ಬೆಂಗಳೂರಲ್ಲಿ ಬಿಸಿಲು, ದಕ್ಷಿಣ ಕನ್ನಡ, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಹೀಗಿರಲಿದೆ ಇಂದು ಕರ್ನಾಟಕದ ಹವಾಮಾನ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಲ್ಲಿ ಬಿಸಿಲು, ದಕ್ಷಿಣ ಕನ್ನಡ, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಹೀಗಿರಲಿದೆ ಇಂದು ಕರ್ನಾಟಕದ ಹವಾಮಾನ

ಬೆಂಗಳೂರಲ್ಲಿ ಬಿಸಿಲು, ದಕ್ಷಿಣ ಕನ್ನಡ, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಹೀಗಿರಲಿದೆ ಇಂದು ಕರ್ನಾಟಕದ ಹವಾಮಾನ

Karnataka Weather: ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಇಂದು ಸುಡುಬಿಸಿಲು ಕಾಡಲಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ನೀಡಿದ ಕರ್ನಾಟಕದ ಹವಾಮಾನ ಮುನ್ಸೂಚನೆ ವರದಿ ಹೇಳಿದೆ. ಅದರ ವಿವರ ಇಲ್ಲಿದೆ.

ಕರ್ನಾಟಕ ಹವಾಮಾನ ಮಾರ್ಚ್ 27; ಬೆಂಗಳೂರಲ್ಲಿ ಬಿಸಿಲು, ದಕ್ಷಿಣ ಕನ್ನಡ, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ತಿಳಿಸಿದೆ.
ಕರ್ನಾಟಕ ಹವಾಮಾನ ಮಾರ್ಚ್ 27; ಬೆಂಗಳೂರಲ್ಲಿ ಬಿಸಿಲು, ದಕ್ಷಿಣ ಕನ್ನಡ, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ತಿಳಿಸಿದೆ.

Karnataka Weather: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮಾರ್ಚ್ 27) ಗರಿಷ್ಠ ತಾಪಮಾನ ಹೆಚ್ಚಳವಾಗಲಿದ್ದು, ಸುಡುಬಿಸಲು ಕಾಡಲಿದೆ. ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಕೊಡಗು ಸೇರಿ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ಪ್ರಕಟಿಸಿರುವ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಇಂದು; ಗರಿಷ್ಠ ತಾಪಮಾನ 34ಕ್ಕೆ ಏರಿಕೆ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತೆ ಗರಿಷ್ಠ ತಾಪಮಾನ ಹೆಚ್ಚಳವಾಗತೊಡಗಿದೆ. ಬೆಂಗಳೂರಿಗರಿಗೆ ಬೇಸಿಗೆಯ ಸುಡುಬಿಸಲ ಬೇಗೆ ಮತ್ತೆ ಕಾಡಲಾರಂಭಸಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರಗಳಲ್ಲಿ ಇಂದು (ಮಾರ್ಚ್‌ 27) ಗರಿಷ್ಠ ತಾಪಮಾ 34 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್ ಇರಲಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ರಾಜವೇಲ್ ಮಣಿಕ್ಕಮ್ ತಿಳಿಸಿದ್ಧಾರೆ.

ಬೆಂಗಳೂರು ನಗರದಲ್ಲಿ ನಿನ್ನೆ (ಮಾರ್ಚ್ 26) ಗರಿಷ್ಠ ತಾಪಮಾನ 33.4 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 22.9 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮನ 33.3 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ ಎಂಧು ರಾಜವೇಲ್ ಮಣಿಕ್ಕಮ್ ತಿಳಿಸಿದ್ದಾರೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ, ತೇವಾಂಶ ಬೆಳಿಗ್ಗೆ 8.30 ಗಂಟೆಗೆ

ಬೆಂಗಳೂರು ನಗರ - ತಾಪಮಾನ 23.6 ಡಿಗ್ರಿ ಸೆಲ್ಶಿಯಸ್‌, ತೇವಾಂಶ ಶೇ 79

ಮಂಗಳೂರು - ತಾಪಮಾನ 25 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 74

ಚಿತ್ರದುರ್ಗ - ತಾಪಮಾನ 34 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 38

ಗದಗ - ತಾಪಮಾನ 22 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 86

ಹೊನ್ನಾವರ - ತಾಪಮಾನ 25.6 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 90

ಕಲಬುರಗಿ - ತಾಪಮಾನ 37 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 57

ಬೆಳಗಾವಿ - ತಾಪಮಾನ 21 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 83

ಕಾರವಾರ - ತಾಪಮಾನ 32.4 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 64

ಕರ್ನಾಟಕ ಹವಾಮಾನ ಇಂದು; ದಕ್ಷಿಣ ಕನ್ನಡ, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು (ಮಾರ್ಚ್ 27) ಹಗುರ ಅಥವಾ ಸಾಧಾರಣ ಮಳೆಯಾಗಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಮುಂದಿನ 5 ದಿನಗಳ ಅವಧಿಯಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ವ್ಯತ್ಯಾಸ ಇರಲ್ಲ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು ಪ್ರದೇಶದಲ್ಲಿ ಇಂದು ಗರಿಷ್ಠ ತಾಪಮಾನ ಹೆಚ್ಚಳವಾಗಲಿದ್ದು, ನಾಳೆಯಿಂದ 2 ರಿಂದ 4 ಡಿಗ್ರಿ ಸೆಲ್ಶಿಯಸ್‌ನಷ್ಟು ತಾಪಮಾನ ಹೆಚ್ಚಳವಾಗಬಹುದು. ಕನಿಷ್ಠ ತಾಪಮಾನದಲ್ಲೂ ಏರಿಕೆಯಾಗಲಿದ್ದು, ಮುಂದಿನ 5 ದಿನಗಳ ಅವಧಿಯಲ್ಲಿ 2 ರಿಂದ 3 ಡಿಗ್ರಿ ಸೆಲ್ಶಿಯಸ್ ನಷ್ಟು ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ವರದಿ ವಿವರಿಸಿದೆ.

ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಮಳೆಯಾಗಬಹುದು. ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ, ಇರಲಿದೆ. ಮುಂದಿನ ಎರಡು ದಿನಗಳ ಅವಧಿಯಲ್ಲಿ ತಾಪಮಾನದಲ್ಲಿ ಏರಿಕೆಯಾಗಲಿದೆ. ಕನಿಷ್ಠ ಹಾಗೂ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಶಿಯಸ್ ಹೆಚ್ಚಳವಾಗಬಹುದು ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner