ಗುಜರಾತ್‌ನಲ್ಲಿ ರೈಲ್ವೆ ಮಾರ್ಗ ಕಾಮಗಾರಿ; ಬೆಂಗಳೂರು, ಮೈಸೂರಿನಿಂದ ಹೊರಡುವ ರೈಲು ಸಂಚಾರ ಮೇ, ಜೂನ್‌ನಲ್ಲಿ ವ್ಯತ್ಯಯ
ಕನ್ನಡ ಸುದ್ದಿ  /  ಕರ್ನಾಟಕ  /  ಗುಜರಾತ್‌ನಲ್ಲಿ ರೈಲ್ವೆ ಮಾರ್ಗ ಕಾಮಗಾರಿ; ಬೆಂಗಳೂರು, ಮೈಸೂರಿನಿಂದ ಹೊರಡುವ ರೈಲು ಸಂಚಾರ ಮೇ, ಜೂನ್‌ನಲ್ಲಿ ವ್ಯತ್ಯಯ

ಗುಜರಾತ್‌ನಲ್ಲಿ ರೈಲ್ವೆ ಮಾರ್ಗ ಕಾಮಗಾರಿ; ಬೆಂಗಳೂರು, ಮೈಸೂರಿನಿಂದ ಹೊರಡುವ ರೈಲು ಸಂಚಾರ ಮೇ, ಜೂನ್‌ನಲ್ಲಿ ವ್ಯತ್ಯಯ

ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಿಭಾಗದ ಬೆಂಗಳೂರು ಹಾಗೂ ಮೈಸೂರಿನಿಂದ ಹೊರಡುವ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರು ಹಾಗೂ ಮೈಸೂರಿನಿಂದ ಹೊರಡುವ ಕೆಲ ರೈಲು ಸಂಚಾರದಲ್ಲಿ ವಿಳಂಬವಾಗಲಿದೆ.
ಬೆಂಗಳೂರು ಹಾಗೂ ಮೈಸೂರಿನಿಂದ ಹೊರಡುವ ಕೆಲ ರೈಲು ಸಂಚಾರದಲ್ಲಿ ವಿಳಂಬವಾಗಲಿದೆ.

ದೂರದ ಗುಜರಾತ್‌ ರಾಜ್ಯದಲ್ಲಿ ನಡೆಯುತ್ತಿರುವ ರೈಲ್ವೆ ಸೇತುವೆ ಕಾಮಗಾರಿಯಿಂದಾಗಿ ಮೈಸೂರು ಹಾಗೂ ಬೆಂಗಳೂರಿನಿಂದ ಹೊರಡುವ ಕೆಲವು ರೈಲುಗಳ ಸಂಚಾರದಲ್ಲಿ ವಿಳಂಬವಾಗಲಿದೆ. ಅದರಲ್ಲೂ ಮೇ ಹಾಗೂ ಜೂನ್‌ ತಿಂಗಳಲ್ಲಿ ಈ ವ್ಯತ್ಯಯವಾಗಲಿದೆ. ಗೆರತ್ಪುರ್-ವಡೋದರ ವಿಭಾಗದ ವಸದ್ ಮತ್ತು ರಾನೋಲಿ ನಿಲ್ದಾಣಗಳ ನಡುವೆ ಬ್ರಿಡ್ಜ್ ಕಾರ್ಯ ನಡೆಯಲಿರುವ ಕಾರಣ, ಕೆಳಗೆ ತಿಳಿಸಲಾದ ಎರಡು ಪ್ರಮುಖ ಎಕ್ಸ್ ಪ್ರೆಸ್ ರೈಲುಗಳ ಸಂಚಾರದಲ್ಲಿ ನಿಯಂತ್ರಣವಾಗಲಿದೆ ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.

2025 ರ ಮೇ 14, 21, 28 ಮತ್ತು ಜೂನ್ 4, ರಂದು ಭಗತ್ ಕಿ ಕೋಠಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16533 ಭಗತ್ ಕಿ ಕೋಠಿ – ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ಮಾರ್ಗದಲ್ಲಿ 55 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.

2025 ರ ಮೇ 11, 18 ಮತ್ತು ಜೂನ್ 8 ರಂದು ಅಜ್ಮೀರ್ ನಿಲ್ದಾಣದಿಂದ ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16209 ಅಜ್ಮೀರ್ – ಮೈಸೂರು ಎಕ್ಸ್ ಪ್ರೆಸ್ ಮಾರ್ಗದಲ್ಲಿ 55 ನಿಮಿಷಗಳ ಕಾಲ ವಿಳಂಬವಾಗಲಿದೆ.

ವಿಶ್ವಮಾನವ ಎಕ್ಸ್ ಪ್ರೆಸ್ ಪುನರಾರಂಭ, ಇತರ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ

ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಈ ಕೆಳಗಿನ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿದೆ.

1. ರೈಲು ಸಂಖ್ಯೆ 17325 ಬೆಳಗಾವಿ–ಮೈಸೂರು ವಿಶ್ವಮಾನವ ದೈನಂದಿನ ಎಕ್ಸ್ ಪ್ರೆಸ್ ರೈಲು ಈ ಮೊದಲು ಮೇ 8, 9, 11, 12, 13, 15 ಮತ್ತು 16, 2025 ರಂದು ಬೆಳಗಾವಿಯಿಂದ 60 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಮತ್ತು ಮಾರ್ಗ ಮಧ್ಯೆ 45 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಈಗ ಈ ರೈಲು ಮೇ 5, 2025 ರಿಂದ ತನ್ನ ಮೊದಲಿನ ವೇಳಾಪಟ್ಟಿಯ ಪ್ರಕಾರ ಎಂದಿನಂತೆ ಸಂಚಾರ ಆರಂಭಗೊಂಡಿದೆ.

2. ಮೇ 8, 13, 15 ಮತ್ತು 20, 2025 ರಂದು ಬಿಕಾನೇರ್’ನಿಂದ ಹೊರಡುವ ರೈಲು ಸಂಖ್ಯೆ 16588 ಬಿಕಾನೇರ್–ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯೆ 75 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

3. ಮೇ 5, 6, 8, 9, 11, 12, 13, 15, 16, 18, 19, 20, 22 ಮತ್ತು 23 ರಂದು ಹೊರಡುವ ರೈಲು ಸಂಖ್ಯೆ 17347 ಹುಬ್ಬಳ್ಳಿ–ಚಿತ್ರದುರ್ಗ ಡೈಲಿ ಎಕ್ಸ್ ಪ್ರೆಸ್ ಹುಬ್ಬಳ್ಳಿಯಿಂದ 75 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಮತ್ತು ಮಾರ್ಗ ಮಧ್ಯೆ 25 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

ಮುಂಗಾರು ವೇಳಾಪಟ್ಟಿ ಜಾರಿ: ಆಯ್ದ ರೈಲುಗಳ ಸಂಚಾರ ಸಮಯ ಬದಲಾವಣೆ

ಮುಂಗಾರು ಮಳೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಸುಗಮ ಸಂಚಾರಕ್ಕಾಗಿ ನೈರುತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ಸಂಚರಿಸುವ ಕೆಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ ಎಂದು ಕೊಂಕಣ ರೈಲ್ವೆ ನಿಗಮ ನಿಯಮಿತ ತಿಳಿಸಿದೆ. ಈ ಪರಿಷ್ಕೃತ ವೇಳಾಪಟ್ಟಿ 2025ರ ಜೂನ್ ಹದಿನೈದರಿಂದ ಅಕ್ಟೋಬರ್ ಇಪ್ಪತ್ತರವರೆಗೆ ಜಾರಿಯಲ್ಲಿರುತ್ತದೆ.

ಪರಿಷ್ಕೃತ ಸಮಯವು 2025ರ ಜೂನ್ ಹದಿನೈದರಂದು ಅಥವಾ ನಂತರ ತಮ್ಮ ಮೂಲ ನಿಲ್ದಾಣಗಳಿಂದ ಹೊರಡುವ ರೈಲುಗಳಿಗೆ ಅನ್ವಯಿಸುತ್ತದೆ.

ಮುಂಗಾರು ವೇಳಾಪಟ್ಟಿ ಅನ್ವಯವಾಗುವ ರೈಲುಗಳ ವಿವರ:

1. ರೈಲು ಸಂಖ್ಯೆ 16595/16596 ಕೆಎಸ್ಆರ್ ಬೆಂಗಳೂರು–ಕಾರವಾರ–ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್.

2. ರೈಲು ಸಂಖ್ಯೆ 16585/16586 ಎಸ್ಎಮ್ವಿಟಿ ಬೆಂಗಳೂರು–ಮುರ್ಡೇಶ್ವರ–ಎಸ್ಎಮ್ವಿಟಿ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್.

3. ರೈಲು ಸಂಖ್ಯೆ 16515/16516 ಯಶವಂತಪುರ–ಕಾರವಾರ–ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್.

4. ರೈಲು ಸಂಖ್ಯೆ 12741/12742 ವಾಸ್ಕೋ-ಡ-ಗಾಮಾ – ಪಾಟ್ನಾ – ವಾಸ್ಕೋ-ಡ-ಗಾಮಾ ಸಾಪ್ತಾಹಿಕ ಸೂಪರ್ಫಾಸ್ಟ್ಎಕ್ಸ್ ಪ್ರೆಸ್.

5. ರೈಲು ಸಂಖ್ಯೆ 11097/11098 ಪುಣೆ–ಎರ್ನಾಕುಲಂ–ಪುಣೆ ಸಾಪ್ತಾಹಿಕ ಎಕ್ಸ್ ಪ್ರೆಸ್.

ಈ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕದ ಮುಂಚಿತವಾಗಿ ಪರಿಷ್ಕೃತ ವೇಳಾಪಟ್ಟಿಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ನವೀಕರಿಸಲಾದ ವೇಳಾಪಟ್ಟಿಯ ಕುರಿತಾದ ಮಾಹಿತಿಯು ಭಾರತೀಯ ರೈಲ್ವೆಯ ಅಧಿಕೃತ ಜಾಲತಾಣಗಳಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ಲಭ್ಯವಿರಲಿದೆ ಎಂದು ತಿಳಿಸಲಾಗಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.