ಜಲಮಂಡಳಿ ಕೊಳವೆ ಮಾರ್ಗ ದುರಸ್ತಿ: ಜನವರಿ 23ರಂದು ಬೆಂಗಳೂರು ನಗರದ ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು ಜಲಮಂಡಳಿಯಿಂದ ಪೈಪ್ಲೈನ್ ದುರಸ್ತಿ ಕಾರ್ಯ ಇರುವುದರಿಂದ ಗುರುವಾರದಂದು ಬೆಂಗಳೂರಿನ ಹಲವು ಬಡಾವಣೆಗಳ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.

ಬೆಂಗಳೂರು: ಬೆಂಗಳೂರು ನಗರದ ಪ್ರಮುಖ ಬಡಾವಣೆಗಳಲ್ಲಿ ಗುರುವಾರದಂದು ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 4ನೇ ಹಂತ, 2ನೇ ಹೆಗ್ಗನಹಳ್ಳಿಯಿಂದ ಜಿಕೆವಿಕೆ ಕಡೆಗೆ ಸಾಗುವ 1800 ಮಿಮೀ ವ್ಯಾಸದ ನೀರಿನ ಮುಖ್ಯ ಕೊಳವೆಯ ನೀರು ನಿಲುಗಡೆ ಮಾಡುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ 2025ರ ಜನವರಿ 23ರ ಬೆಳಿಗ್ಗೆ 05 ರಿಂದ ಜ.24 ರ ಬೆಳಿಗ್ಗೆ05ರವರೆಗೆ ಸುಮಾರು 24 ಗಂಟೆಗಳ ಕಾಲ ಈ ಕೆಳಕಂಡ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ವಿವಿಧೆಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಪ್ರದೇಶಗಳ ವಿವರ ಹೀಗಿದೆ. ಆರ್.ಆರ್. ನಗರ, ಐಡಿಯಲ್ ಹೋಮ್ಸ್, ಕೆಂಚೇನಹಳ್ಳಿ, ಹಲಗೆ ವಡೇರನಹಳ್ಳಿ, ಕೋಡಿಪಾಳ್ಯ, ಚನ್ನಸಂದ್ರ, ಕೆಂಗೇರಿ, ಕೆಂಗೇರಿ ಉಪನಗರ, ನಾಗದೇವನಹಳ್ಳಿ, ಮರಿಯಪ್ಪನ ಪಾಳ್ಯ, ನಾಗರಭಾವಿ, ಎಸ್.ಎಂ.ವಿ ಲೇಔಟ್ – 1 ರಿಂದ 9 ನೇ ಬ್ಲಾಕ್, ಮಲ್ಲತಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ರಾಜಗೋಪಾಲನಗರ, ಲಕ್ಷ್ಮಿ ದೇವಿನಗರ, ಲಗ್ಗೇರೆಯಲ್ಲಿ ನೀರು ಅಂದು ಸರಬರಾಜು ಆಗುವುದಿಲ್ಲ.
ಇದಲ್ಲದೇ ಪೀಣ್ಯ ಕೈಗಾರಿಕಾ ಪ್ರದೇಶ, ಪೀಣ್ಯ, ಟಿ.ದಾಸರಹಳ್ಳಿ, ನೆಲಗದರನಹಳ್ಳಿ, ಹೆಚ್.ಎಂ.ಟಿ ಲೇಔಟ್, ಬಗಲಗುಂಟೆ, ಎಂ.ಇ.ಐ ಲೇಔಟ್, ಅಬ್ಬಿಗೇರೆ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು, ಕಾಫಿ ಬೋರ್ಡ್ ಲೇಔಟ್, ಕೆಂಪಾಪುರ, ಯಲಹಂಕ ಓಲ್ಡ್ & ನ್ಯೂ ಟೌನ್, ಕೋಗಿಲು, ವಿದ್ಯಾರಣ್ಯಪುರ, ಸಿಂಗಾಪುರ, ಜಾಲಹಳ್ಳಿ, ಬಿ.ಇ.ಎಲ್ ರಸ್ತೆ, ಮುತ್ಯಾಲನಗರ, ಜೆ.,ಪಿ ಪಾರ್ಕ್, ದಾಸರಹಳ್ಳಿ, ರಾಚೇನಹಳ್ಳಿ, ಮಹಾಲಕ್ಷ್ಮಿ ಲೇಔಟ್, ಸುಬ್ರಮಣ್ಯನಗರ, ಗಾಯತ್ರಿನಗರ, ಜಿ.ಸಿ.ನಗರ, ಕುರುಬರಹಳ್ಳಿ, ನಂದಿನಿ ಲೇಔಟ್, ಪ್ರಕಾಶನಗರ, ಗೊರುಗುಂಟೆಪಾಳ್ಯ, ಕಾಮಾಕ್ಷಿಪಾಳ್ಯ, ಬಸವೇಶ್ವನಗರ, ಶಿವನಹಳ್ಳಿ, ಮಂಜುನಾಥನಗರ, ಶಂಕರಮಠ, ವiಹಾಲಕ್ಷ್ಮಿಪುರಂ, ಶಂಕರನಗರ, ಕಮಲಾನಗರ, ಶಕ್ತಿಗಣಪತಿನಗರ, ವಿಜಯನಗರ, ಆರ್.ಪಿ.ಸಿ ಲೇಔಟ್, ಚೋಳರಪಾಳ್ಯ, ಹಂಪಿನಗರ, ಸಣ್ಣಕ್ಕಿಬಯಲು, ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ನೀರು ಸರಬರಾಜು ಅಂದು ಇರುವುದಿಲ್ಲ.
ನೀರು ಬಂದಾಗ ಸಂಗ್ರಹಿಸಿಟ್ಟುಕೊಂಡು ಬೆಂಗಳೂರಿನ ಈ ಭಾಗ ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.
