ಕನ್ನಡ ಸುದ್ದಿ  /  ಕರ್ನಾಟಕ  /  Cm Siddaramaiah: ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಇನ್ಫೋಸಿಸ್ ಉದ್ಯೋಗಿ ಬಲಿ; ಮೃತಳ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ

CM Siddaramaiah: ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಇನ್ಫೋಸಿಸ್ ಉದ್ಯೋಗಿ ಬಲಿ; ಮೃತಳ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ

ಮಳೆ ಅನಾಹುತದ ಮಾಹಿತಿ ದೊರೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರು ಹಾಗೂ ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೆಆರ್ ವೃತ್ತದ ಅಂಡರ್ ಪಾಸ್‌ ಬಳಿ ಮಳೆ ನೀರಿಗೆ ಬಲಿಯಾದ ಇನ್ಫೋಸಿಸ್ ಉದ್ಯೋಗಿಯ ಕುಟುಂಬಕ್ಕೆ ಸಿಎಂ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ.
ಕೆಆರ್ ವೃತ್ತದ ಅಂಡರ್ ಪಾಸ್‌ ಬಳಿ ಮಳೆ ನೀರಿಗೆ ಬಲಿಯಾದ ಇನ್ಫೋಸಿಸ್ ಉದ್ಯೋಗಿಯ ಕುಟುಂಬಕ್ಕೆ ಸಿಎಂ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ.

ಬೆಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆಯಿಂದ (Bangalore Rain) ಇನ್ಫೋಸಿಸ್‌ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ. ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ 23 ವರ್ಷದ ಭಾನುರೇಖಾ ಎಂಬುವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಟ್ರೆಂಡಿಂಗ್​ ಸುದ್ದಿ

ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು, ಸಂಜೆ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಟಿ ಮೃತ ಭಾನುರೇಖಾ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಮಳೆಯಿಂದಾಗಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಿಕೊಳ್ಳದೆ ವಿಳಂಬ ಮಾಡಿದ್ದರ ಕುರಿತು ಮುಖ್ಯಮಂತ್ರಿಯವರು ತನಿಖೆಗೆ ಆದೇಶಿದ್ದಾರೆ.

ಮಳೆ ಅನಾಹುತದ ಮಾಹಿತಿ ದೊರೆಯುತ್ತಿದ್ದಂತೆ ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮಳೆಯಿಂದ ಉರುಳಿ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಮಳೆ ಅನಾಹುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿ ಸಾರ್ವಜನಿಕರಿಗೆ ತೊಂದರೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೊಸ ಸರ್ಕಾರ ತಕ್ಷಣವೇ ಕಾರ್ಯಪ್ರವೃತವಾಗಬೇಕು - ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಸುರಿದ ಮಳೆಗೆ ಭಾನುರೇಖಾ ಎಂಬ ಯುವತಿ ಕೆ. ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ನೀರಿನಲ್ಲಿ ಸಿಲುಕಿ ಸಾವಿಗೀಡಾದ ಸುದ್ದಿ ತಿಳಿದು ಮನಸಿಗೆ ದುಖವಾಯಿತು. ಮೃತ ಯುವತಿಯ ಆತ್ಮಕ್ಕೆ ಶಾಂತಿ ದೊರಕಿಸಿಕೊಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಹೊಸ ಸರ್ಕಾರ ತಕ್ಷಣವೇ ಕಾರ್ಯಪ್ರವೃತವಾಗಿ ಮಳೆಯಿಂದ ಉಂಟಾಗಬಹುದಾದ ಹಾನಿಯನ್ನು ತಡೆಯಲು ಅಗತ್ಯ ಸಿದ್ದತೆಯನ್ನು ಮಾಡಿಕೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಬೇಕು. ಮಳೆಯಿಂದ ಅಮಾಯಕರು ಜೀವ‌ ಕಳೆದುಕೊಳ್ಳುವುದನ್ನು ತಪ್ಪಿಸಬೇಕು ಎಂದಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮಾಜಿ ಸಿಎಂ ಹೆಚ್‌ಡಿಕೆ ಗರಂ

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಅವರು ಮೃತಪಟ್ಟಿರುವ ಘಟನೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಅವರು ಬಿಬಿಎಂಪಿ ಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂಡರ್ ಪಾಸ್‌ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತಿಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿಯೂ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

IPL_Entry_Point