ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿದ ಹೈಕೋರ್ಟ್, ಏನಿದು ಪ್ರಕರಣ
ಕನ್ನಡ ಸುದ್ದಿ  /  ಕರ್ನಾಟಕ  /  ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿದ ಹೈಕೋರ್ಟ್, ಏನಿದು ಪ್ರಕರಣ

ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿದ ಹೈಕೋರ್ಟ್, ಏನಿದು ಪ್ರಕರಣ

ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ ಎಫ್‌ಐಆರ್‌ಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ ಐಐಎಸ್ಸಿ ಮಾಜಿ ಸಹಾಯಕ ಪ್ರಾಧ್ಯಾಪಕ ಈ ಕೇಸ್ ದಾಖಲಿಸಿದ್ದರು. (ವರದಿ- ಎಚ್.ಮಾರುತಿ, ಬೆಂಗಳೂರು)

ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ ಎಫ್‌ಐಆರ್‌ಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ ಎಫ್‌ಐಆರ್‌ಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಮುಂಚೂಣಿ ಸಂಸ್ಥೆ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಎಫ್‌ ಐ ಆರ್‌ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಭಾರತೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದ ಕ್ರಿಸ್ ಗೋಪಾಲಕೃಷ್ಣನ್ ಮತ್ತು ಭೋದಕ ವರ್ಗದ ಇತರ 15 ಮಂದಿ ವಿರುದ್ಧ 1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಎಫ್‌ ಐ ಆರ್‌ ದಾಖಲಾಗಿತ್ತು. ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ಸಹಾಯಕ ಪ್ರಾಧ್ಯಾಪಕ ಡಾ. ಡಿ.ಸಣ್ಣದುರ್ಗಪ್ಪ ಜಾತಿ ಆಧಾರಿತ ಶೋಷಣೆ ಪ್ರಕರಣವನ್ನು ಕ್ರಿಸ್‌ ಮತ್ತಿತರರ ವಿರುದ್ಧ ದೂರು ದಾಖಲಿಸಿದ್ದರು.

ನ್ಯಾಯಾಲಯ ಈ ದೂರನ್ನು “ಕಾನೂನಿನ ಪ್ರಕ್ರಿಯೆಯ ದುರ್ಬಳಕೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ದೂರುದಾರರ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಲು ಅನುಮತಿಯನ್ನೂ ನೀಡಿದೆ. ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಈ ಆದೇಶ ಹೊರಡಿಸಿದ್ದಾರೆ. ಕ್ರಿಸ್‌ ವಿರುದ್ಧದ ದೂರು ಅರ್ಜಿದಾರರಿಗೆ ಕಿರುಕುಳ ನೀಡುವ ದುರುದ್ದೇಶಪೂರಿತ ಪ್ರಯತ್ನ ಎಂದು ವ್ಯಾಖ್ಯಾನಿಸಿದ್ದಾರೆ.

ಏನಿದು ಪ್ರಕರಣ?

ಐಐಎಸ್‌ ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌, ರಿಜಿಸ್ಟ್ರಾರ್‌ ಕ್ಯಾ.ಶ್ರೀಧರ್‌ ವಾರಿಯರ್‌ ಮತ್ತು ಇತರ ಭೋದಕರ ವಿರುದ್ಧ ಎಸ್‌ ಸಿ ಸಮುದಾಯಕ್ಕೆ ಸೇರಿದವರಾದ ಸಣ್ಣದುರ್ಗಪ್ಪ ಖಾಸಗಿ ದೂರು ದಾಖಲಿಸಿದ್ದರು. ಅರ್ಜಿದಾರರು ತಮ್ಮ ಜಾತಿ ಕಾರಣಕ್ಕೆ ಶೋಷಣೆ ಮಾಡಿದ್ದಾರೆ, ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ ಮತ್ತು ತನಿಖೆ ನಡೆಸದೆ ತಮ್ಮನ್ನು ಉದ್ಯೋಗದಿಂದ ವಜಾಗೊಳಿಸಿದ್ದಾರೆ ಎಂದು ಆರೋಪಿಸಿದ್ದರು.

ಈ ಖಾಸಗಿ ದೂರಿನ ಆಧಾರದ ಮೇಲೆ ಈ ಎಫ್‌ಐಆರ್‌ ದಾಖಲಾಗಿತ್ತು. 2014 ರಲ್ಲಿ ಲೈಂಗಿಕ ಕಿರುಕುಳ ಆರೋಪ ಕುರಿತಾದ ಆಂತರಿಕ ತನಿಖೆಯ ಬಳಿಕ ಸಣ್ಣ ದುರ್ಗಪ್ಪ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಒಪ್ಪಂದದ ಪ್ರಕಾರ ಸಣ್ಣದುರ್ಗಪ್ಪ ಅವರನ್ನು ವಜಾಗೊಳಿಸಿರುವುದನ್ನು ರಾಜೀನಾಮೆಯಾಗಿ ಪರಿವರ್ತಿಸಲಾಗಿತ್ತು. ಆ ಪ್ರಕಾರ ಅವರು ದಾಖಲಿಸಿದ್ದ ಪ್ರಕರಣಗಳನ್ನು ಹಿಂಪಡೆಯುವ ಒಪ್ಪಂದವಾಗಿತ್ತು. ದುರ್ಗಪ್ಪ ಅವರಿಗೆ ನಿವೃತ್ತಿ ನಂತರ ಸಿಗಬೇಕಾದ ಸೌಲಭ್ಯಗಳೆಲ್ಲವೂ ಸಿಕ್ಕಿದ್ದವು. ಆಗಿನ ಒಪ್ಪಂದದ ಭಾಗವಾಗಿ ಸಣ್ಣ ದುರ್ಗಪ್ಪ ಅವರು ಸಂಸ್ಥೆ ಮತ್ತು ಅದರ ಪ್ರತಿನಿಧಿಗಳ ವಿರುದ್ಧದ ಎಲ್ಲಾ ದೂರುಗಳು ಮತ್ತು ಕಾನೂನು ಪ್ರಕರಣಗಳನ್ನು ಹಿಂಪಡೆಯಲು ಒಪ್ಪಿಕೊಂಡಿದ್ದರು.

ಒಪ್ಪಂದ ಉಲ್ಲಂಘಿಸಿ ಎರಡು ಖಾಸಗಿ ದೂರು

ಒಪ್ಪಂದದ ನಂತರವೂ ದುರ್ಗಪ್ಪ ಅವರು ಎಸ್‌ಸಿ, ಎಸ್‌ಟಿ, ನಿಯಂತ್ರಣಾ ಕಾಯಿದೆ-1989ರ ಪ್ರಕಾರ 2016 ಮತ್ತು 2017 ರಲ್ಲಿ ಎರಡು ಖಾಸಗಿ ದೂರುಗಳನ್ನು ದಾಖಲಿಸಿದ್ದರು. ಸಿವಿಲ್‌ ವಿವಾದಕ್ಕೆ ಕ್ರಿಮಿನಲ್‌ ಬಣ್ಣ ನೀಡಲಾಗಿದೆ ಎಂದು ನ್ಯಾಯಾಲಯ ಈ ಎರಡೂ ಎಫ್‌ಐಆರ್‌ಗಳನ್ನು 2022 ಮತ್ತು 2023 ರಲ್ಲಿ ರದ್ದುಗೊಳಿಸಿತ್ತು. ಮೊದಲ ಎರಡು ದಾಖಲಿಸಿದ್ದ ಪ್ರಕರಣಗಳ ದೂರುಗಳನ್ನೇ ಆಧರಿಸಿ 2025 ರಲ್ಲಿ ಮೂರನೇ ದೂರು ದಾಖಲಿಸಿದ್ದರು. ಭಾರತೀಯ ವಿಜ್ಞಾನ ಸಂಸ್ಥೆಯ ವಕೀಲರು ತಮಗೆ ಬೆದರಿಕೆ ಒಡ್ಡಿದ್ದಾರೆ ಮತ್ತು ತಮ್ಮ ವಕೀಲರ ಪರವಾನಗಿಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆಪಾದಿಸಿ ಕ್ರಿಸ್‌ ಗೋಪಾಲಕೃಷ್ಣನ್‌, ರಂಗರಾಜನ್‌ ಮತ್ತಿತರರ ವಿರುದ್ಧ ಆಪಾದಿಸಿದ್ದರು. ಇದೀಗ ಹೈಕೋರ್ಟ್‌ ಈ ಪ್ರಕರಣವನ್ನೂ ವಜಾಗೊಳಿಸಿದೆ.

ಪ್ರಕಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದನ್‌ ಗೌಡರ್‌ ಅವರು, ಈ ಪ್ರಕಣದಲ್ಲಿ ಯಾವುದೇ ಹುರುಳಿಲ್ಲ. ಪ್ರಸ್ತುತ ಎಫ್‌ಐಆರ್‌ನಲ್ಲೂ ಸಮಾನ ಆರೋಪಗಳಿದ್ದು, ಇದು ನ್ಯಾಯಾಲಯ ಪ್ರಕ್ರಿಯೆಯ ದುರ್ಬಳಕೆಯಾಗಿದೆ. ದ್ವೇಷಕ್ಕೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು.

ಕ್ರಿಸ್ ಗೋಪಾಲಕೃಷ್ಣನ್ ಮತ್ತು ಇತರ ಅರ್ಜಿದಾರರಿಗೆ ದುರ್ಗಪ್ಪ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ದಾಖಲಿಸಲು ಅಡ್ವೊಕೇಟ್ ಜನರಲ್‌ ರಿಂದ ಅನುಮತಿ ಪಡೆಯಲು ಕರ್ನಾಟಕ ಹೈಕೋರ್ಟ್‌ ಅವಕಾಶ ನೀಡಿದೆ.

(ವರದಿ- ಎಚ್.ಮಾರುತಿ, ಬೆಂಗಳೂರು)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.