ಬೇಸಿಗೆ ರಜೆ ಹಿನ್ನೆಲೆ; ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ಹೆಚ್ಚುವರಿ ರೈಲು ಟ್ರಿಪ್, ಸಮಯ ಪುನರ್‌ ನಿಗದಿ
ಕನ್ನಡ ಸುದ್ದಿ  /  ಕರ್ನಾಟಕ  /  ಬೇಸಿಗೆ ರಜೆ ಹಿನ್ನೆಲೆ; ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ಹೆಚ್ಚುವರಿ ರೈಲು ಟ್ರಿಪ್, ಸಮಯ ಪುನರ್‌ ನಿಗದಿ

ಬೇಸಿಗೆ ರಜೆ ಹಿನ್ನೆಲೆ; ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ಹೆಚ್ಚುವರಿ ರೈಲು ಟ್ರಿಪ್, ಸಮಯ ಪುನರ್‌ ನಿಗದಿ

ಬೇಸಿಗೆ ರಜೆ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ. ಈ ಹಿನ್ನೆಲೆ ಬೆಂಗಳೂರಿನಿಂದ ಹೊರಡುವ ಹಾಗೂ ಕೆಲವು ನಿರ್ದಿಷ್ಟ ಊರುಗಳಿಂದ ಬೆಂಗಳೂರಿಗೆ ಬರುವ ರೈಲುಗಳ ಸಂಚಾರದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ. (ವರದಿ: ಎಚ್‌. ಮಾರುತಿ)

ಬೇಸಿಗೆ ರಜೆ ಹಿನ್ನೆಲೆ; ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ಹೆಚ್ಚುವರಿ ರೈಲು ಟ್ರಿಪ್, ಸಮಯ ಪುನರ್‌ ನಿಗದಿ
ಬೇಸಿಗೆ ರಜೆ ಹಿನ್ನೆಲೆ; ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ಹೆಚ್ಚುವರಿ ರೈಲು ಟ್ರಿಪ್, ಸಮಯ ಪುನರ್‌ ನಿಗದಿ

ಬೆಂಗಳೂರು: ಬೇಸಿಗೆ ರಜೆ ಹಿನ್ನೆಲೆ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಕಾರಣದಿಂದ ಮೇ 1ರಿಂದ ಜಾರಿಗೆ ಬರುವಂತೆ ಕೆಲವು ರೈಲುಗಳ ವೇಗದ ಮಿತಿಯನ್ನು ಹೆಚ್ಚಿಸಲಾಗಿದೆ ಮತ್ತು ಸಮಯವನ್ನು ಪುನರ್‌ ನಿಗದಿ ಪಡಿಸಲಾಗಿದೆ. ಕೆಎಸ್‌ಆರ್‌ ಬೆಂಗಳೂರು- ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ ಪ್ರೆಸ್‌ (ರೈಲಿನ ಸಂಖ್ಯೆ 12725), ಧಾರವಾಡ-ಕೆಎಸ್‌ಆರ್‌ ಬೆಂಗಳೂರು ಸಿದ್ದಗಂಗಾ ಡೈಲಿ ಎಕ್ಸ್‌ ಪ್ರೆಸ್‌ (ರೈಲಿನ ಸಂಖ್ಯೆ 12726) ಮತ್ತು ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ ಪ್ರೆಸ್‌ (ರೈಲಿನ ಸಂಖ್ಯೆ 16239) ಈ ಮೂರು ರೈಲುಗಳ ಸಮಯವನ್ನು ಪುನರ್‌ ನಿಗದಿ ಪಡಿಸಲಾಗಿದೆ.

ರೈಲುಗಳಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾನ್ಪುರ ಸೆಂಟ್ರಲ್‌ ನಡುವೆ ವಿಶೇಷ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.

ರೈಲು ಸಂಖ್ಯೆ 04131 ಕಾನ್ಪುರ ಸೆಂಟ್ರಲ್‌ ನಿಲ್ದಾಣದಿಂದ ಪ್ರತಿ ಭಾನುವಾರ ರಾತ್ರಿ 7.50ಕ್ಕೆ ಹೊರಟು ಪ್ರತಿ ಮಂಗಳವಾರ ಸಂಜೆ 6.30ಕ್ಕೆ ಬೆಂಗಳೂರು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. ಜೂನ್‌ 1ರ ವರೆಗೆ ಈ ರೈಲು ಸಂಚರಿಸಲಿದೆ. 04132 ನಂಬರ್‌ನ ರೈಲು ಏಪ್ರಿಲ್‌ 30 ರಿಂದ ಜೂನ್‌ 4 ರವರೆಗೆ ಬೆಂಗಳೂರು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಪ್ರತಿ ಬುಧವಾರ 7.10 ಕ್ಕೆ ಹೊರಟು ಪ್ರತಿ ಶುಕ್ರವಾರ ಮುಂಜಾನೆ 2 ಗಂಟೆಗೆ ಕಾನ್ಪುರ ಸೆಂಟ್ರಲ್‌ ನಿಲ್ದಾಣವನ್ನು ತಲುಪಲಿದೆ.

ಎರಡೂ ಮಾರ್ಗಗಳಲ್ಲಿ ಫತೇಪುರ್, ಪ್ರಯಾಗ್‌ ರಾಜ್‌, ಶಂಕರಗಢ, ಮಾಣಿಕ್‌ ಪುರ, ಸತ್ನಾ, ಕಾಂತಿ, ಜಬಲ್‌ಪುರ, ಇಟರ್ಸಿ, ನಾಗ್ಪುರ, ಬಲ್ಲಾರ್‌ ಶಾ, ಸಿರ್ಪುರ್ ಕಾಗಜ್‌ ನಗರ್‌, ಬೆಲ್ಲಂಪಲ್ಲಿ, ಮಂಚಿರ್ಯಾಲ್‌, ವಾರಂಗಲ್‌, ಖಮ್ಮಂ, ವಿಜಯವಾಡ, ಚಿರಾಲಾ, ಒಂಗೊಲೆ, ನೆಲ್ಲೂರು, ಗುಡೂರು, ಪೆರಂಬೂರು, ಅರಕ್ಕೋಣಂ, ಕಾಟ್ಪಾಡಿ, ಜೊಲಾರ್‌ ಪೆಟ್ಟಿ, ಬಂಗಾರಪೇಟೆ ಮತ್ತು ಕೆಆರ್‌ ಪುರದಲ್ಲಿ ನಿಲುಗಡೆ ಮಾಡಲಿದೆ.

ಬೇಸಿಗೆ ರಜೆ; ರೈಲುಗಳ ವಿಶೇಷ ಟ್ರಿಪ್

ಬೇಸಿಗೆ ರಜೆಯಲ್ಲಿ ಹೆಚ್ಚಳವಾಗುವ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಪ್ರಯತ್ನವಾಗಿ ನೈಋತ್ಯ ರೈಲ್ವೆ ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲು ನಿರ್ಧರಿಸಿದೆ.

ಬೆಂಗಳೂರಿನಿಂದ ಬೆಳಗಾವಿ, ಯಶವಂತಪುರದಿಂದ ವಿಜಯಪುರ ಮತ್ತು ಬೆಂಗಳೂರಿನಿಂದ ಮಧುರೈ ನಡುವೆ ಈ ವಿಶೇಷ ರೈಲುಗಳು ಸಂಚರಿಸಲಿವೆ. ಹಾಗಾದರೆ ಈ ವಿಶೇಷ ರೈಲುಗಳು ಸಂಚರಿಸುವ ದಿನಾಂಕ, ಸಮಯ ಮತ್ತು ಯಾವ ಸ್ಟೇಷನ್‌ಗಳಲ್ಲಿ ನಿಲುಗಡೆ ಎಂಬ ವಿವಿರಗಳನ್ನು ನೋಡೋಣ.

1.ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ರೈಲು

ಎಸ್ಎಂವಿಟಿ (ನಂ 06551) ವಿಶೇಷ ಎಕ್ಸ್‌ ಪ್ರೆಸ್‌ ರೈಲು ಬೆಂಗಳೂರಿನಿಂದ ಬೆಳಗಾವಿ ನಡುವೆ ಸಂಚರಿಸಲಿದೆ. ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಏಪ್ರಿಲ್ 30 ಮತ್ತು ಮೇ 2 ರಂದು ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿಯನ್ನು ತಲುಪಲಿದೆ.

ಎಸ್ಎಂವಿಟಿ ವಿಶೇಷ ಎಕ್ಸ್‌ ಪ್ರೆಸ್‌ ರೈಲು (ನಂ. 06552) ಬೆಳಗಾವಿಯಿಂದ ಮೇ 1 ಮತ್ತು 3 ರಂದು ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗಿನ ಜಾವ 4.30ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಈ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್.ಎಂ.ಎಂ. ಹಾವೇರಿ, ಎಸ್.ಎಸ್.ಎಸ್. ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂದಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

2. ಯಶವಂತಪುರ–ವಿಜಯಪುರ ಎಕ್ಸ್‌ಪ್ರೆಸ್‌ ಟ್ರೈನ್

ಯಶವಂತಪುರ- ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 06561) ರೈಲು ಯಶವಂತಪುರದಿಂದ ಏಪ್ರಿಲ್ 3 ರಂದು ರಾತ್ರಿ 10 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 2.05 ಕ್ಕೆ ವಿಜಯಪುರ ತಲುಪಲಿದೆ. ಅಲ್ಲಿಂದ ಮೇ 1 ರಂದು ವಿಜಯಪುರ–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 06562) ಸಂಜೆ 7ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11.15 ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿವೆ.

3. ಎಸ್ಎಂವಿಟಿ ಬೆಂಗಳೂರು–ಮಧುರೈ ವಿಶೇಷ ರೈಲು

ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು– ಮಧುರೈ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06521) ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಏಪ್ರಿಲ್ 30 ರಂದು ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 6.15 ಕ್ಕೆ ಮಧುರೈ ತಲುಪಲಿದೆ. ಮಧುರೈ– ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ವಿಶೇಷ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 06522) ಮಧುರೈಯಿಂದ ಮೇ 1, ರಂದು ಬೆಳಗ್ಗೆ 9 ಗಂಟೆಗೆ ಹೊರಟು, ಅದೇ ದಿನ ಸಂಜೆ 7.50 ಕ್ಕೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರನ್ನು ತಲುಪಲಿದೆ.

ಈ ರೈಲುಗಳು ಉಭಯ ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗುಲ್ ಮತ್ತು ಕೊಡೈಕೆನಾಲ್ ರೋಡ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ ಮತ್ತು ನಿರ್ಗಮನದ ವೇಳಾಪಟ್ಟಿಯನ್ನು ತಿಳಿಯಲು ಭಾರತೀಯ ರೈಲ್ವೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು ಅಥವಾ ನಿಮ್ಮ ಸಮೀಪದ ರೈಲ್ವೇ ಬುಕಿಂಗ್ ಕೌಂಟರ್ ಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ: https://swr.indianrailways.gov.in/view_detail.jsp?lang=0&dcd=8462&id=0,4,268. ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.