Bidar Flights: ಬೀದರ್ ವಿಮಾನಯಾನ ಸೇವೆ ಪುನಾರಂಭಕ್ಕೆ 2 ವಾರದಲ್ಲಿ ವರದಿಗೆ ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  Bidar Flights: ಬೀದರ್ ವಿಮಾನಯಾನ ಸೇವೆ ಪುನಾರಂಭಕ್ಕೆ 2 ವಾರದಲ್ಲಿ ವರದಿಗೆ ಸೂಚನೆ

Bidar Flights: ಬೀದರ್ ವಿಮಾನಯಾನ ಸೇವೆ ಪುನಾರಂಭಕ್ಕೆ 2 ವಾರದಲ್ಲಿ ವರದಿಗೆ ಸೂಚನೆ

Bangalore Bidar Flights ಬೆಂಗಳೂರು ಹಾಗೂ ಬೀದರ್‌ ನಡುವೆ ಮತ್ತೆ ವಿಮಾನ ಸಂಚಾರ ಆರಂಭಿಸುವ ಚರ್ಚೆಗಳು ನಡೆದಿವೆ.

ಬೆಂಗಳೂರು ಬೀದರ್‌ ನಡುವೆ ವಿಮಾನಯಾನ ಆರಂಭಿಸುವ ಕುರಿತು ಸಚಿವರಾದ ಎಂ.ಬಿ,.ಪಾಟೀಲ್‌, ಈಶ್ವರ ಖಂಡ್ರೆ, ರಹೀಮ್‌ ಖಾನ್‌ ಚರ್ಚಿಸಿದರು.
ಬೆಂಗಳೂರು ಬೀದರ್‌ ನಡುವೆ ವಿಮಾನಯಾನ ಆರಂಭಿಸುವ ಕುರಿತು ಸಚಿವರಾದ ಎಂ.ಬಿ,.ಪಾಟೀಲ್‌, ಈಶ್ವರ ಖಂಡ್ರೆ, ರಹೀಮ್‌ ಖಾನ್‌ ಚರ್ಚಿಸಿದರು.

ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆ ಬೀದರ್‌ ಹಾಗೂ ಬೆಂಗಳೂರು ನಡುವೆ ಮತ್ತೆ ವಿಮಾನ ಯಾನ ಆರಂಭಿಸಿರುವ ಕುರಿತು ಚರ್ಚೆಗಳು ಶುರುವಾಗಿವೆ. ಆದಷ್ಟು ಬೇಗನೇ ಈ ಎರಡು ನಗರಗಳ ನಡುವೆ ನಿತ್ಯ ವಿಮಾನ ಸೇವೆ ಆರಂಭಿಸುವ ಕುರಿತು ಪರಿಶೀಲನೆಗಳು ನಡೆದಿವೆ. ಸ್ಥಗಿತಗೊಂಡಿರುವ ಬೀದರ್ – ಬೆಂಗಳೂರು ನಾಗರಿಕ ವಿಮಾನಯಾನ ಪುನಾರಂಭಿಸುವ ಕುರಿತಂತೆ ವಿವಿಧ ವಿಮಾನಯಾನ ಸೇವೆ ಪೂರೈಕೆದಾರರೊಂದಿಗೆ ಚರ್ಚಿಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟ ಸೂಚನೆ ನೀಡಿದ್ದಾರೆ.

ಬೀದರ್ ಉಸ್ತುವಾರಿ ಮತ್ತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸಚಿವರು ಈ ಸೂಚನೆ ನೀಡಿದರು.

ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಸೇರಿದ ಗಡಿ ಜಿಲ್ಲೆ ಬೀದರ್ ಗೆ ವಿಮಾನಯಾನ ಸೇವೆ ಕಲ್ಪಿಸಬೇಕು ಎಂಬ ಜನರ ಹೋರಾಟಕ್ಕೆ ಮಣಿದು 2020ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ವಿಮಾನ ನಿಲ್ದಾಣದಲ್ಲಿಯೇ ನಾಗರಿಕ ವಿಮಾನಯಾನ ಸೇವೆ ಆರಂಭಿಸಲಾಗಿತ್ತು. ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ 2022ರಲ್ಲಿ ಪುನಾರಂಭವಾಗಿತ್ತು. ಈಗ ಮತ್ತೆ ಕಳೆದ ಡಿಸೆಂಬರ್ ನಿಂದ ಸಂಪೂರ್ಣ ಸ್ಥಗಿತಗೊಂಡಿದೆ ಎನ್ನುವುದು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ವಿವರಣೆ.

ಸೇವಾ ಪೂರೈಕೆದಾರ ಸಂಸ್ಥೆಗಳು, ತಮಗೆ ಉಡಾನ್ ಸಬ್ಸಿಡಿ ನಿಲ್ಲಿಸಿರುವ ಕಾರಣ ವಿಮಾನ ಸೇವೆ ಒದಗಿಸಲು ಸಾಧ್ಯವಿಲ್ಲ. ಮತ್ತೆ ಸಬ್ಸಿಡಿ ನೀಡುವುದಾದರೆ ಸೇವೆ ಒದಗಿಸಲು ಸಿದ್ಧ ಎನ್ನುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದಲೇ ಸಬ್ಸಿಡಿ ಹಣ ಭರಿಸುವ ಕುರಿತಂತೆ ವಿಮಾನಯಾನ ಸೇವಾ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿ, ಜಿಲ್ಲೆಯ ಜನರಿಗೆ ಅಗ್ಗದ ದರದಲ್ಲಿ ನಾಗರಿಕ ವಿಮಾನಯಾನ ಸೇವೆ ಪುನಾರಂಭಿಸಬೇಕು ಎನ್ನುವುದು ಈಶ್ವರ ಖಂಡ್ರೆ ಅವರು ನೀಡಿರುವ ಸಲಹೆ.

ಇದಕ್ಕೆ ಸ್ಪಂದಿಸಿದ ಎಂ.ಬಿ. ಪಾಟೀಲ್, ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಮೂಲ ಸೌಕರ್ಯ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಹಿರಿಯ ಐಎಎಸ್‌ ಡಾ.ಬಿ.ಸಿ. ಸತೀಶ್‌, ಅಧಿಕಾರಿಗಳಾದ ಮತ್ತಿತರರು ಪಾಲ್ಗೊಂಡಿದ್ದರು.

Whats_app_banner