ಕರ್ನಾಟಕ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ, ಶೇ 1.50ರಷ್ಟು ಏರಿಸಿ ಆದೇಶ; ನೌಕರರ ಸಂಘ ಸ್ವಾಗತ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ, ಶೇ 1.50ರಷ್ಟು ಏರಿಸಿ ಆದೇಶ; ನೌಕರರ ಸಂಘ ಸ್ವಾಗತ

ಕರ್ನಾಟಕ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ, ಶೇ 1.50ರಷ್ಟು ಏರಿಸಿ ಆದೇಶ; ನೌಕರರ ಸಂಘ ಸ್ವಾಗತ

ಕರ್ನಾಟಕ ಸರ್ಕಾರಿ ನೌಕರರಿಗೆ ಸರ್ಕಾರವು ಶೇ.1.50ರಷ್ಟು ತುಟ್ಟಿ ಭತ್ಯೆಯನ್ನು 2025ರ ಜನವರಿ 1ರಿಂದಲೇ ಜಾರಿಗೆ ಬರುವ ಹೊರಡಿಸಿದ್ದು ಸರ್ಕಾರಿ ನೌಕರರ ಸಂಘವು ಸ್ವಾಗತಿಸಿದೆ.

ಕರ್ನಾಟಕ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಏರಿಸಲಾಗಿದೆ.
ಕರ್ನಾಟಕ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಏರಿಸಲಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ತುಟ್ಟಿಭತ್ಯೆ(Dearness Allowance)ಯನ್ನು ಹೆಚ್ಚಿಸಿ ಸೋಮವಾರ ಆದೇಶ ಹೊರಡಿಸಿದೆ. ನೌಕರರಿಗೆ ತುಟ್ಟಿಭತ್ಯೆ ಶೇ.1.50 ರಷ್ಟು ಹೆಚ್ಚಳ ಮಾಡಲಾಗಿದೆ. ನೌಕರರು ತಮ್ಮ ಮೂಲ ವೇತನದ ಶೇ 10.75ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಹೊಸ ಆದೇಶದಿಂದಾಗಿ ಒಟ್ಟು ತುಟ್ಟಿಭತ್ಯೆ ಪ್ರಮಾಣ ಶೇ 12.25ಕ್ಕೆ ಏರಿಕೆಯಾಗಲಿದೆ. ಈ ಕುರಿತು ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಕಟಣೆ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಮಸ್ತ ಕರ್ನಾಟಕ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಕಳೆದ ಮಾರ್ಚ್‌ನಲ್ಲಿಯೇ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ. 2ರಷ್ಟು ಏರಿಸಿ ಆದೇಶ ಹೊರಡಿಸಿತ್ತು ಕರ್ನಾಟಕ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಿಸಬೇಕು ಎನ್ನುವ ಬೇಡಿಕೆಗಳಿದ್ದವು. ಸರ್ಕಾರದಿಂದ ಪರಿಶೀಲಿಸುವ ಭರವಸೆ ದೊರೆತಿತ್ತು. ಬಜೆಟ್‌ ನಂತರ ಪರಿಗಣಿಸುವ ಸೂಚನೆಯೂ ದೊರಕಿತ್ತು. ಈಗ ಅದನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಆರು ತಿಂಗಳ ಹಿಂದೆಯಷ್ಟೇ ಅಂದರೆ ಕಳೆದ ವರ್ಷದ ನವೆಂಬರ್‌ನಲ್ಲಿ ತುಟ್ಟಿಭತ್ಯೆಯನ್ನು ಕರ್ನಾಟಕ ಸರ್ಕಾರಿ ಏರಿಸಿತ್ತು. ಮೂಲವೇತನದ ಶೇ 8.50ರಷ್ಟು ತುಟ್ಟಿ ಭತ್ಯೆಯನ್ನು ಆರ್ಥಿಕ ಇಲಾಖೆಯ ಆದೇಶದ ಬಳಿಕ ಅದನ್ನು ಶೇ 10.75ಕ್ಕೆ ಹೆಚ್ಚಿಸಲಾಗಿತ್ತು. ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ ನೌಕರರಿಗೆ ಇದರ ಉಪಯೋಗ ದೊರೆತಿತ್ತು. ಇದಾದ ಬಳಿಕ ಈಗ ನೌಕರರು ತಮ್ಮ ಮೂಲ ವೇತನದ ಶೇ 10.75ರಷ್ಟು ತುಟ್ಟಿಭತ್ಯೆಯ ಬದಲಿಗೆ ಹೊಸ ಆದೇಶದಿಂದಾಗಿ ಶೇ 12.25ಕ್ಕೆ ತುಟ್ಟಿ ಭತ್ಯೆ ಪಡೆಯಲಿದ್ದಾರೆ.

ತುಟ್ಟಿ ಭತ್ಯೆ (DA) ಎಂಬುದು ಸರ್ಕಾರವು ಸಾರ್ವಜನಿಕ ವಲಯದ ಹಾಲಿ ಮತ್ತು ನಿವೃತ್ತ ಸದಸ್ಯರಿಗೆ ಒದಗಿಸುವ ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದೆ. ಸರ್ಕಾರಿ ನೌಕರರ ಮೂಲ ವೇತನದ ಶೇಕಡಾವಾರು ಪ್ರಮಾಣವನ್ನು ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ಡಿಎ ಜೀವನ ವೆಚ್ಚಕ್ಕೆ ನೇರವಾಗಿ ಸಂಬಂಧಿಸಿರುವುದರಿಂದ, ಡಿಎ ಅಂಶವು ವಿಭಿನ್ನ ಉದ್ಯೋಗಿಗಳಿಗೆ ಅವರ ಸ್ಥಳವನ್ನು ಆಧರಿಸಿ ವಿಭಿನ್ನವಾಗಿರುತ್ತದೆ. ಇದರರ್ಥ ನಗರ ವಲಯ, ಅರೆ-ನಗರ ವಲಯ ಅಥವಾ ಗ್ರಾಮೀಣ ವಲಯದ ಉದ್ಯೋಗಿಗಳಿಗೆ ಡಿಎ ವಿಭಿನ್ನವಾಗಿರುತ್ತದೆ. ಕಾಲಕಾಲಕ್ಕೆ ಇದನ್ನು ಪರಿಷ್ಕರಣೆ ಮಾಡಲಾಗುತ್ತದೆ. ಕರ್ನಾಟಕದಲ್ಲೂ ಈ ಪರಿಷ್ಕರಣೆ ಈಗ ಮಾಡಲಾಗಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.