ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲು; ಶನಿವಾರ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು, ಕಳೆದ 5 ವರ್ಷಗಳ ದಾಖಲೆ ಬ್ರೇಕ್

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲು; ಶನಿವಾರ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು, ಕಳೆದ 5 ವರ್ಷಗಳ ದಾಖಲೆ ಬ್ರೇಕ್

ಕರ್ನಾಟಕದ ಕೆಲವು ಭಾಗಗಳಲ್ಲಿ ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕೆಲವು ಪ್ರದೇಶಗಳಲ್ಲಿ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಈಗಾಗಲೇ ಎಚ್ಚರಿಕೆ ನೀಡಿದೆ.

2024ರ ಮಾರ್ಚ್ 30 ರಂದು ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದು 5 ವರ್ಷಗಳ ಗರಿಷ್ಠ ಉಷ್ಣಾಂಶ ಆಗಿದೆ.
2024ರ ಮಾರ್ಚ್ 30 ರಂದು ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದು 5 ವರ್ಷಗಳ ಗರಿಷ್ಠ ಉಷ್ಣಾಂಶ ಆಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bangalore Temperature) ಬಿಸಿಲ ಝಳಕ್ಕೆ ತತ್ತರಿಸಿ ಹೋಗಿದೆ. ಬೆಂಗಳೂರಿನಲ್ಲಿ ಶನಿವಾರ (ಮಾರ್ಚ್ 30) 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮಾರ್ಚ್‌ ತಿಂಗಳಲ್ಲಿ ದಾಖಲಾಗಿರುವ ಗರಿಷ್ಠ ತಾಪಮಾನ ಕಳೆದ 5 ವರ್ಷಗಳಲ್ಲೇ ಅಧಿಕ ಎಂದು ಹೇಳಲಾಗಿದೆ. ಮಾರ್ಚ್ 29ರ ಶುಕ್ರವಾರ 36.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ವರದಿಗಳ ಪ್ರಕಾರ, 2017ರ ಮಾರ್ಚ್ ತಿಂಗಳಲ್ಲಿ ಬೆಂಗಳೂರಿನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು, ಇದು ಇಲ್ಲಿಯವರೆಗೆ ತಿಂಗಳಲ್ಲಿ ಅತಿ ಹೆಚ್ಚು ತಾಪಮಾನವಾಗಿದೆ. ಇದಕ್ಕೂ ಮುನ್ನ 1997ರ ಮಾರ್ಚ್‌ನಲ್ಲಿ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಕರ್ನಾಟಕದ ಕೆಲವು ಭಾಗಗಳಲ್ಲಿ ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ರಾಯಚೂರಿನಲ್ಲಿ 44 ಡಿಗ್ರಿ ಸೆಲ್ಸಿಯಸ್ ಅಧಿಕ ಉಷ್ಣಾಂಶವಾಗಿದೆ. ಕೆಲವು ಪ್ರದೇಶಗಳಲ್ಲಿ ಸಂಭವನೀಯ ಬಿಸಿಯ ಅಲೆಗಳ ಬಗ್ಗೆ ಐಎಂಡಿ ಈಗಾಗಲೇ ಎಚ್ಚರಿಕೆ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಇಂದು (ಮಾರ್ಚ್ 31, ಭಾನುವಾರ) ಬೆಂಗಳೂರಿನಲ್ಲಿ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ಮಧ್ಯಾಹ್ನ 1 ಗಂಟೆಯ ನಂತರ ಸ್ವಲ್ಪ ಕಡಿಮೆಯಾಗಿದೆ. ಅಂದರೆ 3 ಗಂಟೆಯ ಸಮಯದಲ್ಲಿ 35 ಡಿಗ್ರಿ ಸೆಲ್ಸಿಯಸ್ ಹಾಗೂ ಸಂಜೆ 5 ರ ನಂತರ 34 ರಿಂದ 32 ಡಿಗ್ರಿ ಸೆಲ್ಸಿಯಸ್ ಅಸುಪಾಸಿನಲ್ಲಿರಲಿದೆ. ಕಳೆದ ಹಲವು ದಿನಗಳಲ್ಲಿ ಕಲಬುರಗಿ, ರಾಯಚೂರು, ಯಾದಗರಿ, ಬೆಳಗಾವಿ ಸೇರಿದಂತೆ ಹಲವು ಕಡೆಗಳಲ್ಲಿ ಬಿಸಿ ಏರಿಕೆ ಮಟ್ಟದಲ್ಲೇ ಇದೆ.

ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈಗಾಗಲೇ ಈ ತಿಂಗಳ ಆರಂಭದಲ್ಲಿ ದುರ್ಬಲ ವರ್ಗದ ಜನರಿಗೆ ಸಾರ್ವಜನಿಕ ಆರೋಗ್ಯ ಸಲಹೆಯನ್ನು ನೀಡಿದೆ. ಮುಂದಿನ ಕೆಲವು ದಿನಗಳವರೆಗೆ ತಾಪಮಾನವು ಒಂದೇ ಆಗಿರುವುದರಿಂದ ಜನರು ಹೆಚ್ಚು ಜಾಗರೂಕರಾಗಿರಬೇಕು ಎಂದು ಸರ್ಕಾರ ಸೂಚಿಸಿದೆ. ನಿರ್ಜಲೀಕರಣದಿಂದ ಪಾರಾಗಲು ಹೈಡ್ರೇಟ್ ಆಗಿರಲು ಮತ್ತು ದ್ರವಗಳನ್ನು ಸೇವಿಸಬೇಕು ಎಂದು ಹೇಳಿದೆ.

ಹೆಚ್ಚು ಜಾಗರೂಕರಾಗಿರುವಂತೆ ಜನರಿಗೆ ಸರ್ಕಾರ ಎಚ್ಚರಿಕೆ

ಶಿಶುಗಳು, ಗರ್ಭಿಣಿಯರು, ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿರುವ ಜನರು ಮತ್ತು ವಯಸ್ಸಾದವರಂತಹ ದುರ್ಬಲ ಜನರು ಇಂತಹ ಅಸಾಮಾನ್ಯ ತಾಪಮಾನದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಇಂಥವರು ತಲೆಗಳನ್ನು ನೇರ ಸೂರ್ಯನ ಬೆಳಕಿನಿಂದ ಮುಚ್ಚಿಡಬೇಕು, ಮೌಖಿಕ ಮರುಜಲೀಕರಣ ದ್ರಾವಣಗಳನ್ನು (ಒಆರ್‌ಎಸ್) ಸೇವಿಸುವಂತೆ ಸೂಚಿಸಿದೆ.

ಬೆಂಗಳೂರು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿರುವುದರಿಂದ, ನಗರದಲ್ಲಿ ಮಳೆಯ ಕೊರತೆಯಿಂದಾಗಿ ಹೆಚ್ಚಿನ ಕೊಳವೆಬಾವಿಗಳು ಒಣಗುವ ಸಾಧ್ಯತೆಯಿದೆ. ಮಾನ್ಸೂನ್ ಜೂನ್‌ನಲ್ಲಿ ಮಾತ್ರ ಬರುವ ನಿರೀಕ್ಷೆಯಿದೆ. ಕರ್ನಾಟಕ ಸರ್ಕಾರ ಈಗಾಗಲೇ ತೀವ್ರ ಕೊರತೆ ಇರುವ ಪ್ರದೇಶಗಳಿಗೆ ನೀರು ಪೂರೈಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಿರಂತರ ಕ್ರಮಗಳನ್ನು ಕೈಗೊಳ್ಳುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನಗಳನ್ನು ಮುಂದುವರಿಸಿದೆ.

IPL_Entry_Point

ವಿಭಾಗ