ಕನ್ನಡ ಸುದ್ದಿ  /  ಕರ್ನಾಟಕ  /  Basavaraj Bommai: ಬೆಂಗಳೂರು ಮೆಟ್ರೋ ಪಿಲ್ಲರ್‌ ಕುಸಿತ: ಮೃತಪಟ್ಟವರಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

Basavaraj Bommai: ಬೆಂಗಳೂರು ಮೆಟ್ರೋ ಪಿಲ್ಲರ್‌ ಕುಸಿತ: ಮೃತಪಟ್ಟವರಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರಿನ ನಾಗವಾರದಲ್ಲಿ ಮೆಟ್ರೋ ಕಾಮಗಾರಿಯ ವೇಳೆ ಪಿಲ್ಲರ್ ಕುಸಿತದ ಅವಘಡದಿಂದಾಗಿ ಮಹಿಳೆ ಹಾಗೂ ಮಗುವಿನ ಸಾವಾಗಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 10 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಘಟನೆಯನ್ನು ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿದರು. ಈ ಕುರಿತು ಇಲ್ಲಿದೆ ಮಾಹಿತಿ.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (verified Twitter)

ಧಾರವಾಡ: ಬೆಂಗಳೂರಿನ ನಾಗವಾರದಲ್ಲಿ ಮೆಟ್ರೋ ಕಾಮಗಾರಿಯ ವೇಳೆ ಪಿಲ್ಲರ್ ಕುಸಿತದ ಅವಘಡದಿಂದಾಗಿ ಮಹಿಳೆ ಹಾಗೂ ಮಗುವಿನ ಸಾವಾಗಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 10 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಘಟನೆಯನ್ನು ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿದರು.

ಟ್ರೆಂಡಿಂಗ್​ ಸುದ್ದಿ

ಧಾರವಾಡದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಘಟನೆಯ ಮಾಹಿತಿ ಪಡೆಯಲಾಗುತ್ತಿದೆ. ಕಾಮಗಾರಿಯ ಗುತ್ತಿಗೆದಾರರು, ಅವಘಡಕ್ಕೆ ಕಾರಣ ತಿಳಿಯಲು ತನಿಖೆಯನ್ನು ನಡೆಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಮೆಟ್ರೋ ಸಂಸ್ಥೆಯಿಂದ ಮೃತಪಟ್ಟವರಿಗೆ ಪರಿಹಾರ ದೊರೆಯಲಿದೆ ಎಂದೂ ಸಿಎಂ ಇದೇ ವೇಳೆ ಭರವಸೆ ನೀಡಿದರು.

ಪ್ರಧಾನಮಂತ್ರಿ ಜನವರಿ 12ರಂದು ಹುಬ್ಬಳ್ಳಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಇನ್ನು ಮೆಟ್ರೋ ಪಿಲ್ಲರ್ ಕುಸಿತದ ಅವಘಡಕ್ಕೆ ಸರ್ಕಾರದ 40 ಪರ್ಸೆಂಟ್ ಕಮೀಷನ್ ಕಾರಣವೆಂದು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ‌ ಪ್ರತಿಕ್ರಿಯಿಸಿ ಸಿಎಂ ಬೊಮ್ಮಾಯಿ, ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡಲಾಗುತ್ತಿದೆ ಎಂದು ತಿರುಗೇಟು ನೀಡಿದರು.

ರಾಷ್ಟ್ರೀಯ ಯುವಜನೋತ್ಸವ: ಸುಮಾರು 30 ಸಾವಿರ ಯುವಕರ ನೋಂದಣಿ:

ರಾಷ್ಟ್ರೀಯ ಯುವಜನೋತ್ಸವ ಪೂರ್ವಭಾವಿ ಸಭೆ ನಡೆಸಲಾಗಿದೆ. ಒಂದು ವಾರದ ಕಾಲ ನಡೆಯುವ ಯುವಜನೋತ್ಸವಕ್ಕೆ 28 ರಾಜ್ಯಗಳಿಂದ ಯುವಕರ ತಂಡ ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ 7 ಸಾವಿರಕ್ಕಿಂತ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಕೇಂದ್ರ ಹಾಗೂ ರಾಜ್ಯ ಕ್ರೀಡಾ ಇಲಾಖೆಗಳಿಂದ ವಿವಿಧ ಚಟುವಟಿಕೆಗಳನ್ನು ಧಾರವಾಡದ ಕೆಸಿಡಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿಎಂ ಇದೇ ವೇಳೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಊಟ ವಸತಿ ವ್ಯವಸ್ಥೆಗಳನ್ನು ಮಾಡಲಾಗಿದೆ. ವಿವಿಧ ಇಲಾಖೆಗಳಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ. ಕಾರ್ಯಕ್ರಮದಲ್ಲಿ ಯುವಜನತೆಗೆ ಪ್ರಾಶಸ್ತ್ಯ ನೀಡಲಾಗುತ್ತಿದ್ದು, ಸುಮಾರು 30 ಸಾವಿರ ಜನರು ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ. ಜನವರಿ 12 ರಂದು ರಾಷ್ಟ್ರೀಯ ಯುವಜನೋತ್ಸದ ಉದ್ಘಾಟನೆಗೆ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ರೈಲ್ವೇ ಗ್ರೌಂಡ್ಸ್ ನಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುಮಾರು 7 ಸಾವಿರ ಮಕ್ಕಳಿಂದ ಕವಾಯತು ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದರು.

ರಾಷ್ಟ್ರದ ಯುವಕರಲ್ಲಿ ಭಾವೈಕ್ಯತೆ ಮೂಡಿಸಲಿದೆ:

ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಸ್ಪೂರ್ತಿದಾಯಕ ಭಾಷಣ ಮಾಡಲಿದ್ದು, ರಾಷ್ಟ್ರದ ಯುವಕರಲ್ಲಿ ಭಾವೈಕ್ಯತೆಯ ಭಾವನೆ ಮೂಡಿಸಲಿದ್ದಾರೆ. ಯುವಜನೋತ್ಸವದಲ್ಲಿ ಯುವಕರ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ ಎಂದು ಬೊಮ್ಮಾಯಿ ಹೇಳಿದರು.

ಪ್ರಧಾನಮಂತ್ರಿಗಳು ಜನಸಂಖ್ಯೆಯ ಲಾಭವನ್ನು ಗುರುತಿಸಿದವರು. ಒಂದು ಕಾಲದಲ್ಲಿ ಜನಸಂಖ್ಯೆ, ದೇಶಕ್ಕೆ ಭಾರವೆಂದು ಪರಿಗಣಿಸಲಾಗುತ್ತಿತ್ತು. ಈಗ ಜನಸಂಖ್ಯೆಯೇ ದೇಶದ ಆಸ್ತಿಯಾಗಿ ಪರಿಗಣಿಸಲಾಗುತ್ತಿದ್ದು, ದೇಶದ ಭದ್ರ ಭವಿಷ್ಯವನ್ನು ಬರೆಯಲಾಗುತ್ತಿದೆ. ಸ್ವಾಮಿ ವಿವೇಕಾನಂದರ ಜನ್ಮದಿನದಂದು ರಾಷ್ಟ್ರೀಯ ಯುವಜನೋತ್ಸವ ಅರ್ಥಪೂರ್ಣವಾಗಿ ನಡೆಯಲಿದೆ. ಚಿರಸ್ಮರಣೀಯ ಕಾರ್ಯಕ್ರಮವಾಗಿಸಲು ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ನುಡಿದರು.

ಸಂಬಂಧಿತ ಸುದ್ದಿ

HD Kumaraswamy: ಬೆಂಗಳೂರು ಮೆಟ್ರೋ ಪಿಲ್ಲರ್‌ ಕುಸಿತ ದುರಂತ: ಹೆಚ್‌ಡಿಕೆ ಸರಣಿ ಟ್ವೀಟ್‌ನಲ್ಲೇನಿದೆ?

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಉರುಳಿ ತಾಯಿ ಮತ್ತು ಮಗ ಸಾವಿಗೀಡಾದ ದುರಂತ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ, ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಎಂದು ಕಿಡಿಕಾರಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

IPL_Entry_Point

ವಿಭಾಗ