ಮಂಗಳೂರಿನ 2, ಉಡುಪಿಯ 1 ಶಾಲೆಗೆ ಹುಸಿ ಬಾಂಬ್ ಬೆದರಿಕೆ; ಪೊಲೀಸರ ತಪಾಸಣೆ, ಮಕ್ಕಳು ಸುರಕ್ಷಿತ
ಕನ್ನಡ ಸುದ್ದಿ  /  ಕರ್ನಾಟಕ  /  ಮಂಗಳೂರಿನ 2, ಉಡುಪಿಯ 1 ಶಾಲೆಗೆ ಹುಸಿ ಬಾಂಬ್ ಬೆದರಿಕೆ; ಪೊಲೀಸರ ತಪಾಸಣೆ, ಮಕ್ಕಳು ಸುರಕ್ಷಿತ

ಮಂಗಳೂರಿನ 2, ಉಡುಪಿಯ 1 ಶಾಲೆಗೆ ಹುಸಿ ಬಾಂಬ್ ಬೆದರಿಕೆ; ಪೊಲೀಸರ ತಪಾಸಣೆ, ಮಕ್ಕಳು ಸುರಕ್ಷಿತ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯ 3 ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿವೆ. ಪೊಲೀಸರು ತಪಾಸಣೆ ನಡೆಸಿ ಇದು ಹುಸಿ ಬೆದರಿಕೆ ಎಂದು ಹೇಳಿದ್ದಾರೆ.

ಮಂಗಳೂರಿನ 2, ಉಡುಪಿಯ 1 ಶಾಲೆಗೆ ಹುಸಿ ಬಾಂಬ್ ಬೆದರಿಕೆ (ಉಡುಪಿಯ ಶಾರದಾ ಇಂಟರ್‌ನ್ಯಾಷನಲ್ ವಸತಿ ಶಾಲೆ)
ಮಂಗಳೂರಿನ 2, ಉಡುಪಿಯ 1 ಶಾಲೆಗೆ ಹುಸಿ ಬಾಂಬ್ ಬೆದರಿಕೆ (ಉಡುಪಿಯ ಶಾರದಾ ಇಂಟರ್‌ನ್ಯಾಷನಲ್ ವಸತಿ ಶಾಲೆ)

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎರಡು ಶಾಲೆಗಳು ಹಾಗೂ ಉಡುಪಿ ಜಿಲ್ಲೆಯ ಒಂದು ಶಾಲೆಗೆ ಸೋಮವಾರ (ಜನವರಿ 27) ಬಾಂಬ್ ಬೆದರಿಕೆಯ ಇ-ಮೇಲ್ ಬಂದ ಕುರಿತು ವರದಿಯಾಗಿದೆ. ಪೊಲೀಸರು ತಪಾಸಣೆ ನಡೆಸಿ ಇದೊಂದು ಹುಸಿ ಬೆದರಿಕೆ ಎಂದು ಖಚಿತಪಡಿಸಿದ್ದಾರೆ. ಆದರೂ ಭದ್ರತೆಯ ದೃಷ್ಟಿಯಿಂದ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಿಕೊಳ್ಳುವತ್ತ ಮುಂದಾಗಿದ್ದಾರೆ.

ಇ-ಮೇಲ್ ಮೂಲಕ ಬೆದರಿಕೆ ಬಂತು

ಉಡುಪಿಯ ಶಾರದಾ ಇಂಟರ್‌ನ್ಯಾಷನಲ್ ವಸತಿ ಶಾಲೆಗೆ ಇ-ಮೇಲ್ ಮೂಲಕ ಸೋಮವಾರ ಬೆಳಗ್ಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ತಕ್ಷಣವೇ ಶಾಲಾಡಳಿತ ಮಂಡಳಿಯಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಬಾಂಬ್ ಸ್ಕ್ವಾಡ್, ಶ್ವಾನ ದಳದೊಂದಿಗೆ ಶಾಲೆಯ ಒಳಗೆ ಹಾಗೂ ಹೊರಗೆ ಪರಿಶೀಲನೆ ನಡೆಸಲಾಯಿತು.

ಮಂಗಳೂರಿಗೂ ಬಂತು ಬೆದರಿಕೆ

ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಮಂಗಳೂರಿನ ಎರಡು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಬಗ್ಗೆ ವರದಿಯಾಗಿದೆ. ಮಂಗಳೂರಿನ ಎರಡು ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಿದ್ದಾರೆ. ಮಂಗಳೂರು ಪೊಲೀಸರು ಸ್ಥಳಕ್ಕೆ ತೆರಳಿ ಶಾಲೆಯಲ್ಲಿ ಶೋಧಕಾರ್ಯ ನಡೆಸಿ ಇದು ಕೂಡಾ ಹುಸಿ ಬೆದರಿಕೆ ಎಂಬುದನ್ನು ಖಚಿತಪಡಿಸಿದ್ದಾರೆ.

ಶಾಲೆಯ ಇ-ಮೇಲ್ ಪರಿಶೀಲನೆ ವೇಳೆ ಕಂಡುಬಂತು

ಸೋಮವಾರ ಬೆಳಗ್ಗಿನ ಜಾವ ಉಡುಪಿಯ ಶಾರದಾ ಇಂಟರ್‌ನ್ಯಾಶನಲ್ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಬೆಳಗ್ಗೆ 9:15ರ ಸುಮಾರಿಗೆ ಶಾಲೆಯ ಇ-ಮೇಲ್ ಪರಿಶೀಲನೆ ವೇಳೆ ಇದು ತಿಳಿದು ಬಂದಿದೆ.

ಶಾರದಾ ರೆಸಿಡೆನ್ಷಿಯಲ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ದೇಶದ ನಕ್ಸಲ್ ಚಟುವಟಿಕೆ ಹಾಗೂ ಭಯೋತ್ಪಾದಕ ವಿಚಾರಗಳನ್ನು ಅದರಲ್ಲಿ ಉಲ್ಲೇಖಿಸಿದೆ. ಇದು ನಮ್ಮ ಕೊನೆಯ ಕಾರ್ಯಾಚರಣೆ ಎಂದಿರುವ ಇ-ಮೇಲ್‌ನಲ್ಲಿ ಕಿಡಿಗೇಡಿಗಳು ಅಫ್ಜಲ್ ಗುರು ಗಲ್ಲು ಸೇರಿದಂತೆ ಅನೇಕ ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ಟ್ವಿನ್‌ಡ್ ಪೈಪ್ IED ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ. ತಮಿಳುನಾಡಿನ ಅಣ್ ವಿವಿಯ ಪ್ರೊಫೆಸರ್ ಚಿತ್ರಕಲಾ ಗೋಪಾಲನ್ ಘಟನೆ ಉಲ್ಲೇಖಿಸಿ ಬೆದರಿಕೆ ಹಾಕಿದ್ದಾರೆ. ಈ ಬ್ಲಾಸ್ಟ್ ಮೂಲಕ ನಾವು ಸ್ವರ್ಗ ಪಡೆಯುತ್ತೇವೆ ಎಂದಿದ್ದಾರೆ. ಹೀಗಾಗಿ ಶಾಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.

Whats_app_banner