Indian Railways: ಬೆಂಗಳೂರು, ಮೈಸೂರಿನಿಂದ ಚೆನ್ನೈಗೆ ಹೋಗುವ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ಯಥಾರೀತಿ
ಕನ್ನಡ ಸುದ್ದಿ  /  ಕರ್ನಾಟಕ  /  Indian Railways: ಬೆಂಗಳೂರು, ಮೈಸೂರಿನಿಂದ ಚೆನ್ನೈಗೆ ಹೋಗುವ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ಯಥಾರೀತಿ

Indian Railways: ಬೆಂಗಳೂರು, ಮೈಸೂರಿನಿಂದ ಚೆನ್ನೈಗೆ ಹೋಗುವ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ಯಥಾರೀತಿ

ಚೆನ್ನೈ ವಿಭಾಗದಲ್ಲಿ ಸುರಕ್ಷತೆ ಮತ್ತು ನಿರ್ವಹಣಾ ಕಾರ್ಯಗಳಿಗಾಗಿ ಈ ಹಿಂದೆ ಭಾಗಶಃ ರದ್ದುಗೊಳಿಸಲಾಗಿದ್ದ ಬೆಂಗಳೂರು, ಮೈಸೂರಿನ ರೈಲು ಸೇವೆಗಳನ್ನು ಪುನಾರಂಭಿಸುವುದಾಗಿ ದಕ್ಷಿಣ ರೈಲ್ವೆ ವಲಯವು ತಿಳಿಸಿದೆ. ಈ ರೈಲುಗಳು ಈಗ ತಮ್ಮ ಮೂಲ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿವೆ

ಬೆಂಗಳೂರು, ಮೈಸೂರಿನಿಂದ ಚೆನ್ನೈಗೆ  ಹೋಗುವ ಎಕ್ಸ್‌ಪ್ರೆಸ್‌ ರೈಲುಗಳ ಸೇವೆ ಯಥಾರೀತಿ ಇರಲಿದೆ.
ಬೆಂಗಳೂರು, ಮೈಸೂರಿನಿಂದ ಚೆನ್ನೈಗೆ ಹೋಗುವ ಎಕ್ಸ್‌ಪ್ರೆಸ್‌ ರೈಲುಗಳ ಸೇವೆ ಯಥಾರೀತಿ ಇರಲಿದೆ.

ಬೆಂಗಳೂರು ಹಾಗೂ ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣದಿಂದ ಸಂಚರಿಸುತ್ತಿದ್ದ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್‌ಪ್ರೆಸ್‌ ರೈಲಿನ ಸೇವೆಯನ್ನು ಯಥಾರೀತಿಯಾಗಿ ಆರಂಭಿಸಲಾಗುತ್ತಿದೆ. ಚೆನ್ನೈ ವಿಭಾಗದಲ್ಲಿ ಸುರಕ್ಷತೆ ಮತ್ತು ನಿರ್ವಹಣಾ ಕಾರ್ಯಗಳಿಂದಾಗಿ ಈ ಹಿಂದೆ ಭಾಗಶಃ ರದ್ದಾದ ರೈಲು ಸೇವೆಗಳನ್ನು ಪುನಃಸ್ಥಾಪನೆ ಮಾಡುವುದಾಗಿ ದಕ್ಷಿಣ ರೈಲ್ವೆ ತಿಳಿಸಿದೆ. ಈ ರೈಲುಗಳು ಈಗ ಅವುಗಳ ಮೂಲ ವೇಳಾಪಟ್ಟಿಯ ಪ್ರಕಾರ ಚಲಿಸುತ್ತವೆ. ಬೇಸಿಗೆ ರಜೆ ಸೇರಿದಂತೆ ನಾನಾ ಕಾರಣಗಳಿಂದ ಮೈಸೂರು ಹಾಗೂ ಬೆಂಗಳೂರು ಭಾಗದಿಂದ ತಮಿಳುನಾಡು ಹಾಗೂ ಚೆನ್ನೈ ಕಡೆಗೆ ಸಂಚರಿಸುವವರು ಈ ಸಮಯವನ್ನು ಗಮನಿಸುವಂತೆ ಹುಬ್ಬಳ್ಳಿ ನೈಋತ್ಯ ರೈಲ್ವೆ, ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1. ರೈಲು ಸಂಖ್ಯೆ 16552 ಅಶೋಕಪುರಂ - ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್‌ಪ್ರೆಸ್ .2025ರ ಏಪ್ರಿಲ್‌ 23 ಮತ್ತು ಏಪ್ರಿಲ್‌ 25 ರಂದು ಪ್ರಾರಂಭವಾಗುವ ಪ್ರಯಾಣವನ್ನು ಈ ಹಿಂದೆ ಕಟ್ಪಾಡಿ - ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಡುವೆ ಭಾಗಶಃ ರದ್ದುಗೊಳಿಸಲಾಗಿತ್ತು ಮತ್ತು ಕಟ್ಪಾಡಿಯಲ್ಲಿ ಅಲ್ಪಾವಧಿಗೆ ಕೊನೆಗೊಳ್ಳಬೇಕಿತ್ತು. ಆದರೆ ಈಗ ಅದನ್ನು ಪುನಃಸ್ಥಾಪಿಸಲಾಗಿದೆ ಮತ್ತು ಈಗ ಅದರ ನಿಗದಿತ ಮಾರ್ಗದ ಪ್ರಕಾರ ಚಲಿಸಲಿದೆ.

2. ರೈಲು ಸಂಖ್ಯೆ 12607 ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ 2025 ರ ಏಪ್ರಿಲ್‌ 23 ಮತ್ತು ಏಪ್ರಿಲ್‌ 25 ರಂದು ಪ್ರಾರಂಭವಾಗುವ ಪ್ರಯಾಣವನ್ನು ಈ ಹಿಂದೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಮತ್ತು ಕಟ್ಪಾಡಿ ನಡುವೆ ಭಾಗಶಃ ರದ್ದುಗೊಳಿಸಲಾಗಿತ್ತು ಮತ್ತು ಕಟ್ಪಾಡಿಯಿಂದ ಹೊರಡಬೇಕಿತ್ತು, ಈಗ ಅದನ್ನು ಪುನಃಸ್ಥಾಪಿಸಲಾಗಿದೆ ಮತ್ತು ಈಗ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ ಚಲಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೀರೂರು ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ವಿಜಯಪುರ-ಮಂಗಳೂರು ಸೆಂಟ್ರಲ್- ವಿಜಯಪುರ ಎಕ್ಸ್ ಪ್ರೆಸ್ (07377/07378) ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಒದಗಿಸಲಾಗಿರುವ ತಾತ್ಕಾಲಿಕ ನಿಲುಗಡೆಯನ್ನು 2025ರ ಏಪ್ರಿಲ್ 17 ರಿಂದ ಅಕ್ಟೋಬರ್ 16 ರವರೆಗೆ ಆರು ತಿಂಗಳ ಕಾಲ ಮುಂದುವರಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ.

ರೈಲುಗಳ ನಿಲುಗಡೆಗೆ ಅವಕಾಶ

ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 56519/56520 ಕೆಎಸ್ಆರ್ ಬೆಂಗಳೂರು – ಹೊಸಪೇಟೆ – ಕೆಎಸ್ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ಒಂದು ನಿಮಿಷದ ನಿಲುಗಡೆಯನ್ನು ಕಲ್ಪಿಸಲು ನಿರ್ಧರಿಸಿದೆ. ಈ ಸೌಲಭ್ಯವು ಪ್ರಾಯೋಗಿಕವಾಗಿ ಮೂರು ತಿಂಗಳ ಅವಧಿಗೆ ಅಂದರೆ 2025ರ ಜುಲೈ 17 ರವರೆಗೆ ಲಭ್ಯವಿರುತ್ತದೆ. ಈ ರೈಲುಗಳ ಆಗಮನ/ನಿರ್ಗಮನ ಸಮಯವು ಈ ಕೆಳಗಿನಂತಿರಲಿದೆ.

ರೈಲು ಸಂಖ್ಯೆ 56519 ಕೆಎಸ್ಆರ್ ಬೆಂಗಳೂರು – ಹೊಸಪೇಟೆ ದೈನಂದಿನ ಪ್ಯಾಸೆಂಜರ್ ರೈಲು ಹೊಳಲ್ಕೆರೆಗೆ ಬೆಳಿಗ್ಗೆ 09:57 ಗಂಟೆಗೆ ಆಗಮಿಸಿ 09:58 ಗಂಟೆಗೆ ನಿರ್ಗಮಿಸಲಿದೆ. ನಂತರ ಅಮೃತಾಪುರಕ್ಕೆ ಬೆಳಿಗ್ಗೆ 10:30 ಗಂಟೆಗೆ ಆಗಮಿಸಿ 10:31 ಗಂಟೆಗೆ ನಿರ್ಗಮಿಸಲಿದೆ.

ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 56520 ಹೊಸಪೇಟೆ – ಕೆಎಸ್ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲು ಅಮೃತಾಪುರಕ್ಕೆ ಸಂಜೆ 04:45 ಗಂಟೆಗೆ ಆಗಮಿಸಿ 04:46 ಗಂಟೆಗೆ ನಿರ್ಗಮಿಸಲಿದೆ. ನಂತರ ಹೊಳಲ್ಕೆರೆಗೆ ಸಂಜೆ 05:22 ಗಂಟೆಗೆ ಆಗಮಿಸಿ 05:23 ಗಂಟೆಗೆ ನಿರ್ಗಮಿಸಲಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.