ಬೆಂಗಳೂರು, ಬೀದರ್ ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ, ಹೀಗಿರಲಿದೆ ಇಂದಿನ ಹವಾಮಾನ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು, ಬೀದರ್ ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ, ಹೀಗಿರಲಿದೆ ಇಂದಿನ ಹವಾಮಾನ

ಬೆಂಗಳೂರು, ಬೀದರ್ ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ, ಹೀಗಿರಲಿದೆ ಇಂದಿನ ಹವಾಮಾನ

ಇಂದಿನ ಹವಾಮಾನ: ಕರ್ನಾಟಕದ ಬೆಂಗಳೂರು, ಬೀದರ್ ಸೇರಿ 13 ಜಿಲ್ಲೆಗಳಲ್ಲಿ ಇಂದು (ಮೇ 6) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣಹವೆ ಇರಬಹುದು. ಭಾರತೀಯ ಹವಾಮಾನ ಇಲಾಖೆ ನೀಡಿರುವ ಕರ್ನಾಟಕ ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನ ಹವಾಮಾನ ಹೀಗಿರಲಿದೆ.

ಬೆಂಗಳೂರು, ಬೀದರ್ ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣಹವೆ ಕಾಡಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಇಂದಿನ ಹವಾಮಾನ ವಿವರ ನೀಡಿದೆ.
ಬೆಂಗಳೂರು, ಬೀದರ್ ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣಹವೆ ಕಾಡಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಇಂದಿನ ಹವಾಮಾನ ವಿವರ ನೀಡಿದೆ.

ಇಂದಿನ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರು, ಉತ್ತರ ಒಳನಾಡಿನ ಬೀದರ್, ಯಾದಗಿರಿ ಸೇರಿ 13 ಜಿಲ್ಲೆಗಳಲ್ಲಿ ಇಂದು (ಮೇ 6) ಹಗುರದಿಂದ ಸಾಧಾರಣ ಮಳೆಯಾಗಬಹುದು. ಉಳಿದೆಡೆ ಒಣಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ ಹೆಚ್ಚಳವಾಗಿ ಸುಡು ಬಿಸಿಲು ಕಾಡಬಹುದು. ಮಳೆ ಕಡಿಮೆಯಾದ ಕಡೆಗೆ ತಾಪಮಾನ ಹೆಚ್ಚಳ ಕಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಬೆಂಗಳೂರು ಹವಾಮಾನ; ಮೋಡ ಕವಿದ ವಾತಾವರಣ, ಹಗುರ ಮಳೆ

ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 6) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿ ಬೀಸಲಿದ್ದು, ಹಗುರ ಮಳೆಯಾಗಬಹುದು ಅಥವಾ ಗುಡುಗು ಸಹಿತ ಮಳೆಯಾಗಬಹುದು.

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 6) ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿನ್ನೆ (ಮೇ 5) ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21.7 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಇದೇ ರೀತಿ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಗರಿಷ್ಠ ತಾಪಮಾನ 34.3 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ ಎಂದು ವಿಜ್ಞಾನಿ ಡಾ ರಾಜವೇಲ್ ಮಣಿಕ್ಕಮ್ ತಿಳಿಸಿದ್ದಾರೆ.

ಪ್ರಮುಖ ನಗರಗಳ ತಾಪಮಾನ ಮತ್ತು ತೇವಾಂಶ ವಿವರ

ಕರ್ನಾಟಕದ ಪ್ರಮುಖ ನಗರಗಳ ಇಂದು (ಮೇ 6) ಬೆಳಿಗ್ಗೆ 6.30ಕ್ಕೆ ದಾಖಲಾಗಿರುವ ತಾಪಮಾನ ಮತ್ತು ತೇವಾಂಶ ವಿವರ ಹೀಗಿದೆ.

ಬೆಂಗಳೂರು ನಗರ - ತಾಪಮಾನ 25 ಡಿಗ್ರಿ ಸೆಲ್ಶಿಯಸ್‌, ತೇವಾಂಶ ಶೇ 79

ಮಂಗಳೂರು - ತಾಪಮಾನ 26 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 78

ಚಿತ್ರದುರ್ಗ - ತಾಪಮಾನ 23.2 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 88

ಗದಗ - ತಾಪಮಾನ 23 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 86

ಹೊನ್ನಾವರ - ತಾಪಮಾನ 31.6 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 65

ಕಲಬುರಗಿ - ತಾಪಮಾನ 28.4 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 44

ಬೆಳಗಾವಿ - ತಾಪಮಾನ 26 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 84

ಕಾರವಾರ - ತಾಪಮಾನ 34 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 65

ಕರ್ನಾಟಕ ಹವಾಮಾನ; 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ

ಕರಾವಳಿ ಕರ್ನಾಟಕ ಹವಾಮಾನ: ಕರಾವಳಿ ಕರ್ನಾಟಕದ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಉಳಿದಂತೆ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು ಹವಾಮಾನ: ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಕಡೆ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಅಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಇನ್ನುಳಿದ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಸುಡುಬಿಸಿಲು ಕಾಡಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹವಾಮಾನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಗುಡುಗು ಸಹಿತ ಮಳೆ ಅಥವಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಂದಿನ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.