ಕನ್ನಡ ಸುದ್ದಿ  /  Karnataka  /  Congress Will Be Swept Away By The Wave Of Bjp Tsunami In Karnataka Says Cm Bommai

CM Bommai on Congress: ರಾಜ್ಯ ಬಿಜೆಪಿ ಸುನಾಮಿಯ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಲಿದೆ: ಸಿಎಂ ಬೊಮ್ಮಾಯಿ ಭವಿಷ್ಯ

ಕಾಂಗ್ರೆಸ್ ಪಕ್ಷ ಇಡೀ ರಾಷ್ಟ್ರದಲ್ಲಿ ನಿರ್ನಾಮವಾಗಿದೆ. ಇಲ್ಲಿಯೂ ನಿರ್ನಾಮವಾಗಲಿದೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಅವರು ಮಾತನಾಡಿದರು.
ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಅವರು ಮಾತನಾಡಿದರು.

ಕೊರಟಗೆರೆ(ತುಮಕೂರು): ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ಜನಬೆಂಬಲ ದೊರೆತಿದ್ದು, ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಈ ಸುನಾಮಿಯ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿ ತನ್ನ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಕೊರಟಗೆರೆ ತಾಲ್ಲೂಕಿನಲ್ಲಿ ಬಿಜೆಪಿ ಆಯೋಜಿಸಿದ್ದ ಜನಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇಡೀ ರಾಷ್ಟ್ರದಲ್ಲಿ ನಿರ್ನಾಮವಾಗಿದೆ. ಇಲ್ಲಿಯೂ ನಿರ್ನಾಮವಾಗಲಿದೆ. ಕಾಂಗ್ರೆಸ್ ಮುಳುಗುತ್ತಿರವ ಹಡಗು. ಪರಮೇಶ್ವರ್ ಅವರಿಗೆ ಅತಿ ಹೆಚ್ಚಿನ ವೈರಿಗಳು ಕಾಂಗ್ರೆಸ್ ನಲ್ಲಿದ್ದಾರೆ. ಅವರನ್ನು ಸೋಲಿಸುವ ಕೆಲಸ ಕಾಂಗ್ರೆಸ್ ಮಾಡುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ವರಿಷ್ಠರು ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಿ. ಈ ಭಾಗದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕೊರಟಗೆರೆ ತಾಲ್ಲೂಕನ್ನು ಮಾದರಿ ತಾಲ್ಲೂಕು ಆಗಿಸಲು ಸಂಕಲ್ಪ ಮಾಡಿದ್ದೇವೆ ಎಂದಿದ್ದಾರೆ.

ಕಳೆದ ಹಲವಾರು ಸಂದರ್ಭಗಳಲ್ಲಿ ಆಯ್ಕೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಂದಾಗಿ ಕೊರಟಗೆರೆ ಹಿಂದುಳಿದಿದೆ. ಈ ತಾಲ್ಲೂಕಿನ ಅಭಿವೃದ್ಧಿ ದೊಡ್ಡ ಪ್ರಮಾಣದಲ್ಲಿ ಆಗಬೇಕಿತ್ತು. ಇಲ್ಲಿನ ಜನಪ್ರತಿನಿಧಿಗಳು ಜನರನ್ನು ಮತಬ್ಯಾಂಕ್ ಮಾಡಿಕೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಹಲವಾರು ಭರವಸೆಗಳನ್ನು ನೀಡಿ ಜನರನ್ನು ಕತ್ತಲಲ್ಲಿ ಇಟ್ಟು ಹಿಂದುಳಿಯಲು ಕಾರಣರಾಗಿದ್ದಾರೆ. ಅದಕ್ಕಾಗಿ ಇಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ಸಿಎಂ ಬೊಮ್ಮಾಯಿ ಹೇಲಿದ್ದಾರೆ.

ವಿಜಯದ ರಥ ಯಾತ್ರೆ

ಗುಜರಾತ್, ಹಿಮಾಚಲ್ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶ ಬರಲಿದೆ. ನಾಳೆ ಇಷ್ಟುಹೊತ್ತಿಗೆ ಇಡೀ ಭಾರತದಲ್ಲಿ ಭಾಜಪ ಗುಜರಾತ್ ಮತ್ತು ಹಿಮಾಚಲ್ ಪ್ರದೇಶದ ವಿಜಯೋತ್ಸವವನ್ನು ಆಚರಿಸುತ್ತೇವೆ. ವಿಜಯದ ರಥ ಯಾತ್ರೆ ಕರ್ನಾಟಕದಲ್ಲಿಯೂ ಮುಂದುವರೆದು 2023 ರಲ್ಲಿ ಭಾಜಪ ವಿಜಯಶಾಲಿಯಾಗಲಿದೆ. ಪ್ರತಿ ತಾಲ್ಲೂಕು, ಜಿಲ್ಲೆಯಲ್ಲಿ ಸಭೆಗಳಲ್ಲಿ ಸೇರಿರುವ ಜನರ ಉತ್ಸಾಹ ಕಂಡು ವಿಜಯಸಂಕಲ್ಪ ಯಾತ್ರೆಯಾಗಿ ಪರಿವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ವಿಶ್ವಮಾನ್ಯತೆ

ನಮ್ಮ ಪ್ರಧಾನಿಗಳು ಇಡೀ ವಿಶ್ವದಲ್ಲಿಯೇ ಮಾನ್ಯತೆ ಪಡೆದಿದ್ದಾರೆ. ಕಾಂಗ್ರೆಸ್ಸಿನ ಪ್ರಧಾನಿಗಳು ಬೇರೆ ದೇಶಕ್ಕೆ ಹೋದರೆ ಕ್ಯಾರೇ ಎನ್ನುತ್ತಿರಲಿಲ್ಲ. ಆದರೆ ನರೇಂದ್ರ ಮೋದಿಯವರಿಗೆ ವಿಶ್ವವೇ ಮಾನ್ಯತೆ ನೀಡಿದೆ. ಅವರ ನಾಯಕತ್ವಕ್ಕೆ ಮನ್ನಣೆ ದೊರೆತಿದೆ. ಮೋದಿ ಅವರ ಕಾರ್ಯಕ್ರಮಗಳ ಪೈಕಿ ಜಲಜೀವನ್ ಮಿಷನ್ ಯೋಜನೆ ಜಾರಿ ಮಾಡಿ 10 ಕೋಟಿಗೂ ಹೆಚ್ಚು ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಒದಗಿಸಿದ್ದಾರೆ. ರಾಜ್ಯದಲ್ಲಿ 75 ವರ್ಷಗಳು ಸೇರಿ ಕೇವಲ 25 ಲಕ್ಷ ಮನೆಗಳಗೆ ನಲ್ಲಿ ಸಂಪರ್ಕ ನೀಡಿದ್ದರು. ನಮ್ಮ ಸರ್ಕಾರ ಕಳೆದ 2 ವರ್ಷಗಳಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಿದೆ. ಇದು ಅಭಿವೃದ್ಧಿ. ಒಂದೇ ವರ್ಷದಲ್ಲಿ 30 ಲಕಷ್ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಲು ಯೋಜನೆ ರೂಪಿಸಿದ್ದು, ಈಗಾಗಲೇ 13 ಲಕ್ಷ ಮನೆಗಳಿಗೆ ನೀರು ಕೊಡಲಾಗುವುದು ಎಂದರು.

ರಾಜಕೀಯ ಇಚ್ಛಾಶಕ್ತಿಯನ್ನು ತೋರಿಲ್ಲ

ಅಲ್ಪಸಂಖ್ಯಾತರು, ಹಿಂದುಳಿದವರು, ದೀನದಲಿತರ ಹೆಸರಿನಲ್ಲಿ ಕಲ್ಯಾಣ ಮಾಡುವುದಾಗಿ ಹೇಳುತ್ತಿದ್ದರು. ಯಾರೋ ಒಬ್ಬರು ಅಧಿಕಾರಿಯಿಂದ ಜನ ಉದ್ಧಾರವಾಗುವುದಿಲ್ಲ. ಹಳ್ಳಿಯಲ್ಲಿರುವ ಕೂಲಿಕಾರ, ದೀನದಲಿತರ ಬದುಕು ಉದ್ದಾರವಾಗಬೇಕು. ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿಯನ್ನು ಹೆಚ್ಚಿಸಿದೆ. ಮಲ್ಲಿಕಾರ್ಜು ಖರ್ಗೆ, ಸಿದ್ಧರಾಮಯ್ಯ ಅವರು ಯಾಕೆ ಮೀಸಲಾತಿ ಹೆಚ್ಚಿಸುವ ರಾಜಕೀಯ ಇಚ್ಛಾಶಕ್ತಿಯನ್ನು ತೋರಿಲ್ಲ. ಇದಕ್ಕಾಗಿ ಬಿಜೆಪಿ ಸರ್ಕಾರ ಬರಬೇಕಾಯಿತು ಇದನ್ನು ಮಾಡಲು. ಅವರ ಮತ ಪಡೆದು, ಅಧಿಕಾರವನ್ನು ಅನುಭವಿಸಿ, ಮನೆಗಳ ಮೇಲೆ ಮನೆ ನಿರ್ಮಾಣಮಾಡಿಕೊಂಡಿದ್ದಾರೆ. ಆದರೆ ಸಮುದಾಯದವರನ್ನು ಗುಡಿಸಿಲಲ್ಲಿಯೇ ಇಟ್ಟಿದ್ದಾರೆ. ದುಡಿಯುವ ವರ್ಗವನ್ನು ಕಡೆಗಣಿಸಲಾಗಿದೆ. ದೀನದಲಿತ, ಹಿಂದುಳಿದ ವರ್ಗದವರ ಬೆಂಬಲ ಇರುವವವರೆಗೂ ಯಾರಿಗೂ ಅಂಜುವುದಿಲ್ಲ. ಯಾವುದೇ ಅಡ್ಡಿ ಆತಂಕ ಬಂದಾಗ ನನಗೆ ಶಕ್ತಿ ತುಂಬಿದ್ದೀರಿ, ಜನಶಕ್ತಿಯ ಮುಂದೆ ಪ್ರಜಾಪ್ರಭುತ್ವದಲ್ಲಿ ಯಾವುದೇ ಶಕ್ತಿ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ವಕ್ಫ್ ಮಂಡಳಿ ಆಸ್ತಿಯನ್ನು ಕಾಂಗ್ರೆಸ್ ಲೂಟಿ

ಐದು ಸಾವಿರ ಕೋಟಿ ರೂ.ಗಳಷ್ಟು ಮುಸಲ್ಮಾನರ ವಕ್ಫ್ ಆಸ್ತಿಯನ್ನು ಕಾಂಗ್ರೆಸ್ ನವರು ತಿಂದು ತೇಗಿದ್ದಾರೆ. ಆ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಅವರ ಆಸ್ತಿಯನ್ನು ಲೂಟಿ ಮಾಡಿದ್ದಾರೆ. ಅವರ ಮತ ಕೇಳುವ ನೈತಿಕ ಹಕ್ಕಿಲ್ಲ. ಜನರಿಗೆ ಒಳಸಂಚು ಅರ್ಥವಾಗಿದೆ ಎಂದು ಆರೋಪಿಸಿದರು.

ದೇಶ ಭಕ್ತಿಯ ಪಾಠ ಕಾಂಗ್ರೆಸ್ಸಿನಿಂದ ಕಲಿಯಬೇಕಿಲ್ಲ

ರಾಹುಲ್ ಗಾಂಧಿ ಸಿಯಾ ರಾಮ್ ಎನ್ನುವುದಿಲ್ಲ ಎಂದಿದ್ದಾರೆ. ರಾಮನಲ್ಲಿ ಸೀತೆ, ಲಕ್ಷ್ಮಣ, ಹನುಮರೂ ಇದ್ದಾರೆ. ಇಷ್ಟು ಪ್ರಾಥಮಿಕ ಜ್ಞಾನ ಅವರಿಗೆ ಇಲ್ಲ. ಭಾರತ್ ಮಾತಾಕಿ ಜೈ ಎನ್ನುವುದು ಭಾಜಪದ ಘೋಷಣೆ, ನಂಬಿಕೆ ಮತ್ತು ವಿಶ್ವಾಸ. ಕಾಂಗ್ರೆಸ್ ಪಕ್ಷದ್ದು ಸೋನಿಯಾ ಮಾತಾಕಿ ಜೈ. ಜನ ಸರಿಯಾದ ಆಯ್ಕೆ ಮಾಡಿಕೊಳ್ಳಬೇಕು. ದೇಶ ಭಕ್ತಿಯ ಪಾಠ ಇವರಿಂದ ಕಲಿಯಬೇಕಿಲ್ಲ ಎಂದರು.

ಮತಾಂತರದ ಹುನ್ನಾರ

ಆಸೆ ಆಮಿಷ ತೋರಿಸಿ ಮತಾಂತರ ಮಾಡುವ ಅಂತಾರಾಷ್ಟ್ರೀಯ ಮಟ್ಟದ ಹುನ್ನಾರ ಈ ದೇಶದಲ್ಲಿ ನಡೆಯುತ್ತಿದೆ. ಅದನ್ನು ನಿಷೇಧ ಮಾಡಿದ್ದೇವೆ. ಮತಾಂತರ ನಿಷೇಧ ಕಾಯ್ದೆ ಸಂವಿಧಾನಬದ್ಧವಾಗಿದೆ ಇದನ್ನು ತರಲೇಬೇಕೆಂದು ಸುಪ್ರೀಂ ಕೋರ್ಟ್ ಹೇಳಿತು. ಕಾಂಗ್ರೆಸ್ಸಿನ ಹಲವಾರು ಹಗರಣಗಳು ಹೊರಗೆ ಬರುತ್ತಿದೆ. ಅಂದಿನ ಮುಖ್ಯಮಂತ್ರಿಗಳೂ, ಮಂತ್ರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಅದನ್ನು ಮುಚ್ಚಿಹಾಕಲು ಲೋಕಾಯುಕ್ತ ಮುಚ್ಚಿದರು. ಈಗ ಪುನ: ಮುಚ್ಚಿಹಾಕಿದ್ದ 50 ಪ್ರಕರಣಗಳನ್ನು ತೆರೆಯಲಾಗುವುದು. ಬರುವ ದಿನಗಳಲ್ಲಿ ತನಿಖೆ ಮಾಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು. ಕೊರಟಗೆರೆಯಲ್ಲಿ ಭಾಜಪ ಬೇರನ್ನು ಗಟ್ಟಿಗೊಳಿಸಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಎತ್ತಿನಹೊಳೆ ಮೂರು ಸಾವಿರ ಕೋಟಿ ರೂ.ಗಳನ್ನು ಮಂಜೂರು

ಕೊರಟಗೆರೆ ಯಲ್ಲಿ ಅಭಿವೃಧಿಯ ಹೊಳೆ ಹರಿಯಲಿದೆ. ವಿದ್ಯೆ ಮತ್ತು ಉದ್ಯೋಗಕ್ಕೆ ಒತ್ತು ನೀಡಲಾಗಿದೆ. ಕೆಳಸ್ತರದಲ್ಲಿರುವ ಮಾನವಶಕ್ತಿ ಬಳಕೆ ಮಾಡಿ ನಾಡು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಎತ್ತಿನಹೊಳೆ ಯೋಜನೆಯನ್ನು ನಮ್ಮ ಕಾಲದಲ್ಲಿ ಪ್ರಾರಂಭಿಸಿದ್ದೆವು. ಕಾಂಗ್ರೆಸ್ ಸಂಪೂರ್ಣವಾಗಿ ನಿಲ್ಲಿಸಿತು. ಯೋಜನೆಗೆ ಮೂರು ಸಾವಿರ ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಇಲ್ಲಿಯೂ ಕೂಡ ಎತ್ತಿನಹೊಳೆಯ ನೀರನ್ನು ಕೊರಟಗೆರೆ ತಾಲ್ಲೂಕಿನ ನೀರನ್ನು ತುಂಬಿಸುವ ಸಂಕಲ್ಪ ಮಾಡುತ್ತಿದ್ದೇವೆ.

ನಾವು ಪ್ರಾರಂಭಿಸಿದ ಯೋಜನೆಯನ್ನು ನಾವೇ ಮುಕ್ತಾಯಮಾಡುತ್ತೇವೆ. ಈ ಭಾಗದ ಬರಪೀಡಿತರ ಸಮಸ್ಯೆಗಳು ತಿಳಿದಿದೆ. ತುಮಕೂರು ಜಿಲ್ಲೆ ಅಭಿವೃದ್ಧಿಯ ಪರವಾಗಿರುವ ಜಿಲ್ಲೆ. ಬೆಂಗಳೂರಿನ ನಂತರ ಅತ್ಯಂತ ವೇಗವಾಗಿ ಅಭಿವೃದ್ಧಿಯಾಗಲಿದೆ. ಅಭಿವೃದ್ಧಿಯಲ್ಲಿ ಕೊರಟಗೆರೆ ಪಾಲು ಪಡೆಯಲು ಬಿಜೆಪಿಯನ್ನು ಆಯ್ಕೆ ಮಾಡಬೇಕು. ಕಾಂಗ್ರೆಸ್ಸಿಗರನ್ನು ಅವರೇ ಸೋಲಿಸುತ್ತಾರೆ. ಇದು ಪರಮೇಶ್ವರ್ ಅವರಿಗೂ ತಿಳಿದಿದೆ. ನಾವು ಜನರ ಬಳಿಗೆ ಹೋಗಿ ಬಿಜೆಪಿ ಗೆಲ್ಲಿಸೋಣ ಎಂದು ಹೇಳಿದ್ದಾರೆ.

IPL_Entry_Point