ವಿಮಾನ ಪ್ರಯಾಣಿಕರೇ ಗಮನಿಸಿ; ಬೆಂಗಳೂರು ಏರ್‌ಪೋರ್ಟ್‌ಗೆ 3 ಗಂಟೆ ಮುಂಚಿತವಾಗಿ ಬರುವಂತೆ ಮನವಿ
ಕನ್ನಡ ಸುದ್ದಿ  /  ಕರ್ನಾಟಕ  /  ವಿಮಾನ ಪ್ರಯಾಣಿಕರೇ ಗಮನಿಸಿ; ಬೆಂಗಳೂರು ಏರ್‌ಪೋರ್ಟ್‌ಗೆ 3 ಗಂಟೆ ಮುಂಚಿತವಾಗಿ ಬರುವಂತೆ ಮನವಿ

ವಿಮಾನ ಪ್ರಯಾಣಿಕರೇ ಗಮನಿಸಿ; ಬೆಂಗಳೂರು ಏರ್‌ಪೋರ್ಟ್‌ಗೆ 3 ಗಂಟೆ ಮುಂಚಿತವಾಗಿ ಬರುವಂತೆ ಮನವಿ

ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಭದ್ರತಾ ಪ್ರೋಟೋಕಾಲ್‌ಗಳನ್ನು ಪಾಲಿಸುವ ಸಲುವಾಗಿ ತಪಾಸಣೆಗೆ ಹೆಚ್ಚುವರಿ ಸಮಯ ಅಗತ್ಯವಿರುವುದರಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ 3 ಗಂಟೆ ಮುಂಚಿತವಾಗಿ ಪ್ರಯಾಣಿಕರು ಬರುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ವಿಮಾನ ಪ್ರಯಾಣಿಕರೇ ಗಮನಿಸಿ; ಬೆಂಗಳೂರು ಏರ್‌ಪೋರ್ಟ್‌ಗೆ 3 ಗಂಟೆ ಮುಂಚಿತವಾಗಿ ಬರುವಂತೆ ಮನವಿ
ವಿಮಾನ ಪ್ರಯಾಣಿಕರೇ ಗಮನಿಸಿ; ಬೆಂಗಳೂರು ಏರ್‌ಪೋರ್ಟ್‌ಗೆ 3 ಗಂಟೆ ಮುಂಚಿತವಾಗಿ ಬರುವಂತೆ ಮನವಿ

ಬೆಂಗಳೂರು: ಪ್ರಯಾಣಿಕರು ತಮ್ಮ ನಿಗದಿತ ವಿಮಾನ ನಿರ್ಗಮನ ಸಮಯಕ್ಕಿಂತ ಕನಿಷ್ಠ ಮೂರು ಗಂಟೆಗಳ ಮೊದಲು ಏರ್‌ಪೋರ್ಟ್‌ಗೆ ಬರಬೇಕು ಎಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಶುಕ್ರವಾರ (ಮೇ.9) ಪ್ರಯಾಣಿಕರಿಗೆ ಮನವಿ ಮಾಡಿದೆ. ಅತ್ತ ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯುದ್ಧದ ಸನ್ನಿವೇಶ ಎದುರಾಗಿದೆ. ಹೀಗಾಗಿ ರಾಷ್ಟ್ರೀಯ ಭದ್ರತಾ ಎಚ್ಚರಿಕೆಯ ದೃಷ್ಟಿಯಿಂದ ತೀವ್ರವಾದ ಭದ್ರತಾ ಮಾನದಂಡಗಳನ್ನು ಪೂರೈಸಲು ಹೆಚ್ಚುವರಿ ಸಮಯದ ಅಗತ್ಯವಿರುವ ದೃಷ್ಟಿಯಿಂದ ಈ ಸಲಹೆ ನೀಡಲಾಗಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ರಾಷ್ಟ್ರವ್ಯಾಪಿ ಹೆಚ್ಚಿದ ಭದ್ರತಾ ಎಚ್ಚರಿಕೆಗೆ ಪ್ರತಿಕ್ರಿಯೆಯಾಗಿ, ನಾವು ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವರ್ಧಿತ ಸ್ಕ್ರೀನಿಂಗ್ ಕಾರ್ಯವಿಧಾನಗಳನ್ನು ಜಾರಿಗೆ ತಂರಲಾಗಿದೆ. ಸುಗಮ ಚೆಕ್-ಇನ್, ಭದ್ರತೆ ಮತ್ತು ಬೋರ್ಡಿಂಗ್ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು, ಪ್ರಯಾಣಿಕರು ತಮ್ಮ ವಿಮಾನ ಹೊರಡುವ ಮೂರು ಗಂಟೆಗಳ ಮೊದಲು ಬರಲು ಸೂಚಿಸಲಾಗಿದೆ, ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಯಾಣಿಕರು ಯಾವುದೇ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ವಿಮಾನದ ವಿವರಗಳನ್ನು ಪರಿಶೀಲಿಸಬೇಕು ಎಂದು ಬೆಂಗಳೂರು ವಿಮಾನ ನಿಲ್ದಾಣ ಸಲಹೆ ನೀಡಿದೆ. ಈ ಸಮಯದಲ್ಲಿ ಪ್ರಯಾಣಿಕರ ಸಹಕಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಉದ್ವಿಗ್ನ ಪರಿಸ್ಥಿತಿ

ಅತ್ತ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (ಬಿಸಿಎಎಸ್) ಎಲ್ಲಾ ವಿಮಾನಗಳಿಗೆ ಬಿಗಿ ತಪಾಸಣೆ, ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಗಳಿಗೆ ಸಂದರ್ಶಕರಿಗೆ ಪ್ರವೇಶ ನಿಷೇಧ ಸೇರಿದಂತೆ ಒಟ್ಟಾರೆ ಭದ್ರತೆಯನ್ನು ಹೆಚ್ಚಿಸಿರುವುದರಿಂದ ಕಠಿಣ ಕ್ರಮಗಳನ್ನು ವಿಧಿಸಲು ಪ್ರೇರೇಪಿಸಿದೆ.

ಕೆಲವು ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ದೃಢಪಡಿಸಿದೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಭಾರತೀಯ ವಾಯುಪಡೆ ನಿಖರ ದಾಳಿ ನಡೆಸಿದ ನಂತರ ಮಿಲಿಟರಿ ಚಟುವಟಿಕೆ ಹೆಚ್ಚಿದೆ. ಉತ್ತರ ಭಾರತದ ಹಲವಾರು ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.