ಧರ್ಮಸ್ಥಳ ಪ್ರವಾಸ ಹೊರಟಿದ್ದೀರಾ, ವಿಷು ಉತ್ಸವದಿಂದ ಶ್ರೀ ಮಂಜುನಾಥಸ್ವಾಮಿ ದರ್ಶನ ಸಮಯದಲ್ಲಿ ಕೊಂಚ ಬದಲಾವಣೆ
ಕನ್ನಡ ಸುದ್ದಿ  /  ಕರ್ನಾಟಕ  /  ಧರ್ಮಸ್ಥಳ ಪ್ರವಾಸ ಹೊರಟಿದ್ದೀರಾ, ವಿಷು ಉತ್ಸವದಿಂದ ಶ್ರೀ ಮಂಜುನಾಥಸ್ವಾಮಿ ದರ್ಶನ ಸಮಯದಲ್ಲಿ ಕೊಂಚ ಬದಲಾವಣೆ

ಧರ್ಮಸ್ಥಳ ಪ್ರವಾಸ ಹೊರಟಿದ್ದೀರಾ, ವಿಷು ಉತ್ಸವದಿಂದ ಶ್ರೀ ಮಂಜುನಾಥಸ್ವಾಮಿ ದರ್ಶನ ಸಮಯದಲ್ಲಿ ಕೊಂಚ ಬದಲಾವಣೆ

ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದಲ್ಲಿ ವಿಷು ಉತ್ಸವದ ಕಾರಣದಿಂದ ಆರು ದಿನಗಳ ಮಟ್ಟಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ.
ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ.

ಮಂಗಳೂರು: ಈಗ ಬೇಸಿಗೆ ರಜೆಗಳು ಇರುವುದರಿಂದ ದಕ್ಷಿಣ ಕನ್ನಡದ ಧರ್ಮಸ್ಥಳ ಸಹಿತ ಪ್ರಮುಖ ಧಾರ್ಮಿಕ ತಾಣಗಳಿಗೆ ಹೋಗುವ ಪ್ರವಾಸಿಗರ ಸಂಖ್ಯೆ ಅಧಿಕ. ಅದರಲ್ಲೂ ಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಂತೂ ಭಕ್ತರ ಭೇಟಿ ಪ್ರಮಾಣ ಹೆಚ್ಚಾಗಿದೆ. ಧರ್ಮಸ್ಥಳಕ್ಕೆ ಪ್ರವಾಸ ಹೋಗುವವರು ಅಲ್ಲಿನ ಶ್ರೀ ಮಂಜುನಾಥಸ್ವಾಮಿ ದರ್ಶನದ ಸಮಯವನ್ನು ಕೊಂಚ ಬದಲಾವಣೆ ಮಾಡಲಾಗಿದೆ. ಧರ್ಮಸ್ಥಳದಲ್ಲಿ ವಿಷು ಜಾತ್ರೆ ಇರುವುದರಿಂದ ಮುಂದಿನ ಆರು ದಿನಗಳ ಕಾಲ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ವಿಷು ಉತ್ಸವದ ನಂತರ ಮೊದಲಿನಂತೆಯೇ ದರ್ಶನ ಸಮಯ ಮುಂದುವರಿಯಲಿದೆ. ಭಕ್ತರು ಈ ಸಮಯವನ್ನು ಹೊಂದಿಸಿಕೊಂಡು ದರ್ಶನಕ್ಕೆ ಆಗಮಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ನೀಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದಲ್ಲಿ ವಿಷು ಜಾತ್ರೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯುವುದರಿಂದ ದೇವರ ದರ್ಶನ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದಿದೆ.

2025ರ ಏಪ್ರಿಲ್‌18ರಿಂದಲೇ ಬದಲಾದ ಸಮಯದಲ್ಲಿ ದರ್ಶನ ಶುರುವಾಗಿದೆ. ಇದು 2025ರ ಏಪ್ರಿಲ್‌ 23ರವರೆಗೆ ಇರಲಿದೆ. ಈ ದಿನಗಳಲ್ಲಿ ಬೆಳಗ್ಗೆ 6.30ರಿಂದ 8.30ರವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ತಿಳಿಸಲಾಗಿದೆ.

ಉಳಿದಂತೆ ಬೆಳಗ್ಗೆ 8.30ರ ಬಳಿಕ ಎಂದಿನಂತೆ ದೇವರ ದರ್ಶನ ನಡೆಯಲಿದೆ. ಮಧ್ಯಾಹ್ನದ ವೇಳೆ ಹೊರತುಪಡಿಸಿ ಸಂಜೆ 5 ಗಂಟೆಯಿಂದ ರಾತ್ರಿ 8.30ರವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಎನ್ನುವ ಮಾಹಿತಿ ನೀಡಲಾಗಿದೆ.

ಇನ್ನು 2025 ರ ಏಪ್ರಿಲ್‌ 22ರಂದು ಬೆಳಗ್ಗೆ 9 ಗಂಟೆಯ ಬಳಿಕ ದೇವರ ದರ್ಶನ ಪ್ರಾರಂಭವಾಗಲಿದೆ ಎಂಬುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.