ಕನ್ನಡ ಸುದ್ದಿ  /  Karnataka  /  Jds Pancharatna Rath Yatra To Start From November 1st

H D Kumaraswamy: 'ನವೆಂಬರ್ 1ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ, ಪಕ್ಷ ಸಂಘಟನೆಗೆ ಒತ್ತು'

ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್ ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿದ್ದೇವೆ. ಈಗಾಗಲೇ ಪಂಚರತ್ನ ಯಾತ್ರೆಗೆ ಪೂರ್ವ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ. ಇದಕ್ಕಾಗಿ ವಾಹನಗಳು ಸಹ ಸಿದ್ದಗೊಳ್ಳುತ್ತಿವೆ ಎಂದರು.

ಹೆಚ್‌ ಡಿ ಕುಮಾರಸ್ವಾಮಿ
ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್ ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಅವರು ಹೇಳಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಪಂಚರತ್ನ ರಥಯಾತ್ರೆ ಬಗ್ಗೆ ಮಾಹಿತಿ ನೀಡಿದ ಅವರು, ಈಗಾಗಲೇ ಪೂರ್ವ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ. ಇದಕ್ಕಾಗಿ ವಾಹನಗಳು ಸಹ ಸಿದ್ದಗೊಳ್ಳುತ್ತಿವೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಸಂಘಟನೆ‌ ಆರಂಭಿಸಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಅಸ್ತಿತ್ವ ಏನು ಎಂಬುದನ್ನು ಈ‌ ಕಾರ್ಯಕ್ರಮಗಳ ಮೂಲಕ ತೋರಿಸುತ್ತೇವೆ ಎಂದರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಜೆಡಿಎಸ್‍ ಪರ ಪ್ರಚಾರಕ್ಕೆ ಬರಲಿದ್ದಾರೆ. ಈ ಬಗ್ಗೆ ಎರಡೂ ಪಕ್ಷಗಳು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

ಅಕ್ಟೋಬರ್‌ 8ರಂದು ಜನತಾ ಮಿತ್ರ ಸಮಾರೋಪ

ಅಕ್ಟೋಬರ್ 8ಕ್ಕೆ ಜನತಾ‌ಮಿತ್ರ ಸಮಾರೋಪ ಸಮಾರಂಭ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮದ್ಯಾಹ್ನ 3 ಘಂಟೆಗೆ ಆಯೋಜಿಸಿದ್ದೇವೆ. ಈ ಸಂಬಂಧ ಪೂರ್ವ ಸಿದ್ದತೆಗಾಗಿ ಚರ್ಚೆ ಮಾಡಲು ಬೆಂಗಳೂರು ನಗರ ಘಟಕದ ಪದಾಧಿಕಾರಿಗಳ ಸಭೆ ಕರೆದಿದ್ದೇನೆ ಎಂದರು.

ಬಿಬಿಎಂಪಿ ಚುನಾವಣಾ ಪ್ರಚಾರ

ಮಳೆಯಿಂದಾಗಿ ಜನತಾ ಮಿತ್ರ ಸಮಾರೋಪ ಕಾರ್ಯಕ್ರಮ ಎರಡು ಬಾರಿ ಮುಂದೂಡಿಕೆ ಆಗಿತ್ತು. ಅ.8ರಂದು ಮಧ್ಯಾಹ್ನ ಈ ಕಾರ್ಯಕ್ರಮ ನಡೆಸಲಾಗುತ್ತದೆ. ಮುಂದಿನ ಬಿಬಿಎಂಪಿ ಚುನಾವಣಾ ಪ್ರಚಾರದ ಸಮಾವೇಶ ಕೂಡ ಇದೇ ಕಾರ್ಯಕ್ರಮದಿಂದ ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದರು.

ಮೆಚ್ಯುರಿಟಿ ಸಿಎಂಗೆ ಇದೆಯಾ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಿಎಂಗೆ ಮೆಚ್ಯುರಿಟಿ ಇದೆಯೇ ಎಂದು ಕೇಳಬೇಕಿದೆ. ಶಾಸಕರ ಶಿಷ್ಟಾಚಾರ ನೀವೇ ಮಾಡಿದ್ದು, ಆದರೆ ಈಗ ಏನಾಯ್ತು. ಕಲಾವಿದರ ಕೋಟಾದಿಂದ ಬಂದವರಿಗೆ 50 ಕೋಟಿ ರೂಪಾಯಿ ಅನುದಾನ ಕೊಡುವುದೆಂದರೆ ಹೇಗೆ? ಕಾರ್ಯಕ್ರಮ ರದ್ದಾಗಿದೆ ಅಂತ ಹಿಂದಿನ ದಿನ ಹೇಳಿದ್ದಾರೆ. ಆದರೆ ಮತ್ತೆ ಯಾಕೆ ಕಾರ್ಯಕ್ರಮ ಮಾಡಿದರು ಎಂದು ಸಿಎಂ ವಿರುದ್ಧ ಗರಂ ಆದರು.

ಸರ್ಕಾರಿ ಕಾರ್ಯಕ್ರಮ ಶಾಸಕರ ನೇತೃತ್ವದಲ್ಲಿ ನಡೆಯಬೇಕು. ನಾನು ಇದನ್ನು ಇಲ್ಲಿಗೆ ಬಿಡುವುದಿಲ್ಲ. ಕಲ್ಲು ತೂರಾಟ ಯಾಕೆ ಆಯ್ತು. ಬೇರೊಂದು ಕಾರ್ಯಕ್ರಮಕ್ಕೆ ಬೇರೆ ಮಾರ್ಗದಲ್ಲಿ ಹೋಗಬಹುದಿತ್ತು. ಶಾಂತಿಯುತವಾಗಿ ಇದ್ದವರನ್ನು ಲಾಠಿ ಚಾರ್ಜ್ ಮಾಡಿದ್ದು ಪೊಲೀಸರು. ಗಲಭೆ ಸೃಷ್ಟಿ ಮಾಡಿದ್ದು ಯಾರು? ತಾಕತ್ ಇದೆ ಅನ್ನುವ ಭಾಷಣ ಮಾಡಿದರಲ್ಲಾ, ನಿಮ್ಮ ಶಾಸಕರನ್ನು ಹದ್ದು ಬಸ್ತಿನಲ್ಲಿ ಇಡದೇ ನನ್ನ ಬಗ್ಗೆ ಮಾತಾಡ್ತೀರಾ ಎಂದು ತಿರುಗೇಟು ನೀಡಿದರು.

IPL_Entry_Point