ಕನ್ನಡ ಸುದ್ದಿ  /  Karnataka  /  Bengaluru Man Arrested For Killing His Paralysed Wife

Bengaluru Crime: ಹೆಂಡತಿಗೆ ಪಾರ್ಶ್ವವಾಯು.. ನೋಡಿಕೊಳ್ಳಲಾಗದೆ ಆಕೆಯ ಜೀವವನ್ನೇ ತೆಗೆದ ಪತಿರಾಯ

ಕಳೆದ ಎರಡು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಬಂಧಿತನನ್ನು ಬೆಂಗಳೂರು ಹೊರವಲಯದ ತುರಹಳ್ಳಿ ನಿವಾಸಿ ಶಂಕರಪ್ಪ (60) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಶಿವಮ್ಮ (50) ಕಳೆದ ಎರಡು ವರ್ಷಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು ಹಾಸಿಗೆ ಹಿಡಿದಿದ್ದರು. ತನ್ನ ಎರಡೂ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದರಿಂದ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಆಕೆಗೆ ಪೂರ್ಣ ಪ್ರಮಾಣದ ಆರೈಕೆಯ ಅಗತ್ಯವಿತ್ತು.

ಆರೋಪಿ ಶಂಕರಪ್ಪ ಒಂದು ವರ್ಷದಿಂದ ನಿರ್ಮಾಣ ಹಂತದಲ್ಲಿರುವ ಕಟ್ಟಡದ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ. ಶಂಕರಪ್ಪತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳೊಂದಿಗೆ ತುರಹಳ್ಳಿಯಲ್ಲಿ ವಾಸಿಸುತ್ತಿದ್ದರು. ಹೆಂಡತಿಯ ಆರೈಕೆ ಮಾಡಲು ಹಿಂದೇಟು ಹಾಕುತ್ತಿದ್ದ, ದಿನಕಳೆದಂಗೂ ಆಕೆಯನ್ನು ದ್ವೇಷಿಸಲು ಆರಂಭಿಸಿದ್ದ.

ಕಳೆದ ಭಾನುವಾರ ಮಧ್ಯಾಹ್ನ ಆರೋಪಿ ತನ್ನ ಪತ್ನಿಯನ್ನು ಎತ್ತಿ ನೀರು ತುಂಬಿದ್ದ 9 ಅಡಿ ಆಳದ ಸಂಪ್‌ಗೆ ಎಸೆದು ಹತ್ಯೆ ಮಾಡಿದ್ದಾನೆ. ಹೊರಗೆ ಹೋಗಿದ್ದ ದಂಪತಿಯ 11 ವರ್ಷದ ಮಗ ಮನೆಗೆ ಹಿಂತಿರುಗಿದಾಗ ಸಂಪ್‌ನಲ್ಲಿ ತಾಯಿಯ ಶವ ನೋಡಿದ್ದಾನೆ.

ಅವನು ಹತ್ತಿರದ ಗ್ಯಾರೇಜ್‌ಗೆ ಧಾವಿಸಿ ಅಲ್ಲಿದ್ದವರ ಸಹಾಯವನ್ನು ಕೋರಿದ್ದಾನೆ. ನಂತರ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತಲಘಟ್ಟಪುರ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಗಮನಿಸಬಹುದಾದ ಇತರೆ ಕ್ರೈಂ ಸುದ್ದಿಗಳು

ಗಂಡನ ಮೇಲಿನ ಕೋಪಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದ ತಾಯಿ

ಪತಿಯ ಮೇಲಿನ ಕೋಪಕ್ಕೆ ತನ್ನ ಒಂದೂವರೆ ವರ್ಷದ ಹೆಣ್ಣು ಮಗುವನ್ನೇ ಹೆತ್ತ ತಾಯಿ ಕತ್ತು ಹಿಸುಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಔರಂಗಪುರ ಭಿಕ್ಕು ಗ್ರಾಮದಲ್ಲಿ ನಡೆದಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್ಕಿಸಿ

ಕೇರಳ ಮೂಲದ ಯುವತಿ ಮೇಲೆ ಬೆಂಗಳೂರಲ್ಲಿ ಅತ್ಯಾಚಾರ.. ಮೂವರ ಬಂಧನ

ಕೇರಳ ಮೂಲದ 23 ವರ್ಷದ ಯುವತಿ ಮೇಲೆ ಬೈಕ್ ಟ್ಯಾಕ್ಸಿ ಚಾಲಕ ಮತ್ತು ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಎಸಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ಓದಿಗೆ ಇಲ್ಲಿ ಕ್ಲಿಕ್​ ಮಾಡಿ

ತನ್ನ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಪುಟ್ಟ ಮಗಳ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದು ಪ್ರತೀಕಾರ

ನ್ನ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್ಕಿಸಿ

IPL_Entry_Point