೀನನ್ನು ಬದಲಿಸಿ ನೀಡಲು ಅನುಮತಿಸಿದೆ.
11.ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ಕರಡು ನಿಯಮಗಳನ್ನು ಪ್ರಕಟಿಸಿ ಬಾಧಿತರಾಗುವವರಿಂದ ಆಕ್ಷೇಪಣೆ / ಸಲಹೆಗಳನ್ನು ಆಹ್ವಾನಿಸಲು; ಹಾಗೂ ಕೌನ್ಸಲಿಂಗ್ ಮೂಲಕ ವರ್ಗಾವಣೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
12ಇಂದಿರಾ ಕಿಚನ್-ಕಮ್- ಕ್ಯಾಂಟೀನ್ಗಳಿಗೆ ಹೊಸ ಮೆನುವಿನಂತೆ ಅಡುಗೆ ಉಪಕರಣ ಹಾಗೂ ಪೀಠೋಪಕರಣಗಳನ್ನು ಒಟ್ಟು ರೂ.84.58 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ.
13.ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆ ಹಂತ-2ನ್ನು ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮೊತ್ತ ರೂ.2000.00 ಕೋಟಿಗಳ ಯೋಜನಾ ಅಂದಾಜಿನಲ್ಲಿ ರಾಜ್ಯ ಸರ್ಕಾರದ ಪಾಲಿನ ಶೇ.7.5 ರಷ್ಟು ಮೊತ್ತ ರೂ.150.00 ಕೋಟಿಗಳು, ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ಶೇ. 7.5 ರಷ್ಟು ಮೊತ್ತ ರೂ.150.00 ಕೋಟಿಗಳು ಹಾಗೂ ಯುಐಡಿಎಫ್ ನಿಂದ ಸಾಲದ ರೂಪದಲ್ಲಿ ಶೇ.85 ರಷ್ಟು ಮೊತ್ತ ರೂ.1700.00 ಕೋಟಿಗಳಲ್ಲಿ 2024-25ನೇ ಸಾಲಿನಿಂದ 2026-27ನೇ ಸಾಲಿನವರೆಗೆ ಮೂರು ವರ್ಷಗಳ ಅವಧಿಯಲ್ಲಿ ಪೌರಾಡಳಿತ ನಿರ್ದೇಶನಾಲಯದಿಂದ ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಲು; ಸಚಿವ ಸಂಪುಟ ಅನುಮೋದಿಸಿದೆ.
14. ಬಾಗಲಕೋಟೆ ಜಿಲ್ಲೆಮುಧೋಳ ತಾಲ್ಲೂಕಿನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2024-25ನೇ ಹಂಗಾಮಿನಿಂದ 30 ವರ್ಷಗಳ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.
