ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ಇಂದು ಶುರು, 2 ಲಕ್ಷಕ್ಕೂ ಹೆಚ್ಚು ಪರೀಕ್ಷಾರ್ಥಿಗಳು, 70000 ವಿದ್ಯಾರ್ಥಿಗಳಿಂದ ಅಂಕ ಸುಧಾರಣೆ ಪ್ರಯತ್ನ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ಇಂದು ಶುರು, 2 ಲಕ್ಷಕ್ಕೂ ಹೆಚ್ಚು ಪರೀಕ್ಷಾರ್ಥಿಗಳು, 70000 ವಿದ್ಯಾರ್ಥಿಗಳಿಂದ ಅಂಕ ಸುಧಾರಣೆ ಪ್ರಯತ್ನ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ಇಂದು ಶುರು, 2 ಲಕ್ಷಕ್ಕೂ ಹೆಚ್ಚು ಪರೀಕ್ಷಾರ್ಥಿಗಳು, 70000 ವಿದ್ಯಾರ್ಥಿಗಳಿಂದ ಅಂಕ ಸುಧಾರಣೆ ಪ್ರಯತ್ನ

ದ್ವಿತೀಯ ಪಿಯುಸಿ ಪರೀಕ್ಷೆ 2: ಕರ್ನಾಟಕದಲ್ಲಿ ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯು ಏ. 24 ರಿಂದ ಮೇ 8 ರ ವರೆಗೆ ನಡೆಯಲಿದ್ದು, 2.27 ಲಕ್ಷ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಳಿದ ವಿವರ ಇಲ್ಲಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ಇಂದು ಶುರುವಾಗುತ್ತಿದ್ದು, 2 ಲಕ್ಷಕ್ಕೂ ಹೆಚ್ಚು ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 70,000 ವಿದ್ಯಾರ್ಥಿಗಳು ಅಂಕ ಸುಧಾರಣೆಗೆ ಪ್ರಯತ್ನಿಸುತ್ತಿದ್ದಾರೆ. (ಸಾಂಕೇತಿಕ ಚಿತ್ರ)
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ಇಂದು ಶುರುವಾಗುತ್ತಿದ್ದು, 2 ಲಕ್ಷಕ್ಕೂ ಹೆಚ್ಚು ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 70,000 ವಿದ್ಯಾರ್ಥಿಗಳು ಅಂಕ ಸುಧಾರಣೆಗೆ ಪ್ರಯತ್ನಿಸುತ್ತಿದ್ದಾರೆ. (ಸಾಂಕೇತಿಕ ಚಿತ್ರ) (@drnagalakshmi_c)

ದ್ವಿತೀಯ ಪಿಯುಸಿ ಪರೀಕ್ಷೆ 2: ಕರ್ನಾಟಕದಲ್ಲಿ ಇಂದಿನಿಂದ (ಏಪ್ರಿಲ್ 24) ಮೇ 8ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಪರೀಕ್ಷೆ ನಡೆಸುತ್ತಿದ್ದು, ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯು ಏ. 24 ರಿಂದ ಮೇ 8 ರ ವರೆಗೆ ಬೆಳಿಗ್ಗೆ 10 ಗಂಟೆ ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, 2.27 ಲಕ್ಷ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 70,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಂಕ ಸುಧಾರಣೆಗೆ ಪ್ರಯತ್ನ ನಡೆಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ 2 ಇಂದು ಶುರು, 2 ಲಕ್ಷಕ್ಕೂ ಹೆಚ್ಚು ಪರೀಕ್ಷಾರ್ಥಿಗಳು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಇಂದಿನಿಂದ ಮೇ 8 ರ ತನಕ ನಡೆಸುತ್ತಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆ 2ರಲ್ಲಿ 2.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 1.57 ಲಕ್ಷ ವಿದ್ಯಾರ್ಥಿಗಳು ಒಂದು ಅಥವಾ ಹೆಚ್ಚು ವಿಷಯಗಳಲ್ಲಿ ಅನುತ್ತೀರ್ಣರಾದವರು. ಅದರಲ್ಲಿ ಉತ್ತೀರ್ಣರಾಗುವುದಕ್ಕೆ ಬಯಸಿ ಪರೀಕ್ಷೆ ಬರೆಯುತ್ತಿದ್ದಾರೆ. ಇದೇ ವೇಳೆ, ಪರೀಕ್ಷೆ 1 ರಲ್ಲಿ ಉತ್ತೀರ್ಣರಾಗಿದ್ದರೂ 70,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಅಂಕ ಸುಧಾರಣೆಗಾಗಿ ಪರೀಕ್ಷೆ 2 ಬರೆಯುತ್ತಿದ್ದಾರೆ. ಕಳೆದ ವರ್ಷ ಅಂಕ ಸುಧಾರಣೆಗಾಗಿ ಪರೀಕ್ಷೆ ಬರೆದವರ ಸಂಖ್ಯೆ 42,000ದಷ್ಟು ಇತ್ತು. ಈ ಬಾರಿ ಈ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ 2ರ ವೇಳಾಪಟ್ಟಿ

ಏಪ್ರಿಲ್ 24: ಕನ್ನಡ, ಅರೇಬಿಕ್

ಏಪ್ರಿಲ್ 25: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ

ಏಪ್ರಿಲ್ 26: ಭೌತಶಾಸ್ತ್ರ, ಇತಿಹಾಸ

ಏಪ್ರಿಲ್ 28 : ಭೂಗೋಳಶಾಸ್ತ್ರ, ಮನಃ ಶಾಸ್ತ್ರ, ರಾಸಾಯನಶಾಸ್ತ್ರ, ಮೂಲಗಣಿತ

ಮೇ 2: ತರ್ಕಶಾಸ್ತ್ರ ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ

ಮೇ 3: ಸಮಾಜಶಾಸ್ತ್ರ ಭೂಗರ್ಭಶಾಸ್ತ್ರ ವಿದ್ಯುನ್ಮಾನ ಶಾಸ್ತ್ರ ಗಣಕ ವಿಜ್ಞಾನ

ಮೇ 6: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ

ಮೇ 8: ತಮಿಳು, ತೆಲುಗು, ಉರ್ದು, ಮಲಯಾಳಂ, ಮರಾಠಿ, ಸಂಸ್ಕೃತ, ಫ್ರೆಂಚ್, ಎನ್‌ಎಸ್‌ಕ್ಯೂಎಫ್‌

ಪರೀಕ್ಷಾ ಕೆಂದ್ರಗಳಲ್ಲಿ ವೆಬ್‌ಕಾಸ್ಟಿಂಗ್‌, ಅಕ್ರಮ ತಡೆಗೆ ಕ್ರಮ

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಸಶಸ್ತ್ರ ಪೊಲೀಸ್ ರಕ್ಷಣೆಯನ್ನು ಒದಗಿಸಲಾಗಿದೆ. ಪರೀಕ್ಷಾ ಅಕ್ರಮ ತಡೆಯುವುದಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿಯನ್ನು ಆನ್ಲೈನ್ ಲಾಗಿನ್ ಪೋರ್ಟಲ್ ಮೂಲಕ ಪಡೆಯಲಾಗುತ್ತದೆ. ಪರೀಕ್ಷಾ ದಿನಗಳಂದು ಪ್ರಶ್ನೆಪತ್ರಿಕೆ ವಿತರಕರ ತಂಡಗಳೊಂದಿಗೆ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಅಳವಡಿಸಲಾಗಿದ್ದು, ಸಿಸಿಟಿವಿ ವೆಬ್ ಕಾಸ್ಟಿಂಗ್ ವೀಕ್ಷಿಸಲು ವಿಶೇಷ ತಂಡಗಳ ರಚನೆಯಾಗಿದೆ ಎಂದು ಮಂಡಳಿ ಮೂಲಗಳು ತಿಳಿಸಿವೆ.

ಪರೀಕ್ಷೆ-2: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣ

ದ್ವಿತೀಯ ಪಿಯು ಪರೀಕ್ಷೆ-2 ಬರೆಯುವ ಬೆಂಗಳೂರು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ. ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಬಸ್‌ಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಬಸ್‌ಗಳು ಕಾರ್ಯಾಚರಿಸಲಿವೆ. ಅಗತ್ಯವಿದ್ದರೆ ಹೆಚ್ಚುವರಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡುವುದಾಗಿ ಬಿಎಂಟಿಸಿ ಹೇಳಿದೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.