Bengaluru Rain: ವಿಮಾನ ಸಂಚಾರಕ್ಕೂ ಅಡ್ಡಿಯಾದ ಬೆಂಗಳೂರು ಮಳೆ, 10 ವಿಮಾನಗಳ ಮಾರ್ಗ ಬದಲಾವಣೆ
ಕನ್ನಡ ಸುದ್ದಿ  /  ಕರ್ನಾಟಕ  /  Bengaluru Rain: ವಿಮಾನ ಸಂಚಾರಕ್ಕೂ ಅಡ್ಡಿಯಾದ ಬೆಂಗಳೂರು ಮಳೆ, 10 ವಿಮಾನಗಳ ಮಾರ್ಗ ಬದಲಾವಣೆ

Bengaluru Rain: ವಿಮಾನ ಸಂಚಾರಕ್ಕೂ ಅಡ್ಡಿಯಾದ ಬೆಂಗಳೂರು ಮಳೆ, 10 ವಿಮಾನಗಳ ಮಾರ್ಗ ಬದಲಾವಣೆ

ಕಳೆದ ಕೆಲವು ಗಂಟೆಗಳಿಂದ ಬೆಂಗಳೂರಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ವಿಮಾನ ಸಂಚಾರಕ್ಕೂ ಅಡ್ಡಿ ಉಂಟಾಗುತ್ತದೆ. 10 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ವಿಮಾನ ಸಂಚಾರಕ್ಕೂ ಅಡ್ಡಿಯಾದ ಬೆಂಗಳೂರು ಮಳೆ, 10 ವಿಮಾನಗಳ ಮಾರ್ಗ ಬದಲಾವಣೆ (ಸಾಂಕೇತಿಕ ಚಿತ್ರ)
ವಿಮಾನ ಸಂಚಾರಕ್ಕೂ ಅಡ್ಡಿಯಾದ ಬೆಂಗಳೂರು ಮಳೆ, 10 ವಿಮಾನಗಳ ಮಾರ್ಗ ಬದಲಾವಣೆ (ಸಾಂಕೇತಿಕ ಚಿತ್ರ)

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟು ಹೋಗಿದ್ದು ಬೆಂಗಳೂರು ಜನತೆಗೆ ವರುಣ ತಂಪೆರೆದಿದ್ದಾನೆ. ಕಳೆದ ಕೆಲವು ಗಂಟೆಗಳಿಂದ ಬೆಂಗಳೂರಿನ ಬಹುತೇಕ ಕಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ಗಾಳಿ ಹಾಗೂ ಗುಡುಗು ಕೂಡ ಸೇರಿಕೊಂಡಿದೆ. ಮಳೆಯೊಂದಿಗೆ ಬೆಂಗಳೂರು ನಗರದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಮೊದಲ ಮಳೆಯು ವಿಮಾನ ಸಂಚಾರಕ್ಕೂ ಅಡ್ಡಿ ಉಂಟು ಮಾಡಿದೆ.

ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ವಿಮಾನ ಸಂಚಾರಕ್ಕೆ ಅಡೆತಡೆ ಉಂಟಾಗಿದ್ದು, ಕನಿಷ್ಠ 10 ವಿಮಾನಗಳನ್ನು ಚೆನ್ನೈ ಕಡೆಗೆ ತಿರುಗಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ವಿಮಾನಗಳ ವಿಳಂಬ ಮತ್ತು ವಿಮಾನ ಮಾರ್ಗ ಬದಲಾವಣೆಯಾಗಿದ್ದು, ಪ್ರಯಾಣಿಕರು ಮತ್ತು ವಿಮಾನ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರಿದೆ. ಇಂಡಿಗೊ ಮತ್ತು ಏರ್ ಇಂಡಿಯಾ ಸೇರಿದಂತೆ ಪ್ರಮುಖ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ, ಮನವಿ ಮಾಡಿವೆ.

ಹವಾಮಾನದ ಪರಿಸ್ಥಿತಿ ವಿಮಾನ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಪ್ರಯಾಣಿಕರಿಗೆ ಭರವಸೆ ನೀಡಿದೆ ಇಂಡಿಗೋ, ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ.

‘ನಾವು ಹವಾಮಾನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪರಿಸ್ಥಿತಿಗೆ ತಕ್ಕಂತೆ ಬದಲಾವಣೆಗಳನ್ನೂ ಮಾಡಿಕೊಳ್ಳುತ್ತೇವೆ, ಅಲ್ಲದೇ ಈ ಬಗ್ಗೆ ಪ್ರಯಾಣಿಕರಿಗೆ ಅಪ್‌ಡೇಟ್ ಮಾಡುತ್ತೇವೆ. ರಿಯಲ್ ಟೈಮ್ ಇ‌ನ್ಫಾರ್ಮೇಷನ್‌ನಲ್ಲಿ ವಿಮಾನದ ಮಾಹಿತಿಯನ್ನು ತಿಳಿದುಕೊಳ್ಳುತ್ತಿರಿ. ನಮ್ಮ ವೆಬ್‌ಸೈಟ್ ಮೂಲಕ ಗ್ರಾಹಕರಿಗೆ ಅನುಕೂಲವಾಗುವಂತೆ ಮರುಬುಕಿಂಗ್ ಮತ್ತು ಮರುಪಾವತಿ ಆಯ್ಕೆಗಳು ಲಭ್ಯವಿದೆ‘ ಎಂದು ಇಂಡಿಗೋ ಹೇಳಿದೆ.

ಭಾರೀ ಮಳೆಯಿಂದಾಗಿ ಉಂಟಾದ ವಾಯು ಸಂಚಾರ ದಟ್ಟಣೆಯಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ ಎಂದು ಏರ್ ಇಂಡಿಯಾ ದೃಢಪಡಿಸಿದೆ. ‘ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ಎಲ್ಲಾ ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ಬೇಕು‘ ಎಂದು ಏರ್ ಇಂಡಿಯಾ ಎಕ್ಸ್‌ನಲ್ಲಿ ಮನವಿ ಮಾಡಿದೆ.

ಇಂದು ಸಂಜೆಯಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಕಾದ ಕೆಂಡದಂತಾಗಿದ್ದ ಭೂಮಿ ಈಗ ಕೊಂಚ ತಂಪೇರಿದೆ. ಆದರೆ ವಿಮಾನ ವ್ಯತ್ಯಯ, ಟ್ರಾಫಿಕ್‌, ರಸ್ತೆಗಳಿಗೆ ನೀರು ನುಗ್ಗಿರುವುದು ಈ ಎಲ್ಲಾ ಸಮಸ್ಯೆಗಳಿಂದ ಮಹಾನಗರಿಯ ಜನತೆ ಕಂಗಾಲಾಗಿದ್ದಾರೆ.

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner