ಮಂಗಳೂರಿನಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ, ಸನ್ನದ್ದವಾಗಿರಲು ಜನತೆಗೆ ರೆಡ್ಕ್ರಾಸ್ ಸಂಸ್ಥೆ ಸಲಹೆ
ಮಂಗಳೂರಿನಲ್ಲಿ ಬುಧವಾರ ಸಂಜೆ ಅಗ್ನಿ ಶಾಮಕ ಪಡೆಯವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೂ ಅಣಕು ಕವಾಯತು ಪ್ರದರ್ಶನವನ್ನು ಹಮ್ಮಿಕೊಂಡಿದ್ದರು.ವರದಿ: ಹರೀಶ ಮಾಂಬಾಡಿ. ಮಂಗಳೂರು

ಮಂಗಳೂರು : ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯುವ ರೆಡ್ಕ್ರಾಸ್ ಉಪಸಮಿತಿ, ಯುವ ರೆಡ್ಕ್ರಾಸ್ ಮಂಗಳೂರು ವಿ.ವಿ. ಘಟಕ ಮತ್ತು ಪಾದುವ ಪದವಿ ಕಾಲೇಜು ಸಹಯೋಗದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ಬುಧವಾರ ಮಂಗಳೂರು ನಗರದ ಪಾದುವಾ ಕಾಲೇಜಿನ ಮೈದಾನದಲ್ಲಿ ನಡೆಯಿತು. ಸಂಭಾವ್ಯ ವಾಯು ಅಥವಾ ಭಯೋತ್ಪಾದಕ ದಾಳಿಗಳ ಸಮಯದಲ್ಲಿ ಇಲಾಖೆಗಳ ನಡುವೆ ನೈಜ-ಸಮಯದ ಸಮನ್ವಯವನ್ನು ಸಾಧಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.
ಮುಖ್ಯ ಅತಿಥಿಯಾಗಿದ್ದ ನಿವೃತ್ತ ಸೇನಾಧಿಕಾರಿ ಕರ್ನಲ್.ಕೆ.ಜಯಚಂದ್ರನ್ ಮಾತನಾಡಿ ‘ ಭಾರತ ಇಂದು ದೇಶದ ಹೊರಗೆ ಮತ್ತು ಒಳಗೆ ಸವಾಲುಗಳನ್ನು ಎದುರಿಸುತ್ತಿದೆ. ದೇಶದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ದೇಶದ ನಾಗರಿಕರಲ್ಲಿ ಆತ್ಮ ವಿಶ್ವಾಸ ಮೂಡಿಸುವ ಸಲುವಾಗಿ ದೇಶಾದ್ಯಂತ ಪೂರ್ವ ಸಿದ್ಧತಾ ತಾಲೀಮು ನಡೆಸಲಾಗುತ್ತಿದೆ ಭಾರತೀಯ ಸೇನೆ ಈಗ ಸಶಕ್ತವಾಗಿದ್ದು ಆಪರೇಶನ್ ಸಿಂಧೂರ ಮೂಲಕ ಪಾಕಿಸ್ತಾನದ ಭಯೋತ್ಪಾದಕರಿಗೆ ಸೂಕ್ತ ಉತ್ತರ ನೀಡಿದೆ ’ಎಂದರು.
ಅಧ್ಯಕ್ಷತೆ ವಹಿಸಿದ್ದ ರೆಡ್ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ ಪಾಕಿಸ್ತಾನದ ವಿರುದ್ಧ ಯುದ್ಧ ಅನಿವಾರ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಸಂಭಾವ್ಯ ಅನಾಹುತಗಳನ್ನು ತಡೆಯಲು ನಾಗರಿಕರು ಕೂಡಾ ಸಜ್ಜಾಗಬೇಕು’ಎಂದರು.
ಪಾದುವಾ ಕಾಲೇಜಿನ ಪ್ರಾಂಶುಪಾಲ ಫಾ.ಅರುಣ್ ವಿಲ್ಸನ್ ಲೋಬೊ, ಅಗ್ನಿಶಾಮಕ ದಳದ ಕದ್ರಿ ಠಾಣೆಯ ಅಧಿಕಾರಿ ವೆಂಕಟೇಶ್, ಯುವ ರೆಡ್ಕ್ರಾಸ್ ಮಂಗಳೂರು ವಿ.ವಿ. ಘಟಕದ ನೋಡಲ್ ಆಫೀಸರ್ ಡಾ.ಗಾಯತ್ರಿ.ಎನ್. ಮುಖ್ಯ ಅತಿಥಿಗಳಾಗಿದ್ದರು. ರೆಡ್ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕರಾದ ಪಿ.ಬಿ.ಹರೀಶ್ ರೈ, ಗುರುದತ್ ಕಾಮತ್, ಸಲಹೆಗಾರ ಸುಧಾಕರ್ ಉಪಸ್ಥಿತರಿದ್ದರು. ಯುವ ರೆಡ್ಕ್ರಾಸ್ ಉಪ ಸಮಿತಿಯ ನಿರ್ದೇಶಕ ಸಚೇತ್ ಸುವರ್ಣ ಸ್ವಾಗತಿಸಿ, ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್ಚಂದ್ರ ಹೆಗ್ಡೆ ವಂದಿಸಿದರು. ಪಾದುವಾ ಕಾಲೇಜಿನ ಯುವ ರೆಡ್ಕ್ರಾಸ್ ಸಂಯೋಜನಾಧಿಕಾರಿ ರೋಶನ್ ಸಾಂತುಮೇಯರ್ ಕಾರ್ಯಕ್ರಮ ನಿರೂಪಿಸಿದರು. ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗ್ನಿ ನಂದಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.
ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಗೆ ಭಾರತದ ರಾತ್ರೋರಾತ್ರಿ ಮಿಲಿಟರಿ ಪ್ರತಿಕ್ರಿಯೆಯಾದ 'ಆಪರೇಷನ್ ಸಿಂಧೂರ್' ನಂತರ ಈ ಅಭ್ಯಾಸದ ಸಮಯ ಬಂದಿದೆ. ಮೇ 7 ರ ಮುಂಜಾನೆ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಗುರಿಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ, ಇದನ್ನು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸಲು ಬಳಸಲಾಗುತ್ತಿದೆ ಎಂದು ಗುಪ್ತಚರ ಸಂಸ್ಥೆಗಳು ತಿಳಿಸಿವೆ.
ಆಪರೇಷನ್ ಅಭ್ಯಾಸ್ ಅಣಕು ಅಭ್ಯಾಸಗಳು ವಿಶಾಲವಾದ ರಾಷ್ಟ್ರೀಯ ಆಕಸ್ಮಿಕ ಮತ್ತು ಸನ್ನದ್ಧತಾ ಯೋಜನೆಯ ಭಾಗವಾಗಿದ್ದು, ಉಲ್ಬಣ ಅಥವಾ ಪ್ರತೀಕಾರದ ಸಂದರ್ಭದಲ್ಲಿ ನಾಗರಿಕ ರಕ್ಷಣಾ ಕಾರ್ಯವಿಧಾನಗಳು ದೃಢವಾಗಿವೆ ಎಂದು ಖಚಿತಪಡಿಸುತ್ತದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ನಾಗರಿಕ ರಕ್ಷಣಾ ಮತ್ತು ಗೃಹರಕ್ಷಕ ದಳದ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್ ಅವರು ಜಿಲ್ಲಾಡಳಿತ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಸಮನ್ವಯದೊಂದಿಗೆ ಬೆಂಗಳೂರು ವ್ಯಾಯಾಮದ ಮೇಲ್ವಿಚಾರಣೆ ನಡೆಸಿದ್ದರು.
ಮುಂಬರುವ ದಿನಗಳಲ್ಲಿ ಕರ್ನಾಟಕದ ಇತರ ನಗರಗಳಾದ ರಾಯಚೂರು, ಕಾರವಾರ, ಮಂಗಳೂರು ಮೈಸೂರು ಮತ್ತು ಮಂಡ್ಯದಲ್ಲಿ ಇಂತಹ ಹೆಚ್ಚಿನ ಅಭ್ಯಾಸಗಳನ್ನು ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದಿ: ಹರೀಶ ಮಾಂಬಾಡಿ. ಮಂಗಳೂರು