ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 10: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಬಿಸಿಯ ಝಳಕ್ಕೆ ಬಸವಳಿದ ಜನ; ಬೆಳಗಾವಿಯಲ್ಲಿ ಅತಿ ಕಡಿಮೆ ಉಷ್ಣಾಂಶ

ಕರ್ನಾಟಕ ಹವಾಮಾನ ಮಾರ್ಚ್ 10: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಬಿಸಿಯ ಝಳಕ್ಕೆ ಬಸವಳಿದ ಜನ; ಬೆಳಗಾವಿಯಲ್ಲಿ ಅತಿ ಕಡಿಮೆ ಉಷ್ಣಾಂಶ

Karnataka Weather today:

ಬೆಂಗಳೂರಿನಲ್ಲಿ ಬಿಸಿಯ ಝಳ ಹೆಚ್ಚಾಗುತ್ತಲೇ ಇದೆ. ಮಾರ್ಚ್ 10ರ ಭಾನುವಾರ ಕರ್ನಾಟಕದ ಹವಾಮಾನವನ್ನು ತಿಳಿಯಿರಿ.
ಬೆಂಗಳೂರಿನಲ್ಲಿ ಬಿಸಿಯ ಝಳ ಹೆಚ್ಚಾಗುತ್ತಲೇ ಇದೆ. ಮಾರ್ಚ್ 10ರ ಭಾನುವಾರ ಕರ್ನಾಟಕದ ಹವಾಮಾನವನ್ನು ತಿಳಿಯಿರಿ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದಾದ್ಯಂತ ಒಣಹವೆ (Karnataka Weather Today March 10) ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆಯಾಗಿಲ್ಲ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಕಳೆದ 48 ಗಂಟೆಗಳ ಹವಾಮಾನ ವರದಿ ಪ್ರಕಾರ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಇಂದು (ಮಾರ್ಚ್ 10, ಸೋಮವಾರ) ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಮುಂಜಾನೆ ವೇಳೆಯಲ್ಲಿ ಸ್ವಲ್ಪ ಚಳಿಯ ವಾತಾವರಣವಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಬಿಸಿ ಸಾಮಾನ್ಯಕ್ಕಿಂತ ಹೆಚ್ಚಾಗುತ್ತಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಏರಿಕೆಯಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾವರಣ ಇರಲಿದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ. ಅಂದರೆ -1.6 ಡಿಗ್ರಿ ಸೆಲ್ಸಿಯಸ್‌ನಿಂದ 3.0 ಡಿಗ್ರಿ ಸೆಲ್ಸಿಯಸ್‌ ವರೆಗೆ ಇಳಿಕೆಯಾಗಿದೆ. ಕಲಬುರಗಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ 39.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದಲ್ಲಿ ಕಡಿಮೆ ಉಷ್ಣಾಂಶ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಾರ್ಚ್ 10ರ ಭಾನುವಾರ ಬೆಂಗಳೂರು ಹವಾಮಾನ

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.

2023-24ನೇ ಸಾಲಿನಲ್ಲಿ ಎಲ್ ನಿನೊ ಕ್ರಮೇಣ ದುರ್ಬಲಗೊಳ್ಳುತ್ತಿದೆ. ಆದರೂ ಇದು ಬೇಸಿಗೆಯಲ್ಲಿ ಬಿಸಿಯನ್ನು ಉತ್ತೇಜಿಸುವ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರಲಿದೆ ಎಂದು ಹವಾಮಾನ ವರದಿಯಲ್ಲಿ ಹೇಳಲಾಗಿದೆ. ಫೆಬ್ರವರಿಯಿಂದಲೇ ರಾಜ್ಯದಲ್ಲಿ ಬಿಸಿಯ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಕಳೆದ ಕೆಲವು ದಿನಗಳಿಂದ ಬೆಂಗಳೂರು ಜನರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ.

(This copy first appeared in Hindustan Times Kannada website. To read more like this please logon to kannada.hindustantimes.com )

IPL_Entry_Point

ವಿಭಾಗ