ಕರ್ನಾಟಕ ಹವಾಮಾನ: ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ರಾಜ್ಯದೆಲ್ಲಡೆ ಅಲ್ಲಲ್ಲಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ರಾಜ್ಯದೆಲ್ಲಡೆ ಅಲ್ಲಲ್ಲಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ಹವಾಮಾನ: ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ರಾಜ್ಯದೆಲ್ಲಡೆ ಅಲ್ಲಲ್ಲಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ಹವಾಮಾನ:ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ರಾಜ್ಯದೆಲ್ಲಡೆ ಅಲ್ಲಲ್ಲಿ ಮಳೆಯಾಗಬಹುದು. ಉಳಿದೆಡೆ ಒಣಹವೆ ಮತ್ತು ತಾಪಮಾನ ಹೆಚ್ಚಳವಾಗು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಇಲ್ಲಿದೆ ಇಂದಿನ ಹವಾಮಾನ ವಿವರ.

ಕರ್ನಾಟಕ ಹವಾಮಾನ: ಫೆಬ್ರವರಿ ಮಾರ್ಚ್‌ನಲ್ಲಿ ಸುಡುಬಿಸಿಲು ಇರಲಿದ್ದು, ಏಪ್ರಿಲ್ ಮೇ ಉತ್ತಮ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸಚಿವರ ಸಭೆಯ ಚರ್ಚೆ ವೇಳೆ ತಿಳಿಸಿದ್ದಾರೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ: ಫೆಬ್ರವರಿ ಮಾರ್ಚ್‌ನಲ್ಲಿ ಸುಡುಬಿಸಿಲು ಇರಲಿದ್ದು, ಏಪ್ರಿಲ್ ಮೇ ಉತ್ತಮ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸಚಿವರ ಸಭೆಯ ಚರ್ಚೆ ವೇಳೆ ತಿಳಿಸಿದ್ದಾರೆ. (ಸಾಂಕೇತಿಕ ಚಿತ್ರ) (HT News)

ಕರ್ನಾಟಕ ಹವಾಮಾನ: ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 29) ಅಲ್ಲಲ್ಲಿ ಮಳೆಯಾಗಬಹುದು. ಕೆಲವು ಕಡೆಗಳಲ್ಲಿ ಗುಡುಗು, ಸಿಡಿಲು ಮತ್ತು ಬೀಸುಗಾಳಿಯೊಂದಿಗೆ (ಗಂಟೆಗೆ 30 ರಿಂದ 60 ಕಿಮೀ ವೇಗದ ಗಾಳಿ) ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಎಲ್ಲೆಡೆ ಒಣಹವೆ ಮುಂದುವರಿಯಲ್ಲಿದ್ದು, ಕೆಲವು ಪ್ರದೇಶಗಳಲ್ಲಿ ತಾಪಮಾನ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ತಿಳಿಸಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ; ಇಂದಿನ ಹವಾಮಾನ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದ ಇಂದಿನ ಹವಾಮಾನ ವಿವರ ನೀಡಿರುವ ಹವಾಮಾನ ಇಲಾಖೆ, ಭಾಗಶಃ ಮೋಡಕವಿದ ವಾತಾವರಣ ಸಾಧ್ಯತೆಯನ್ನು ಉಲ್ಲೇಖಿಸಿದೆ. ಅದೇ ರೀತಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಅಥವಾ 40 ರಿಂದ 50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಬಹುದು. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ಹೇಳಿದೆ. ಬೆಂಗಳೂರು ನಗರದಲ್ಲಿ ನಿನ್ನೆ ಗರಿಷ್ಠ ತಾಪಮಾನ 33.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 35.1 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ರಾಜವೇಲ್ ಮಣಿಕ್ಕಮ್ ತಿಳಿಸಿದ್ದಾರೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ ಮತ್ತು ತೇವಾಂಶ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ ಮತ್ತು ತೇವಾಂಶ ವಿವರ (ಬೆಳಿಗ್ಗೆ 6.30ಕ್ಕೆ)

ಬೆಂಗಳೂರು ನಗರ - ತಾಪಮಾನ 25.6 ಡಿಗ್ರಿ ಸೆಲ್ಶಿಯಸ್‌, ತೇವಾಂಶ ಶೇ 77

ಮಂಗಳೂರು - ತಾಪಮಾನ 27 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 84

ಚಿತ್ರದುರ್ಗ - ತಾಪಮಾನ 24 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 84

ಗದಗ - ತಾಪಮಾನ 23.6 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 89

ಹೊನ್ನಾವರ - ತಾಪಮಾನ 31.6 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 69

ಕಲಬುರಗಿ - ತಾಪಮಾನ 36.3 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 14

ಬೆಳಗಾವಿ - ತಾಪಮಾನ 25 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 89

ಕಾರವಾರ - ತಾಪಮಾನ 34.6 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 61

ಕರ್ನಾಟಕ ಹವಾಮಾನ: ಇಂದಿನ ಮಳೆ ಹವಾಮಾನ

ಕರಾವಳಿ ಕರ್ನಾಟಕ ಮಳೆ ಹವಾಮಾನ: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಇಂದು ಮಳೆಯಾಗಬಹುದು. ಕೆಲವು ಕಡೆ 30 ರಿಂದ 40 ಕಿಮೀ ವೇಗದ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ವಿವರಿಸಿದೆ.

ಉತ್ತರ ಕರ್ನಾಟಕ ಹವಾಮಾನ: ಬಾಗಲಕೋಟೆ, ಬೀದರ್, ವಿಜಯಪುರ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಇಂದು ಮಳೆಯಾಗಬಹುದು. ಕೆಲವು ಕಡೆ ಗಂಟೆಗೆ 50 ರಿಂದ 60 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಮಳೆಯಾಗಬಹುದು. ಬಾಗಲಕೋಟೆ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಉಂಟಾಗಲಿದ್ದು, ಕೆಲವು ಕಡೆ 44 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ತಾಪಮಾನ ಕಂಡುಬರಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ದಕ್ಷಿಣ ಒಳನಾಡು ಹವಾಮಾನ: ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಇನ್ನು ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಹಾಗೂ ಗಂಟೆಗೆ 40 ರಿಂದ 50 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.