ಕನ್ನಡ ಸುದ್ದಿ  /  Karnataka  /  India's First Marina Development At Byndur, Corridor For Ancient Temples In Karnataka: Cm Bommai

Basavaraj Bommai: ಬೈಂದೂರಿನಲ್ಲಿ ಭಾರತದ ಪ್ರಪ್ರಥಮ ಮರೀನಾ ಅಭಿವೃದ್ಧಿ, ರಾಜ್ಯದಲ್ಲಿ ಪುರಾತನ ದೇಗುಲಗಳ ಕಾರಿಡಾರ್‌

ಕರಾವಳಿ ಪ್ರದೇಶದ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಭಾರತದ ಪ್ರಥಮ ಮರೀನಾವನ್ನು ಕರ್ನಾಟಕದ ಬೈಂದೂರಿನಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Basavaraj Bommai: ಕುಂದಾಪುರದ ಬೈಂದೂರಿನಲ್ಲಿ ಭಾರತದ ಪ್ರಪ್ರಥಮ ಮರೀನಾ ಅಭಿವೃದ್ಧಿ, ರಾಜ್ಯದಲ್ಲಿ ಪುರಾತನ ದೇಗುಲಗಳ ಕಾರಿಡಾರ್‌
Basavaraj Bommai: ಕುಂದಾಪುರದ ಬೈಂದೂರಿನಲ್ಲಿ ಭಾರತದ ಪ್ರಪ್ರಥಮ ಮರೀನಾ ಅಭಿವೃದ್ಧಿ, ರಾಜ್ಯದಲ್ಲಿ ಪುರಾತನ ದೇಗುಲಗಳ ಕಾರಿಡಾರ್‌ (HT_PRINT)

ಬೆಂಗಳೂರು: ಕರಾವಳಿ ಪ್ರದೇಶದ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಭಾರತದ ಪ್ರಥಮ ಮರೀನಾವನ್ನು ಕರ್ನಾಟಕದ ಬೈಂದೂರಿನಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಆರ್ ಝಡ್ ಗೆ ಕೇಂದ್ರ ಸರ್ಕಾರದ ಅನುಮತಿ ಪಡೆದು ಬರುವ ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಬೀಚ್ ಪ್ರವಾಸೋದ್ಯಮ , ಯಾತ್ರಾ ಪ್ರವಾಸೋದ್ಯಮ ಅಭಿವೃದ್ಧಿಗೊಳ್ಳಲಿದೆ ಎಂದು ಅವರು ಘೋಷಿಸಿದ್ದಾರೆ. ಸುದ್ದಿ ಪತ್ರಿಕೆ ಮತ್ತು ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಐತಿಹಾಸಿಕ ಪ್ರವಾಸೋದ್ಯಮ : ರಾಜ್ಯವನ್ನಾಳಿದ ಗಂಗರು, ಕದಂಬರು, ರಾಷ್ಟ್ರಕೂಟರು, ಚಾಲುಕ್ಯರು, ಹೊಯ್ಸರ ಕಾಲದ ಇತಿಹಾಸವನ್ನು ಪುರಾತತ್ವ ಇಲಾಖೆಯಿಂದ ಪಡೆದು, ಐತಿಹಾಸಿಕ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯಿಂದ ಪ್ರವಾಸೋದ್ಯಮದ ಅಭಿವೃದ್ಧಿಯ ಜೊತೆಗೆ ಇತಿಹಾಸದ ಅರಿವು ಪಡೆಯಬಹುದಾಗಿದೆ ಎಂದರು.

ಪುರಾತನ ದೇವಾಲಯಗಳ ಕಾರಿಡಾರ್ : ಬನವಾಸಿಯಲ್ಲಿರುವ ಮಧುಕೇಶ್ವರ, ಗಾಣಗಾಪುರ ದತ್ತಾತ್ರೆಯ ಹಲವಾರು ಪುರಾತನ ದೇವಾಲಯಗಳ ಕಾರಿಡಾರ್ ನಿರ್ಮಿಸಿ, ಯಾತ್ರಾ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಲಾಗುವುದು. ಬೆಣಕಲ್ ಪ್ರದೇಶದ ಅಭಿವೃದ್ದಿ ಮಾಡಲು ಸೂಚನೆ ನೀಡಲಾಗಿದೆ. ಅಂಜನಾದ್ರಿ ಬೆಟ್ಟ ಅಭಿವೃದ್ದಿ ಮಾಡಲಾಗುತ್ತಿದೆ ಎಂದರು.

ಪ್ರವಾಸಿ ಮಾರ್ಗದರ್ಶಕರಿಗೆ ಸೌಲಭ್ಯ : ನೋಂದಾಯಿತ ಪ್ರವಾಸಿ ಮಾರ್ಗದರ್ಶಕರಿಗೆ 5000 ಮಾಸಾಶನ ಕೊಡುವ ಯೋಜನೆಯನ್ನು ರೂಪಿಸಲಾಗಿದೆ. ಅವರಿಗೆ ಹೆಚ್ಚಿನ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ತಿಳಿಸಿದರು.

ಸೃಷ್ಟಿ ಬಹಳ ಅದ್ಬುತ. ಮನುಷ್ಯನ ಕಲ್ಪನೆ ಬಹಳ ದೊಡ್ಡದು. ಅದನ್ನು ಮೀರಿರುವುದು ಸೃಷ್ಟಿ,ಪಂಚಭೂತಗಳಿಂದ ಆರಂಭವಾಗಿ, ಬಂಡೆಗಳ ಮೇಲೆ, ಬೆಟ್ಟ ಗುಡ್ಡ, ಸಮುದ್ರದ ಆಳದಲ್ಲಿ ಅದ್ಬುತಗಳಿವೆ‌ . ಶ್ರವಣಬೆಳಗೊಳದ ಬೆಟ್ಟದ ದೊಡ್ಡ‌ಮೂರ್ತಿ ನಿರ್ಮಿಸುವ ರೀತಿಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ. ಗೋಲಗುಂಬಜ್ ನ ವಾಸ್ತುಶಿಲ್ಪ , ವಿಸ್ಪರಿಂಗ್ ಗ್ಯಾಲರಿ ಆಗಿನ ಕಾಲದಲ್ಲಿಯೇ ವೈರ್ ಲೆಸ್ ಕಲ್ಪನೆ ಮಾಡಿರುವುದು ಅದ್ಭುತ. ನಿಸರ್ಗದ ವೈಭವವನ್ನು ನಾವು ಅನುಭವಿಸಬೇಕು ಮತ್ತು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ನಮ್ಮ ನಾಗರೀಕತೆ ದೊಡ್ಡದಿದೆ. ಅದರೆ ನಾಗರಿಕತೆಯೇ ಸಂಸ್ಕೃತಿಯಲ್ಲ. ನಾವೇನು ಇದ್ದೇವೆ ಅದು ನಾಗರಿಕತೆ, ನಾವೇನಾಗಿದ್ದೇವೆ ಅದು ನಮ್ಮ ಸಂಸ್ಕೃತಿ. ಇಂದಿನ ಈ ಕಾರ್ಯಕ್ರಮ ನಾಗರಿಕತೆಯಿಂದ ಸಂಸ್ಕೃತಿಯ ಕಡೆಗಿನ ನಡಿಗೆ ಆಗಿದೆ. ನಮ್ಮ ಶಿಲ್ಪ ಕಲೆಯ ಮುಖಾಂತರ ನಮ್ಮ ಇತಿಹಾಸ, ಸಂಸ್ಕೃತಿಯ ಕಡೆಗೆ ಕರೆದೊಯ್ಯುವ ಕೆಲಸವನ್ನು ಇಂದು ಮಾಡಲಾಗಿದೆ. ಮನುಷ್ಯ ಇತಿಹಾಸದ ಭಾಗವಾಗಬೇಕು ಇಲ್ಲವೇ ಇತಿಹಾಸ ಸೃಷ್ಟಿಸಬೇಕು. ಅನೇಕ ಅದ್ಬುತಗಳಿವೆ ಅವುಗಳನ್ನು ಹುಡುಕುವ ಕೆಲಸ‌‌ಮಾಡಬೇಕಿದೆ. ಮುಂದಿನ ಜನಾಂಗಕ್ಕೆ ನಮ್ಮ ಇತಿಹಾಸವನ್ನು ತೋರಿಸುವ ಕೆಲಸ ಮಾಡಬೇಕಿದೆ. ಸೃಷ್ಡಿ ಕರ್ತನ ಮುಂದೆ ನಾವೆಲ್ಲ ತೃಣ, ಅವನ ಸೃಷ್ಟಿಯನ್ನು ಜನರಿಗೆ ಪರಿಚಯಿಸುವ ಕೆಲಸವನ್ನು ಮಾಡಬೇಕಿದೆ ಎಂದರು

ಪ್ರಯಾಣ ಮಾಡುವುದು ಮನುಷ್ಯನ ಸಹಜ ಗುಣವೇ ಅಭಿವೃದ್ಧಿಗೆ ನಾಂದಿಯಾಗಿದೆ. ಕರ್ನಾಟಕ ನಿಸರ್ಗದತ್ತವಾದ ರಾಜ್ಯ. 350 ಕಿ.ಮೀ ಕರಾವಳಿ, 10 ಹವಾಮಾನ ಪ್ರದೇಶಗಳಿವೆ, 400 ಕಿ.ಮೀ. ಪಶ್ಚಿಮ ಘಟ್ಟವಿದೆ, ವೈವಿಧ್ಯಮಯ ಜೀವರಾಶಿ ಇದೆ, 300 ದಿನ ಸೂರ್ಯನ ಶಾಖ ಬೀಳುತ್ತದೆ. ನದಿಗಳು ಹರಿದಿವೆ‌. ನಿಸರ್ಗ ನಮ್ಮ ಪರವಾಗಿದೆ. ನಿಸರ್ಗವನ್ನು ಮೀರಿ ನಾವು ನಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಾನು ಹಸಿರು ಆಯವ್ಯಯವನ್ನು ಮಾಡಿದ್ದೇನೆ‌‌. ಈ ವರ್ಷ ಆಗಿರುವ ಪರಿಸರ ‌ನಾಶವನ್ನು ನಾವು ತುಂಬಿಕೊಳ್ಳಬೇಕು. ಪ್ರವಾಸೋದ್ಯಮ ನೀತಿಯನ್ನು ರೂಪಿಸಲಾಗಿದೆ ಎಂದರು.

IPL_Entry_Point