Kannada News  /  Karnataka  /  Home Minister Amit Shah Lay Foundation Stone For Dharwad Campus Of Forensic Sciences University
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಧಾರವಾಡ ಕೃಷಿ ವಿವಿ ಆವರಣದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸ್ಥಾಪನೆಗೆ ಭೂಮಿ ಪೂಜೆ ಹಾಗೂ  ಶಂಕುಸ್ಥಾಪನೆ ನೆರವೇರಿಸಿದರು.    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಚಿವರಾದ  ಗೃಹ ಸಚಿವ ಆರಗ ಜ್ಞಾನೇಂದ್ರ,  ಹಾಲಪ್ಪ ಆಚಾರ್,  ಶಾಸಕ ಅರವಿಂದ ಬೆಲ್ಲದ್ ಹಾಗೂ  ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಧಾರವಾಡ ಕೃಷಿ ವಿವಿ ಆವರಣದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸ್ಥಾಪನೆಗೆ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಗೃಹ ಸಚಿವ ಆರಗ ಜ್ಞಾನೇಂದ್ರ, ಹಾಲಪ್ಪ ಆಚಾರ್, ಶಾಸಕ ಅರವಿಂದ ಬೆಲ್ಲದ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Forensic University: ಧಾರವಾಡದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ, ಫಾರೆನ್ಸಿಕ್‌ ಕಲಿಯಬಯಸುವವರಿಗೆ ರಾಜ್ಯದಲ್ಲೇ ವಿವಿ

28 January 2023, 17:08 ISTHT Kannada Desk
28 January 2023, 17:08 IST

ಅಮಿತ್ ಶಾ ಅವರಿಗೆ ಕರ್ನಾಟಕದ ಮೇಲಿನ ಪ್ರೀತಿಗೆ ರಾಷ್ಟ್ರೀಯ ವಿಧಿ ವಿಜ್ಞಾನ ವಿವಿ ರಾಜ್ಯಕ್ಕೆ ಬಂದ್ರೆ, ಧಾರವಾಡದಲ್ಲಿ ನೆಲೆಗೊಳ್ಳಲು ಪ್ರಲ್ಹಾದ್ ಜೋಶಿ ಅವರ ಶ್ರಮವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಧಾರವಾಡ: ಈಗಾಗಲೇ ಕೃಷಿ ವಿಶ್ವವಿದ್ಯಾಲಯ, ಕಾನೂನು ವಿಶ್ವವಿದ್ಯಾಲಯ, ಕರ್ನಾಟಕ ವಿಶ್ವವಿದ್ಯಾಲಯವಿರುವ ಧಾರವಾಡದಲ್ಲಿ ಪಾರೆನ್ಸಿಕ್‌ ಸೈನ್ಸ್‌ ಕಲಿಯಲು ಬಯುಸುವವರಿಗೆ ವಿಧಿವಿಜ್ಞಾನ ವಿಶ್ವವಿದ್ಯಾಲಯವೂ ಲಭ್ಯವಾಗಲಿದೆ. ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಇಂದು ಗೃಹಸಚಿವ ಅಮಿತ್‌ ಶಾ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

"ದೆಹಲಿಯಲ್ಲಿ ಈಗಾಗಲೇ ಫಾರೆನ್ಸಿಕ್‌ ವಿಶ್ವವಿದ್ಯಾಲಯವಿದೆ. ಕರ್ನಾಟಕದ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ಧಾರವಾಡದಲ್ಲಿಯೂ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ನಿರ್ಮಾಣಗೊಳ್ಳುತ್ತಿದೆ. ಭವಿಷ್ಯದಲ್ಲಿ ಭಾರತವು ಅತಿ ಹೆಚ್ಚು ಫಾರೆನ್ಸಿಕ್‌ ತಜ್ಞರನ್ನು ಹೊಂದಿರುವ ದೇಶವಾಗಲಿದೆʼʼ ಎಂದು ಈ ಸಂದರ್ಭದಲ್ಲಿ ಅಮಿತ್‌ ಶಾ ಹೇಳಿದ್ದಾರೆ.

ಆಧುನಿಕ ತಂತ್ರಜ್ಞಾನ ಹೆಚ್ಚಾದಂತೆ ಅಪರಾಧಿಗಳು ಸಹ ತಂತ್ರಜ್ಞಾನ ಬಳಸುತ್ತಿದ್ದಾರೆ. 10 ವರ್ಷದ ಸೈಬರ್ ಕ್ರೈಂ ಬಗ್ಗೆ ಕೇಳಿರಲಿಲ್ಲ. ಈಗ ಅದರ ಬಗ್ಗೆಯೇ ಕಾನೂನು ಸಹ ಬಂದಿದೆ. ಹೊಸ ರೀತಿಯ ಅಪರಾಧಗಳ ಕಡಿವಾಣ ಹಾಕಬೇಕಾದ್ರೆ ನಮ್ಮ ತಂತ್ರಜ್ಞಾನ ಮುಂದಿರಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಧಾರವಾಡದಲ್ಲಿ ಜರುಗಿದ ಕರ್ನಾಟಕ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಭೂಮಿ ಪೂಜೆ ಹಾಗೂ ಶಂಕು ಸ್ಥಾಪನೆ ಸಮಾರಂಭದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೊಸ ರೀತಿಯ ಅಪರಾಧಗಳಾದ ಸೈಬರ್ ಕ್ರೈಮ್, ಡಿಜಿಟಲ್ ಕ್ರೈಮ್, ನಾರ್ಕೋಟಿಕ್ಸ್ ಗಳನ್ನು ನಿಯಂತ್ರಿಸುವ ಅಗತ್ಯವಿದೆ. ಕ್ರೈಮ್ ಲೀಡ್ಸ್ ದಿ ಲಾ ಅಂತ ಮಾತಿತ್ತು. ಈಗ ಕಾನೂನು ಮತ್ತು ತಂತ್ರಜ್ಞಾನ ಅಪರಾಧಗಳನ್ನು ಪತ್ತೆ ಮಾಡಬೇಕಿದೆ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಮುಖ್ಯವಾಗಿದೆ.

ಹಿಂದೆಲ್ಲಾ ಎಫ್ಎಸ್ಎಲ್‌ನಿಂದ ವರದಿಗಳು ಬರಲು ವರ್ಷಗಳು ಆಗುತ್ತಿದ್ದವು. ಈ ಸಮಯದಲ್ಲಿ ಅಪರಾಧಿಗಳು ತಲೆಮರೆಸಿಕೊಳ್ಳುತ್ತಿದ್ದರು. ಇದಕ್ಕಾಗಿ ನಾನು ಗೃಹ ಸಚಿವನಿದ್ದಾಗ 2 ಪ್ರಾದೇಶಿಕ ಎಫ್ಎಸ್ಎಲ್ ಕೇಂದ್ರಗಳನ್ನು ಕೊಟ್ಟಿದ್ದೇವೆ. ಜತೆಗೆ ಬೆಂಗಳೂರಿನ ಎಫ್ಎಸ್ಎಲ್ ಪ್ರಯೋಗಾಲಯವನ್ನು 30 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗಿದೆ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸರು ಅತ್ಯಾಧುನಿಕ ಎಫ್ಎಸ್ಎಲ್ ಲ್ಯಾಬ್ ಪಡೆದುಕೊಂಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ವಿದೇಶದಲ್ಲಿರುವಂತೆ ಭಾರತದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ 180 ಕ್ಕೂ ಹೆಚ್ಚು ಸ್ಪೆಷಲ್ ಆಫೀಸರ್ ಆನ್ ಕ್ರೈಂ ಸೀನ್ ನೇಮಕ ಮಾಡಿಕೊಳ್ಳಲಾಗಿದೆ. ಜತೆಗೆ 52 ಎಫ್ಎಸ್ಎಲ್ ವಿಜ್ಞಾನಿಗಳಿಗೆ ತರಬೇತಿ ಕೊಟ್ಟು ನೇಮಕ ಮಾಡಿಕೊಳ್ಳಲಾಗಿದೆ. ಅದೆಲ್ಲಕ್ಕೂ ಕಿರೀಟ ಪ್ರಾಯವಾಗಿರುವಂತೆ ಇಂದು ಎಫ್ಎಸ್ಎಲ್ ವಿವಿ ಕರ್ನಾಟಕಕ್ಕೆ ಬಂದಿದೆ. ಅಮಿತ್ ಶಾ ಅವರಿಗೆ ಕರ್ನಾಟಕದ ಮೇಲಿನ ಪ್ರೀತಿಗೆ ರಾಷ್ಟ್ರೀಯ ವಿಧಿ ವಿಜ್ಞಾನ ವಿವಿ ರಾಜ್ಯಕ್ಕೆ ಬಂದ್ರೆ, ಧಾರವಾಡದಲ್ಲಿ ನೆಲೆಗೊಳ್ಳಲು ಪ್ರಲ್ಹಾದ್ ಜೋಶಿ ಅವರ ಶ್ರಮವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿವಿ ಕರ್ನಾಟಕಕ್ಕೆ ಬಂದಿದ್ದರೂ ಕೂಡ ಇದರ ಸೇವೆ ಎಲ್ಲಾ ರಾಜ್ಯಗಳಿಗೂ ಸಿಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಧಾರವಾಡದಲ್ಲಿ ಸ್ಥಾಪನೆ ಆಗಿರುವುದು ನಮಗೆ ಸಂತಸವಾಗಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ ಜನರಿಗೆ ಉದ್ಯೋಗ ಸಿಗಲು ಅಮಿತ್ ಶಾ ಕಾರಣವಾಗಿದ್ದಾರೆ. ಇದಕ್ಕೆ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮತ್ತೋರ್ವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ, ಉಪಕುಲಪತಿಗಳಾದ ಜಿ ಎಂ ವ್ಯಾಸ್, ಶಾಸಕರಾದ ಅರವಿಂದ್ ಬೆಲ್ಲದ್, ಅಮೃತ್ ದೇಸಾಯಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.