ವಿದ್ಯುತ್‌ ವಿತರಣೆ ಉಚಿತ, ಸ್ಮಾರ್ಟ್‌ ಮೀಟರ್‌ ಶುಲ್ಕ ಅತ್ಯಧಿಕ: ಬೆಸ್ಕಾಂ ನೀತಿ ವಿರುದ್ದ ಹೈಕೋರ್ಟ್‌ ಮೊರೆ ಹೋದ ಗ್ರಾಹಕಿಗೆ ಸಿಕ್ಕಿತು ಬೆಂಬಲ
ಕನ್ನಡ ಸುದ್ದಿ  /  ಕರ್ನಾಟಕ  /  ವಿದ್ಯುತ್‌ ವಿತರಣೆ ಉಚಿತ, ಸ್ಮಾರ್ಟ್‌ ಮೀಟರ್‌ ಶುಲ್ಕ ಅತ್ಯಧಿಕ: ಬೆಸ್ಕಾಂ ನೀತಿ ವಿರುದ್ದ ಹೈಕೋರ್ಟ್‌ ಮೊರೆ ಹೋದ ಗ್ರಾಹಕಿಗೆ ಸಿಕ್ಕಿತು ಬೆಂಬಲ

ವಿದ್ಯುತ್‌ ವಿತರಣೆ ಉಚಿತ, ಸ್ಮಾರ್ಟ್‌ ಮೀಟರ್‌ ಶುಲ್ಕ ಅತ್ಯಧಿಕ: ಬೆಸ್ಕಾಂ ನೀತಿ ವಿರುದ್ದ ಹೈಕೋರ್ಟ್‌ ಮೊರೆ ಹೋದ ಗ್ರಾಹಕಿಗೆ ಸಿಕ್ಕಿತು ಬೆಂಬಲ

ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ಗ್ರಾಹಕರಿಗೆ ಸ್ಮಾರ್ಟ್‌ ಮೀಟರ್‌ ಹೆಸರಿನಲ್ಲಿ ಹೇರಲು ಉದ್ದೇಶಿಸಿದ್ದ ಅಧಿಕ ಶುಲ್ಕಕ್ಕೆ ಕರ್ನಾಟಕ ಹೈಕೋರ್ಟ್‌ ತಪರಾಕಿ ಹಾಕಿ ಯೋಜನೆಗೆ ಮಧ್ಯಂತರ ತಡೆ ನೀಡಿದೆ.

ಬೆಸ್ಕಾಂನ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಯೋಜನೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.
ಬೆಸ್ಕಾಂನ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಯೋಜನೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ನೀವು ಜನರಿಗೆ ಉಚಿತವಾಗಿ ನೀಡುತ್ತೀದ್ದೀರಿ, ಜನರೇನು ಉಚಿತವಾಗಿ ವಿದ್ಯುತ್‌ ಕೊಡಿ ಎಂದು ಕೇಳಿದ್ದರಾ, ಈಗ ಪ್ರೀಪೇಯ್ಡ್ ಸ್ಮಾರ್ಟ್‌ಮೀಟರ್‌ ಹೆಸರಿನಲ್ಲಿ ಭಾರೀ ಶುಲ್ಕು ವಸೂಲಿ ಮಾಡುತ್ತಿದ್ದೀರಿ, ಬಡವರಿಂದ ಇಷ್ಟು ಹಣ ಕಿತ್ತುಕೊಂಡರೆ ಅವರು ಎಲ್ಲಿಗೆ ಹೋಗಬೇಕು. ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೆ ಬಡವರೇನು ಏನು ಮಾಡಬೇಕು ಎಂದು ನೀವೇ ಹೇಳಿ. ಕೂಡಲೇ ಸ್ಮಾರ್ಟ್‌ ಮೀಟರ್‌ಗೆ ದುಬಾರಿ ಶುಲ್ಕ ಹಾಕುವುದನ್ನು ನಿಲ್ಲಿಸಿ. ಗ್ರಾಹಕರಿಗೆ ಅನಗತ್ಯ ಹೊರೆ ತಪ್ಪಿಸಿ. ಇದು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ( Bescom)ಗೆ ಕರ್ನಾಟಕ ಹೈಕೋರ್ಟ್‌ ನೀಡಿದ ತಪರಾಕಿ. ಬೆಸ್ಕಾಂನ ಪ್ರೀಪೇಯ್ಡ್ ಮೀಟರ್ ಶುಲ್ಕ‌ಕ್ಕೆ ಮಧ್ಯಂತರ ತಡೆ ಆದೇಶ ಹೊರಡಿಸಿದ್ದು. ಬೆಂಗಳೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ, ಕೋಲಾರ, ರಾಮನಗರ ಸಹಿತ ಎಂಟು ಜಿಲ್ಲೆಗಳ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.

ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿಯ ಸ್ಮಾರ್ಟ್​ ಮೀಟರ್​​ ಅಳವಡಿಕೆಗೆ ಆರಂಭಿಕ ಅಡ್ಡಿಯಾಗಿದೆ. ವಿದ್ಯುತ್‌ ಬಳಕೆ ಸಂಬಂಧ ರಿಯಲ್ ಟೈಂನಲ್ಲಿ ವಿದ್ಯುತ್ ಬಳಕೆ ಬಗ್ಗೆ ನಿಖರ ಮಾಹಿತಿ ಒದಗಿಸುವ ಸ್ಮಾರ್ಟ್‌ ಮೀಟರ್‌ಗಳಿಗೆ ಹೆಚ್ಚುವರಿ ದರ ನಿಗದಿ ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್‌ ಸ್ಮಾರ್ಟ್​ ಮೀಟರ್​​ ಶುಲ್ಕಕ್ಕೆ ಮಧ್ಯಂತರ ತಡೆ ಕೊಟ್ಟಿದೆ. 2000 ರೂಪಾಯಿ ಇದ್ದ ಮೀಟರ್‌ಗೆ ಈಗ 8910 ರೂ. ಕೊಡಬೇಕಿದೆ ಎಂದು ಬೆಸ್ಕಾಂ ಕ್ರಮ ಪ್ರಶ್ನಿಸಿ ಬೆಂಗಳೂರಿನ ಜಯಲಕ್ಷ್ಮೀ ಎಂಬುವವರು ಸಾರ್ವಜನಿಕತ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.‌ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಬಡವರಿಂದ ಇಷ್ಟು ಹಣ ಕಿತ್ತುಕೊಂಡರೆ ಅವರು ಎಲ್ಲಿಗೆ ಹೋಗಬೇಕು. ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೆ ಬಡವರೇನು ಮಾಡಬೇಕು ಹೇಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಬೆಸ್ಕಾಂನ ಪ್ರೀಪೇಯ್ಡ್ ಮೀಟರ್ ಶುಲ್ಕ‌ಕ್ಕೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.

2000 ರೂ. ಇದ್ದ ಮೀಟರ್‌ಗೆ ಈಗ 8910 ರೂ. ವಿಧಿಸಿರುವ ಬೆಸ್ಕಾಂ ಕ್ರಮ ಪ್ರಶ್ನಿಸಿ ಜಯಲಕ್ಷ್ಮೀ ಎನ್ನುವರು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ವಿವರಿಸಿದ್ದರು. ಬೇರೆ ರಾಜ್ಯಗಳಲ್ಲಿ 900 ರೂ.ಗೆ ಪ್ರೀಪೇಯ್ಡ್ ಮೀಟರ್ ನೀಡಲಾಗುತ್ತಿದೆ. ಕೆಇಆರ್‌ಸಿ ಸ್ಮಾರ್ಟ್ ಮೀಟರ್ ಕಡ್ಡಾಯವಲ್ಲವೆಂದಿತ್ತು. ಆದರೆ ಬೆಸ್ಕಾಂ ಸುತ್ತೋಲೆ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು.

ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯವು ಅಸಮಾಧನವನ್ನು ಹೊರ ಹಾಕಿತು. ನಿಮ್ಮಿಂದ ಯಾರು ಫ್ರೀ ವಿದ್ಯುತ್ ಕೇಳಿದ್ದರು?. ಬಡವರಿಂದ ಇಷ್ಟು ಹಣ ಕಿತ್ತರೆ ಎಲ್ಲಿಗೆ ಹೋಗಬೇಕು? ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೆ ಬಡವರೇನು ಮಾಡಬೇಕು? ಎಂದು ದುಬಾರಿ ಪ್ರೀಪೇಯ್ಡ್ ವಿದ್ಯುತ್ ಮೀಟರ್‌ಗೆ ಅಸಮಾಧಾನ ವ್ಯಕ್ತಪಡಿಸಿತು.. ಕೊನೆಗೆ ಬೆಸ್ಕಾಂನ ಪ್ರೀಪೇಯ್ಡ್ ಮೀಟರ್ ಶುಲ್ಕ‌ಕ್ಕೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.

ಸ್ಮಾರ್ಟ್‌ ವಿದ್ಯುತ್‌ ಮೀಟರ್‌ ಒಂದು ರೀತಿಯಲ್ಲಿ ಮೊದಲೇ ಪಾವತಿಸಿ ವಿದ್ಯುತ್‌ ಬಳಸುವ ವ್ಯವಸ್ಥೆ. ಪ್ರೀಪೇಯ್ಡ್‌ ಸಿಮ್‌ ಕಾರ್ಡ್‌ಗಳನ್ನು ರೀಚಾರ್ಜ್‌ ಮಾಡಿಸಿ ತಮಗೆ ಬೇಕಾದಷ್ಟು ಟಾಕ್‌ ಟೈಮ್‌ ಹಾಗೂ ಇಂಟರ್‌ನೆಟ್‌ ಡೇಟಾ ಪಡೆಯಬಹುದು. ಹಾಗೆಯೇ, ಗ್ರಾಹಕರು ಪ್ರೀಪೇಯ್ಡ್‌ ವಿದ್ಯುತ್‌ ಮೀಟರ್‌ಗಳನ್ನು ಆನ್‌ಲೈನ್‌ ಮೂಲಕ ಅಥವಾ ಸಮೀಪದ ವಿದ್ಯುತ್‌ ವಿತರಣಾ ಕಚೇರಿಗಳಲ್ಲಿ ರೀಚಾರ್ಜ್‌ ಮಾಡಿಸಿ ತಮಗೆ ಬೇಕಾದಷ್ಟು ಯೂನಿಟ್‌ಗಳನ್ನು ಪಡೆಯಬಹುದು. ಪ್ರೀಪೇಯ್ಡ್‌ ಸಿಮ್‌ ಕಾರ್ಡ್‌ಗಳ ರೀತಿಯಲ್ಲೇ ಪ್ರೀಪೇಯ್ಡ್‌ ಸ್ಮಾರ್ಟ್‌ ಮೀಟರ್‌ಗಳೂ ಕಾರ್ಯ ನಿರ್ವಹಿಸುತ್ತವೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.