ಗುಂಡು ಹಾರಿಸಿಕೊಂಡು ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷ, ಉದ್ಯಮಿ ದಿಲೀಪ್ ಎನ್‌ಆರ್‌ ಆತ್ಮಹತ್ಯೆ, ಕಾರಿನಲ್ಲಿ ಶವ ಪತ್ತೆ
ಕನ್ನಡ ಸುದ್ದಿ  /  ಕರ್ನಾಟಕ  /  ಗುಂಡು ಹಾರಿಸಿಕೊಂಡು ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷ, ಉದ್ಯಮಿ ದಿಲೀಪ್ ಎನ್‌ಆರ್‌ ಆತ್ಮಹತ್ಯೆ, ಕಾರಿನಲ್ಲಿ ಶವ ಪತ್ತೆ

ಗುಂಡು ಹಾರಿಸಿಕೊಂಡು ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷ, ಉದ್ಯಮಿ ದಿಲೀಪ್ ಎನ್‌ಆರ್‌ ಆತ್ಮಹತ್ಯೆ, ಕಾರಿನಲ್ಲಿ ಶವ ಪತ್ತೆ

ಉದ್ಯಮಿ ದಿಲೀಪ್ ಎನ್‌ಆರ್‌ ಆತ್ಮಹತ್ಯೆ: ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷ, ಉದ್ಯಮಿ ದಿಲೀಪ್ ಎನ್‌ಆರ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ಇಂದು(ಏಪ್ರಿಲ್ 29) ನಸುಕಿನ ವೇಳೆ ನಡೆದಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷ, ಉದ್ಯಮಿ ದಿಲೀಪ್ ಎನ್‌ಆರ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ.
ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷ, ಉದ್ಯಮಿ ದಿಲೀಪ್ ಎನ್‌ಆರ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ.

ಉದ್ಯಮಿ ದಿಲೀಪ್ ಎನ್‌ಆರ್‌ ಆತ್ಮಹತ್ಯೆ: ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷ, ಉದ್ಯಮಿ ದಿಲೀಪ್ ಎನ್‌ಆರ್‌ ಎಂಬುವವರು ಸ್ವತಃ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ವರದಿಯಾಗಿದೆ. ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉದ್ಯಮಿ ದಿಲೀಪ್ ಎನ್‌ಆರ್‌ ಆತ್ಮಹತ್ಯೆ

ಕಾರ್ಕಳ ತಾಲೂಕು ನಿಟ್ಟೆ ರಾಜ್ಯ ಹೆದ್ದಾರಿಯಲ್ಲಿ ದೂಪದಕಟ್ಟೆ ಎಂಬಲ್ಲಿ ತನ್ನ ಕಾರು ನಿಲ್ಲಿಸಿ, ಅದರಲ್ಲೇ ಕುಳಿತು ವಿಷ ಸೇವಿಸಿ ಬಳಿಕ ತನ್ನ ಎದೆ ತಾನೇ ಗುಂಡು ಹಾರಿಸಿಕೊಂಡು ದಿಲೀಪ್ ಎನ್ಆರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಲೀಪ್ ಎನ್ ಆರ್ ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಉದ್ಯಮದಲ್ಲಿ ನಷ್ಟವನ್ನು ಕೂಡ ಅನುಭವಿಸಿದ್ದು, ಕಾಯಿಲೆ ಉಲ್ಬಣಗಳ್ಳುತ್ತಿರುವ ಹಿನ್ನಲೆಯಲ್ಲಿ ಮಾನಸಿಕವಾಗಿ ತುಂಬಾ ನೊಂದಿದ್ದರೆನ್ನಲಾಗಿದೆ.

ಉದ್ಯಮಿ ದಿಲೀಪ್ ಎನ್‌ಆರ್‌ ಯಾರು?

ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷ, ಉದ್ಯಮಿ ದಿಲೀಪ್ ಎನ್‌ಆರ್‌ ಅವರು ಕಾರ್ಕಳ ತೆಳ್ಳಾರು ರಸ್ತೆ ನಿವಾಸಿಯಾಗಿದ್ದು ಮಂಗಳೂರು, ಮುಂಬೈ ಹಾಗೂ ಹೈದರಾಬಾದ್ ನಲ್ಲಿ ಹೋಟೆಲ್ ಉದ್ಯಮ ನಡೆಸಿದ್ದರು. ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಎನ್‌ಆರ್‌ ಅವರ ಸಹೋದರ. ಮಾಜಿ ಸಚಿವ ವಿನಯಕುಮಾರ್ ನಿಕಟ ಸಂಬಂಧಿ. ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.

ಆತ್ಮಹತ್ಯೆಗೆ ಮುನ್ನ ದಿಲೀಪ್‌ ಏನು ಮಾಡಿದ್ರು

ಮಂಗಳವಾರ ನಸುಕಿನ ವೇಳೆ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೊದಲ ದಿಲೀಪ್ ಎನ್‌ಆರ್‌ ಅವರು ಸೋಮವಾರ ರಾತ್ರಿ ತನ್ನ ಸ್ಹೇಹಿತರಿಗೆ ಹಾಗೂ ಆಪ್ತರಿಗೆ ವಾಟ್ಸ್‌ಆಪ್‌ನಲ್ಲಿ, ‘ನಾನು ನಿಮ್ಮನ್ನು ಬಿಟ್ಟು ದೂರ ಹೋಗುತ್ತಿದ್ದೇನೆ’ ಎಂದು ಮೇಸೇಜ್ ಕಳುಹಿಸಿದ್ದರು. ಕಾರ್ಕಳ ಮೂಲದ ಮುಂಬೈಯ ಉದ್ಯಮಿಯೊಬ್ಬರು ಈ ಮೆಸೇಜ್‌ ನೋಡಿ ಕೂಡಲೇ ದಿಲೀಪ್ ಅವರ ಅಣ್ಣನಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಅವರು ಕೂಡಲೆ ದಿಲೀಪ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು. ಆದರೆ ಯಾವುದೇ ಸುಳಿವು ಸಿಗದೇ ಇದ್ದಾಗ, ಪೊಲೀಸರ ನೆರವು ಕೋರಿದ್ದರು. ಕೊನೆಗೆ ಮೊಬೈಲ್ ನಂಬರ್ ಲೊಕೇಶನ್ ಆಧಾರದಲ್ಲಿ ಹುಡುಕಾಡಿದಾಗ ಕಾರ್ಕಳದ ದೂಪದಕಟ್ಟೆ ರಸ್ತೆಯಲ್ಲಿ ಅವರ ಫೋನ್ ಲೊಕೇಶನ್ ತೋರಿಸಿದೆ. ಅಲ್ಲಿ ಪರಿಶೀಲಿಸಿದಾಗ ಅವರ ಕಾರು ಪತ್ತೆಯಾಗಿದ್ದು, ಕಾರಿನಲ್ಲಿ ದಿಲೀಪ್ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ಪಿ ಎಸೈ ಪ್ರಸನ್ನ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಗಮನಿಸಿ: ಖಿನ್ನತೆ, ಆತ್ಮಹತ್ಯೆಯ ಆಲೋಚನೆಗಳು ಬಾಧಿಸುತ್ತಿದ್ದರೆ ನಿಮ್ಮ ಗೆಳತಿ / ಗೆಳೆಯರೊಂದಿಗೆ, ಹೆತ್ತವರೊಂದಿಗೆ, ಸಂಬಂಧಿಕರು, ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಿ. ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ. ಪೊಲೀಸರ, ಆಪ್ತಸಮಾಲೋಚಕರ, ವೈದ್ಯರ ನೆರವು ಪಡೆಯಿರಿ. ಕರ್ನಾಟಕದಲ್ಲಿ ಆರೋಗ್ಯ ಸಹಾಯವಾಣಿ 104, ವೃದ್ಧರ ಸಹಾಯವಾಣಿ 1090, ಮಕ್ಕಳ ಸಹಾಯವಾಣಿ 1098 ಮತ್ತು ಸ-ಮುದ್ರ ಸಹಾಯವಾಣಿ 98803 96331 ಮೂಲಕ ಟೆಲಿ ಕೌನ್ಸೆಲಿಂಗ್ ನೆರವು ಪಡೆದುಕೊಳ್ಳಿ. ಕೊನೇ ನಿರ್ಧಾರಕ್ಕೆ ಮೊದಲು ನಿಮ್ಮವರ ಬಗ್ಗೆ ಒಂದು ಕ್ಷಣ ಯೋಚಿಸಿ.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.