ಕನ್ನಡ ಸುದ್ದಿ  /  ಕರ್ನಾಟಕ  /  Cabinet Expansion Issue: ಗಡಿ ವಿಚಾರ ಸಂಬಂಧ ದೆಹಲಿಗೆ ಹೋಗುತ್ತಿದ್ದೇನೆ, ಸಾಧ್ಯವಾದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಸಿಎಂ ಬೊಮ್ಮಾಯಿ

Cabinet expansion issue: ಗಡಿ ವಿಚಾರ ಸಂಬಂಧ ದೆಹಲಿಗೆ ಹೋಗುತ್ತಿದ್ದೇನೆ, ಸಾಧ್ಯವಾದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಸಿಎಂ ಬೊಮ್ಮಾಯಿ

ಗಡಿ ವಿವಾದ ವಿಚಾರ ಸಂಬಂಧ ದೆಹಲಿಗೆ ಹೋಗುತ್ತಿದ್ದೇನೆ. ಆ ನಂತರ ಸಚಿವ ಸಂಪುಟದ ಬಗ್ಗೆ ಚರ್ಚೆಗೆ ಅವಕಾಶ ನೀಡಿದರೆ ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಂಡು ಹೋಗುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗುತ್ತಿದ್ದೇನೆ. ಈ ವಿಷಯದ ನಂತರ ಸಚಿವ ಸಂಪುಟ ವಿಸ್ತರಣೆ ವಿಚಾರ ಬಂದರೆ ಚರ್ಚೆ ಮಾಡುತ್ತೇವೆ. ಅದಕ್ಕಾಗಿ ಸಿದ್ಧತೆ ಮಾಡಿಕೊಂಡು ಹೋಗಿರುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಗೃಹ ಸಚಿವರು ಗಡಿವಿವಾದದ ಬಗ್ಗೆ ಚರ್ಚಿಸಲೆಂದೇ ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆದಿದ್ದಾರೆ. ಅಲ್ಲಿ ನಮ್ಮ ನಿಲುವಿನ ಬಗ್ಗೆ ಹೇಳುತ್ತೇವೆ. ಈಗಾಗಲೇ ರಾಜ್ಯ ಪುನರ್ ವಿಂಗಡನಾ ಕಾಯ್ದೆ, ಪ್ರಕ್ರಿಯೆ, ಸುಪ್ರೀಂ ಕೋರ್ಟ್ ಪ್ರಕರಣ ಸೇರಿದಂತೆ ಎಲ್ಲಾ ಮಾಹಿತಿಯನ್ನು ಗೃಹ ಸಚಿವರಿಗೆ ನೀಡಲಿದ್ದೇನೆ. ಸಂವಿಧಾನದಲ್ಲಿನ ಅವಕಾಶಗಳು ಮತ್ತು 2004ರ ಪ್ರಕರಣ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡೇ ಇಲ್ಲ ಎಂಬ ಬಗ್ಗೆ ಗೃಹ ಕಾರ್ಯದರ್ಶಿಗಳಿಗೆ ಮನವಿ ಮಾಡಿಕೊಡಲಿದ್ದೇನೆ ಎಂದರು.

ಚಾಮರಾಜನಗರ ಜಿಲ್ಲೆಯೂ ಕೂಡ 31 ಜಿಲ್ಲೆಗಳ ಪೈಕಿ ಮಹತ್ವದ ಜಿಲ್ಲೆ. ನಿಸರ್ಗಭರಿತ, ಐತಿಹಾಸಿಕ ಗಡಿ ಜಿಲ್ಲೆಯಾಗಿದೆ. ಅಭಿವೃದ್ಧಿಗೆ ಮಹತ್ವ ಕೊಟ್ಟೇ ಕೊಡುತ್ತೇವೆ. ಮುಖ್ಯಮಂತ್ರಿಯಾದ ನಂತರ ಮೂರನೇ ಬಾರಿಗೆ ಜಿಲ್ಲೆ ಭೇಟಿ ನೀಡುತ್ತಿದ್ದೇನೆ ಎಂದು ಜಿಲ್ಲೆಗೆ ಬಂದರೆ ಅಧಿಕಾರ ಹೋಗುತ್ತೆ ಎಂಬ ಮೌಢ್ಯದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮಾಂಡೋಸ್ ಚಂಡಮಾರುತ: ಬೆಳೆ ಹಾನಿ ಸಮೀಕ್ಷೆ

ಮಾಂಡೋಸ್ ಚಂಡ ಮಾರುತದಿಂದ ಕೆಲವು ತೊಂದರೆಗಳಗಿದ್ದು, ವಿಶೇಷವಾಗಿ ಬೆಳೆಗಳ ಮೇಲೆ ಆಗಿರುವ ಪ್ರಭಾವ ಏನೆಂದು ಸಮೀಕ್ಷೆ ಮಾಡಲಾಗುತ್ತಿದೆ. ರಾಗಿ ಬೆಳೆದು ನಿಂತಿದೆ. ಕಾಟಾವು ಮಾಡಿದವರಿಗೆ ಕಷ್ಟವಾಗುತ್ತಿದೆ ಎಂಬ ವರದಿ ಬಂದಿದೆ. ಕೃಷಿ ಇಲಾಖೆಯಿಂದ ಸಂಪೂರ್ಣ ಮಾಹಿತಿ ತರಿಸಿಕೊಳ್ಳಲಾಗುತ್ತಿದೆ ಎಂದರು.

ಚೀನಾವನ್ನು ಸಮರ್ಥವಾಗಿ ಹಿಮ್ಮೆಟ್ಟಿಸುತ್ತೇವೆ

ದೇಶದ ಗಡಿಯಲ್ಲಿ ಚೀನಾ ಮತ್ತು ಭಾರತದ ಸೈನಿಕರ ನಡುವೆ ಸಂಘರ್ಷ ಉಂಟಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗ ಹಿಂದಿನಂಥ ಸರ್ಕಾರವಿಲ್ಲ. ರಕ್ಷಣಾ ಪಡೆಗಳೂ ಸನ್ನದ್ಧವಾಗಿವೆ. ಹಿಂದೆ ಯಾವುದೇ ತಯಾರಿಗಳಿರಲಿಲ್ಲ. ಅಂದಿನ ನಾಯಕತ್ವ ರಕ್ಷಣಾ ಪಡೆಗಳಿಗೆ ಯಾವುದೇ ನಿರ್ದೇಶನ ನೀಡಲಿಲ್ಲ. ಈಗ ಸ್ಪಷ್ಟ ನಿರ್ದೇಶನವಿದೆ. ವಿವಾದವಿದ್ದ ಸಂದರ್ಭದಲ್ಲಿ ಚೀನಾ ಮುನ್ನುಗ್ಗಿದಾಗ ಅಂದಿನ ನಾಯಕತ್ವ ರಕ್ಷಣಾ ಪಡೆಗಳಿಗೆ ನಿರ್ದೇಶನ ನೀಡಲಿಲ್ಲ. ರಸ್ತೆ, ಸೇತುವೆ, ಸಲಕರಣೆ ಮುಂತಾದ ಸಂಪರ್ಕ ಸಾಧನಗಳನ್ನು ಬಲಪಡಿಸಲಾಗಿದೆ. ಚೀನಾವನ್ನು ಸಮರ್ಥವಾಗಿ ಹಿಮ್ಮೆಟ್ಟಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಸಿಎಂ ಬೊಬ್ಮಾಯಿ ಹೇಳಿದ್ದಾರೆ.

ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದಿದ್ದಾರೆ.

ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಸಿಎಂ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ, ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

IPL_Entry_Point