ಉಡುಪಿ, ದ.ಕನ್ನಡದಲ್ಲಿ ಭಾರೀ ಮಳೆ; ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ, ಪ್ರವಾಸಿಗರಿಗೂ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆ ಆಗಲಿದ್ದು ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಂದ ಎಚ್ಚರಿಕೆ ನೀಡಲಾಗಿದೆ. ಸಮುದ್ರ ತೀರಕ್ಕೆ ಹೋಗುವ ಪ್ರವಾಸಿಗರಿಗೆ ಕೂಡಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕ ಹವಾಮಾನ ಜೂನ್ 26: ಇಂದು ಬೆಳಗ್ಗೆ 05:56ಕ್ಕೆ ಸೂರ್ಯೋದಯವಾಗಿದ್ದು ಸಂಜೆ 6:49ಕ್ಕೆ ಸೂರ್ಯಾಸ್ತವಾಗಲಿದೆ. 10:22 ಕ್ಕೆ ಚಂದ್ರೋಯವಾಗಲಿದ್ದು ನಾಳೆ ಬೆಳಗ್ಗೆ 09:55ಕ್ಕೆ ಚಂದ್ರ ಮುಳುಗಲಿದ್ದಾನೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದು ರಾಜ್ಯ ರಾಜಧಾನಿ ಬೆಂಗಳೂರಿನ ವಾತಾವರಣ 21.8 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇಂದಿನ ರಾಜ್ಯದ ಹವಾಮಾನ ಈ ರೀತಿ ಇದೆ.
ನಿನ್ನೆ ಎಲ್ಲೆಲ್ಲಿ, ಎಷ್ಟು ಮಳೆ ಆಯ್ತು?
ಮಣಿ ಕುಂದಾಪುರದಲ್ಲಿ 8 ಸೆಮೀ, ಆಗುಂಬೆಯಲ್ಲಿ 7 ಸೆಮೀ ಮಳೆ ಆಗಿದೆ. ಉಳಿದಂತೆ ಉಡುಪಿ , ಧರ್ಮಸ್ಥಳ, ಮಂಕಿ, ಶಿರಾಲಿ, ಗೇರ್ಸೊಪ್ಪ, ಪಣಂಬೂರಿನದಲ್ಲಿ ತಲಾ 6 ಸೆಮೀ, ದಿದ್ದಾಪುರ, ಕುಮಟಾ, ಸುಳ್ಯ, ಮಂಗಳೂರು, ಉಪ್ಪಿನಂಗಡಿ, ಕೊಪ್ಪ, ಕೊಟ್ಟಿಗೆಹಾರ, ಕಾರವಾರದಲ್ಲಿ ತಲಾ 5 ಸೆಮೀ, ಕಾರ್ಕಳ, ಪುತ್ತೂರು, ಭಾಗಮಂಡಲ, ಕದ್ರಾ, ಮಂಗಳೂರು ವಿಮಾನ ನಿಲ್ದಾಣ, ಮೂಲ್ಕಿ, ಯಲ್ಲಾಪುರ, ಸಿದ್ದಾಪುರ ಲೋಂಡಾ, ಸೋಮವಾರಪೇಟೆ, ಶೃಂಗೇರಿ, ಕಳಸ, ಹುಂಚದ ಕಟ್ಟೆ, ಕೋಟಾದಲ್ಲಿ ತಲಾ 2 ಸೆಮೀ, ತಾಳಗುಪ್ಪ, ಜಯಪುರ, ನಾಪೋಕ್ಲು, ಬಾಳೆ ಹೊನ್ನೂರಿನಲ್ಲಿ ತಲಾ 1 ಸೆಮೀ ಮಳೆ ಆಗಿದೆ.
ಇಂದು ಎಲ್ಲಿ ಮಳೆ ಆಗಲಿದೆ
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗಾ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ.
ಯಾವ ಸ್ಥಳದಲ್ಲಿ ಎಚ್ಚರಿಕೆ ಅಗತ್ಯ?
ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರತ್ಯೇಕ ಬಾರೀ ಮಳೆಯಿಂದ ಅತಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಗಂಟೆಗೆ 35 - 45 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದ. ಕನ್ನಡ , ಕರ್ನಾಟಕ ಮುಲ್ಕಿಯಿಂದ ಮಂಗಳೂರಿನವರೆಗೆ ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿ ಭಾಗದಲ್ಲಿ 3.3 ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳಿದ್ದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಹಾಗೇ ಸಮುದ್ರ ತೀರಕ್ಕೆ ಹೋಗುವ ಪ್ರವಾಸಿಗರಿಗೂ ಜಾಗ್ರತೆಯಾಗಿರುವಂತೆ ಸೂಚಿಸಲಾಗಿದೆ.
ಬೆಂಗಳೂರಿನ ವಾತಾವರಣ
ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆ ಆಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇದೆ. ಮುಂದಿನ 48 ಗಂಟೆಗಳಲ್ಲಿ ಇದೇ ವಾತಾವರಣ ಮುಂದುವರೆಯಲಿದೆ.
ಇಂದು ಪ್ರಮುಖ ನಗರಗಳ ವಾತಾವರಣ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 26) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ಹವಾಮಾನ ವಿವರ.
ಬೆಂಗಳೂರು - 21.8°ಸೆ.
ಮಂಗಳೂರು- 23°ಸೆ.
ಚಿತ್ರದುರ್ಗ- 23°ಸೆ.
ಗದಗ- 23.2°ಸೆ.
ಹೊನ್ನಾವರ- 25°ಸೆ.
ಕಲಬುರ್ಗಿ- 24.6°ಸೆ.
ಬೆಳಗಾವಿ- 23°ಸೆ.
ಕಾರವಾರ- 27.6°ಸೆ.
