ದ್ವೇಷಭಾಷಣ ಆರೋಪ: ಬಜರಂಗದಳ ಮುಖಂಡ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣೆ ಪೊಲೀಸರು, ಎಸ್‌ಡಿಪಿಐ ಮುಖಂಡರ ದೂರು
ಕನ್ನಡ ಸುದ್ದಿ  /  ಕರ್ನಾಟಕ  /  ದ್ವೇಷಭಾಷಣ ಆರೋಪ: ಬಜರಂಗದಳ ಮುಖಂಡ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣೆ ಪೊಲೀಸರು, ಎಸ್‌ಡಿಪಿಐ ಮುಖಂಡರ ದೂರು

ದ್ವೇಷಭಾಷಣ ಆರೋಪ: ಬಜರಂಗದಳ ಮುಖಂಡ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣೆ ಪೊಲೀಸರು, ಎಸ್‌ಡಿಪಿಐ ಮುಖಂಡರ ದೂರು

ಪುತ್ತೂರು: ಬಜರಂಗದಳದ ಮುಖಂಡ ಭರತ್ ಕುಮ್ಡೇಲು ಕೋಮುದ್ವೇಷವನ್ನು ಉಂಟುಮಾಡುವ ಭಾಷಣ ಮಾಡಿದ್ದಾರೆ ಎಂದು ಎಸ್‌ಡಿಪಿಐ ಮುಖಂಡರು ನೀಡಿದ ದೂರು ಆಧರಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ದ್ವೇಷಭಾಷಣ ಆರೋಪದ ಕಾರಣ ಪುತ್ತೂರು ನಗರ ಪೊಲೀಸರು ಬಜರಂಗದಳ ಮುಖಂಡ ಭರತ್ ಕುಮ್ಡೇಲು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದ್ವೇಷಭಾಷಣ ಆರೋಪದ ಕಾರಣ ಪುತ್ತೂರು ನಗರ ಪೊಲೀಸರು ಬಜರಂಗದಳ ಮುಖಂಡ ಭರತ್ ಕುಮ್ಡೇಲು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು: ಪುತ್ತೂರು ಬೈಪಾಸ್ ರಸ್ತೆಯ ಜೈನಭವನದಲ್ಲಿ ಮೇ 15ರಂದು ನಡೆದ ಕಾರ್ಯಕ್ರಮದಲ್ಲಿ ಬಜರಂಗದಳದ ಮುಖಂಡ ಭರತ್ ಕುಮ್ಡೇಲು ಕೋಮುದ್ವೇಷವನ್ನು ಉಂಟುಮಾಡುವ ಭಾಷಣ ಮಾಡಿದ್ದಾರೆ ಎಂದು ಎಸ್‌ಡಿಪಿಐ ಮುಖಂಡರು ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವೇಷಭಾಷಣ ಆರೋಪ: ಬಜರಂಗದಳ ಮುಖಂಡ ವಿರುದ್ಧ ಪ್ರಕರಣ ದಾಖಲು

ಪುತ್ತೂರು ಜೈನಭವನದಲ್ಲಿ ಮೇ 15 ರಂದು ನಡೆದ ಕಾರ್ಯಕ್ರಮದಲ್ಲಿ ಬಜರಂಗ ದಳದ ಮುಖಂಡ ಭರತ್ ಕುಮ್ಡೇಲು ಕೋಮು ದ್ವೇಷದ ಮಾತುಗಳನ್ನು ಆಡಿದ್ದಾರೆ. ಆ ಮಾತುಗಳು ಕೋಮು ಸಾಮರಸ್ಯ ಕದಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟುಮಾಡುವ ಸಾಧ್ಯತೆ ಇರುವ ಕಾರಣ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಎಸ್‌ಡಿಪಿಐ ಮುಖಂಡರು ದೂರು ನೀಡಿದ್ದಾರೆ. ಈ ದೂರಿನ ಪ್ರಕಾರ, ಭರತ್ ಕುಮ್ಡೇಲು ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭರತ್ ಕುಮ್ಡೇಲು ಭಾಷಣ ಸಮಾಜದಲ್ಲಿ ಒಡಕುಂಟುಮಾಡುವ ಯತ್ನವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಎಸ್‌ಡಿಪಿಐ ಮುಖಂಡರು ಕಿಡಿಕಾರಿದ್ದಾರೆ. ಆಂಟಿ ಕಮ್ಯೂನಲ್ ವಿಂಗ್ ಫೋರ್ಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ಗೆ ಮನವಿ ಮಾಡಿ ಈ ಕುರಿತು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಿ ಎಂದು ಮುಖಂಡ ಅನ್ವರ್ ಸಾದತ್ ಬಜತ್ತೂರು ಮನವಿ ಮಾಡಿದ್ದರು. ಮುಖಂಡರಾದ ರಿಯಾಝ್ ಫರಂಗಿಪೇಟೆ ತನ್ನ ಎಕ್ಸ್ ಖಾತೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದೀಗ ಪುತ್ತೂರು ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.