ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಆರೋಪ ಪ್ರಕರಣ; ಬಿಜೆಪಿ ಮಾಜಿ ಎಂಎಲ್‌ಸಿ ಡಿಎಸ್ ವೀರಯ್ಯ ಬಂಧನ
ಕನ್ನಡ ಸುದ್ದಿ  /  ಕರ್ನಾಟಕ  /  ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಆರೋಪ ಪ್ರಕರಣ; ಬಿಜೆಪಿ ಮಾಜಿ ಎಂಎಲ್‌ಸಿ ಡಿಎಸ್ ವೀರಯ್ಯ ಬಂಧನ

ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಆರೋಪ ಪ್ರಕರಣ; ಬಿಜೆಪಿ ಮಾಜಿ ಎಂಎಲ್‌ಸಿ ಡಿಎಸ್ ವೀರಯ್ಯ ಬಂಧನ

ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿನ 47 ಕೋಟಿ ರೂಪಾಯಿಗಳ ಅಕ್ರಮ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದಾಗುತ್ತಿದ್ದಂತೆ ಬಿಜೆಪಿಯ ಮಾಜಿ ಎಂಎಲ್‌ಸಿ ಡಿಎಸ್ ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಆರೋಪ ಪ್ರಕರಣ; ಬಿಜೆಪಿ ಮಾಜಿ ಎಂಎಲ್‌ಸಿ ಡಿಎಸ್ ವೀರಯ್ಯ ಬಂಧನ
ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಆರೋಪ ಪ್ರಕರಣ; ಬಿಜೆಪಿ ಮಾಜಿ ಎಂಎಲ್‌ಸಿ ಡಿಎಸ್ ವೀರಯ್ಯ ಬಂಧನ

ಸರ್ಕಾರದ ಸಂಸ್ಥೆಯಾಗಿರುವ ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿಮಿಟೆಡ್ (DDUTTL) ನಿಗಮ ನಿಂದ 47.10 ಕೋಟಿ ರೂಪಾಯಿಗಳ ದುರ್ಬಳಕೆ ಮಾಡಿಕೊಂಡ ಆರೋಪ ಪ್ರಕರಣದಲ್ಲಿ ಬಿಜೆಪಿ ಮಾಜಿ ಎಂಎಲ್‌ಸಿ ಡಿಎಸ್ ವೀರಯ್ಯ (DS Veeraiah Arrest) ಅವರನ್ನು ಬಂಧಿಸಲಾಗಿದೆ. ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ರದ್ದಾಗುತ್ತಿದ್ದಂತೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ವೀರಯ್ಯ ಅವರನ್ನು ಅರೆಸ್ಟ್ ಮಾಡಿದ್ದಾರೆ.

3 ವರ್ಷಗಳ ಹಿಂದೆ ಈ ಅವ್ಯವಹಾರ ನಡೆದಿದ್ದು, ಆಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಎಸ್ ವೀರಯ್ಯ ಅವರು ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿಮಿಟೆಡ್ (ಡಿಡಿಯುಟಿಟಿಎಲ್) ನಿಗಮ ಅಧ್ಯರಾಗಿದ್ದರು. 47.1 ಕೋಟಿ ರೂಪಾಯಿಗಳ ಅವ್ಯವಹಾರದಲ್ಲಿ ವೀರಯ್ಯ ಅವರ ನೇರಪಾತ್ರವನ್ನು ಸಿಐಡಿ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ. ಶುಕ್ರವಾರ (ಜುಲೈ 12) ಬೆಂಗಳೂರು ಕೋರ್ಟ್ ವೀರಯ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿತು. ಕೂಡಲೇ ಅಧಿಕಾರಿಗಳು ಆರೋಪಿತ ವೀರಯ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇದೇ ಪ್ರಕರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಎಸ್ ಶಂಕರಪ್ಪ ಅವರನ್ನು ಸಿಬಿಐ ಬಂಧಿಸಿತ್ತು. ಅಕ್ರಮ ನಡೆದಾಗ ಶಂಕರಪ್ಪ ಡಿಡಿಯುಟಿಟಿಎಲ್‌ನಲ್ಲಿ ಉಪ ನಿರ್ದೇಶಕರಾಗಿದ್ದರು. ಇವರ ಬಂಧನವಾಗುತ್ತಿದ್ದಂತೆ ಎಚ್ಚೆತ್ತ ವೀರಯ್ಯ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಟೆಂಡರ್ ಕರೆಯದೆ 2 ಕೋಟಿ ರೂಪಾಯಿಗಳ ವರೆಗಿನ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ನೀಡಿರುವ ಆರೋಪಗಳಿವೆ. ಒಟ್ಟಾರೆಯಾಗಿ 47.1 ಕೋಟಿ ರೂಪಾಯಿಗಳ ಕಾಮಗಾರಿಯ ಅವ್ಯವಹಾರ ನಡೆದಿದೆ ಎಂಬುದು ಸಿಐಡಿ ಅಧಿಕಾರಿಗಳ ವಾದವಾಗಿದೆ. ಟ್ರಕ್ ಟರ್ಮಿನಲ್‌ಗಳ ನವೀಕರಣ ಹಾಗೂ ನಿರ್ವಹಣೆ ಕಾಮಗಾರಿ ನಡೆಸದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ 47 ಕೋಟಿ 10 ಲಕ್ಷ ರೂಪಾಯಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಡಿಎಸ್ ವೀರಯ್ಯ ಮತ್ತು ಎಸ್ ಶಂಕರಪ್ಪ ಅಕ್ರಮವಾಗಿ ತಮ್ಮ ಖಾತೆಗಳಿಗೆ ಹಣವನ್ನು ರವಾನಿಸಿಕೊಂಡಿರುವುದು ಗೊತ್ತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ 765 ಕಡತಗಳನ್ನು ವಶಪಡಿಸಿಕೊಂಡಿದೆ. 380 ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಲಾದ 450 ಪುಟಗಳ ಡೇಟಾವನ್ನು ವಿಶ್ಲೇಷಣೆ ಬಳಿಕ ಅಕ್ರಮ ನಡೆದಿರುವುದನ್ನು ಪತ್ತೆಹಚ್ಚಲಾಗಿದೆ. ಡಿಡಿಯುಟಿಟಿಎಲ್‌ನಲ್ಲಿ ಸಿಎನ್ ಶಿವಪ್ರಕಾಶ್ ಅವರು ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ಇವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರ ವಿಚಾರಣೆ ಬಳಿಕ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)