ಮಂಗಳೂರು: ಪಡಿತರ ಚೀಟಿದಾರರನ್ನು ಹೊರತುಪಡಿಸಿ ಉಳಿದ ಸದಸ್ಯರ ಇ ಕೆವೈಸಿ ಮರುಸಂಗ್ರಹಕ್ಕೆ ಏ 30 ಡೆಡ್‌ಲೈನ್; ಗಮನಿಸಬೇಕಾದ 8 ಅಂಶಗಳಿವು
ಕನ್ನಡ ಸುದ್ದಿ  /  ಕರ್ನಾಟಕ  /  ಮಂಗಳೂರು: ಪಡಿತರ ಚೀಟಿದಾರರನ್ನು ಹೊರತುಪಡಿಸಿ ಉಳಿದ ಸದಸ್ಯರ ಇ ಕೆವೈಸಿ ಮರುಸಂಗ್ರಹಕ್ಕೆ ಏ 30 ಡೆಡ್‌ಲೈನ್; ಗಮನಿಸಬೇಕಾದ 8 ಅಂಶಗಳಿವು

ಮಂಗಳೂರು: ಪಡಿತರ ಚೀಟಿದಾರರನ್ನು ಹೊರತುಪಡಿಸಿ ಉಳಿದ ಸದಸ್ಯರ ಇ ಕೆವೈಸಿ ಮರುಸಂಗ್ರಹಕ್ಕೆ ಏ 30 ಡೆಡ್‌ಲೈನ್; ಗಮನಿಸಬೇಕಾದ 8 ಅಂಶಗಳಿವು

ಇ ಕೆವೈಸಿ ಮಾಡಲಾದ ಪಡಿತರ ಚೀಟಿದಾರರನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ ಕೆವೈಸಿ ಮಾಡಿಸುವುದಕ್ಕೆ ಏಪ್ರಿಲ್ 30ರ ತನಕ ಕಾಲಾವಕಾಶ ಇದೆ. ಅಷ್ಟರೊಳಗೆ ನ್ಯಾಯಬೆಲೆ ಅಂಗಡಿಗೆ ತೆರಳಿ ಕೆವೈಸಿ ಮಾಡಿಸುವುದು ಒಳಿತು. ಇದಕ್ಕೆ ಸಂಬಂಧಿಸಿ ಗಮನಿಸಬೇಕಾದ 8 ಅಂಶಗಳ ವಿವರ ಹೀಗಿದೆ.

ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ತಿಳಿಸಿದೆ.
ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ತಿಳಿಸಿದೆ.

ಮಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ಮಾಡಲಾದ ಪಡಿತರ ಚೀಟಿದಾರರನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ಮಾಡಿಸುವುದಕ್ಕೆ ಕೊನೆಯ ಅವಕಾಶ ನೀಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ತಿಳಿಸಿದೆ. ನ್ಯಾಯಬೆಲೆ ಅಂಗಡಿಗಳ ಮೂಲಕ ಇ ಕೆವೈಸಿ ಮಾಡಿಸುವುದಕ್ಕೆ ಸರ್ಕಾರದ ಸೂಚನೆ ಇದ್ದು, ಏಪ್ರಿಲ್ 30 ರ ಒಳಗೆ ಈ ಕಾರ್ಯ ಮಾಡಬೇಕು. ಆ ಬಳಿಕ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರ ತಡೆಹಿಡಿಯಲ್ಪಡುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಪಡಿತರ ಚೀಟಿದಾರರನ್ನು ಹೊರತುಪಡಿಸಿ ಉಳಿದ ಸದಸ್ಯರ ಇ ಕೆವೈಸಿ ಮರುಸಂಗ್ರಹ; 8 ಮುಖ್ಯ ಅಂಶಗಳು

1) ಜೀವಮಾಪನ ಕಡ್ಡಾಯ: ಪಡಿತರ ಚೀಟಿದಾರರನ್ನು ಹೊರತುಪಡಿಸಿ ಕೆಲವು ಸದಸ್ಯರು ಒಟಿಪಿ ಮೂಲಕ ತಿದ್ದುಪಡಿ ಮಾಡಿದ್ದು ಸದರಿ ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ.

2) ವಿವರ ನೀಡುವುದು ಕಡ್ಡಾಯ: ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ ಕೆವೈಸಿ ನೀಡಬೇಕಾಗಿದ್ದು, ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್‌ಪಿಜಿ ವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕಾಗಿರುತ್ತದೆ.

3) ಇವರಿಗೆ ಶುಲ್ಕ ಇಲ್ಲ: ಇ ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು, ಇ-ಕೆವೈಸಿ ಮಾಡಿಸಲು ಯಾವುದೇ ಶುಲ್ಕ ಇಲ್ಲ

4) ಕರ್ನಾಟಕದ ಹೊರಗಿದ್ದರೆ: ಇ-ಕೆವೈಸಿ ಫಲಾನುಭವಿಯು ಕರ್ನಾಟಕದ ಹೊರಗಿದ್ದರೆ, ಅವರ ವಾಸ್ತವ್ಯದ ಹತ್ತಿರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ ಕೆವೈಸಿ ಮಾಡಿಸಬೇಕು.

5) ಮಾಹಿತಿ ಒದಗಿಸಿ: ಹಾಸಿಗೆ ಹಿಡಿದವರು, ಅಂಗವಿಕಲರು, ವೃದ್ಧರು, ಕುಷ್ಠರೋಗಿಗಳು ಇ-ಕೆವೈಸಿ ಮಾಡಿಸುವುದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳುಸುವುದ ಸಾಧ್ಯವಾಗದಿದ್ದರೆ ಆಹಾರ ನಿರೀಕ್ಷಕರಿಗೆ ಮಾಹಿತಿ ಒದಗಿಸಬೇಕು.

6) ಅಂತಿಮ ಸೂಚನೆ: ಇ ಕೆವೈಸಿ ಮಾಡಿಸದೇ ಪಡಿತರ ಪಡೆಯುತ್ತಿರುವ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಇ ಕೆವೈಸಿ ಅಭಿಯಾನದ ಸಂದರ್ಭದಲ್ಲೇ ಇ-ಕೆವೈಸಿ ಮಾಡಿಕೊಳ್ಳಬೇಕು.

7) ವಿಫಲರಾದರೆ ಏನು: ಒಂದು ವೇಳೆ ಎಪ್ರಿಲ್ 30 ರ ಒಳಗೆ ಇ ಕೆವೈಸಿ ಪೂರ್ಣಗೊಳಿಸಲು ಫಲಾನುಭವಿಗಳು ವಿಫಲರಾದ್ದಲ್ಲಿ, ಅಂತಹ ಫಲಾನುಭವಿಗಳನ್ನು ಪಡಿತರ ಚೀಟಿಯಿಂದ ರದ್ದುಪಡಿಸಲಾಗುತ್ತದೆ

8) ಹೆಚ್ಚಿನ ಮಾಹಿತಿಗೆ: ಫಲಾನುಭವಿಗಳು ತಮ್ಮ ಇ ಕೆವೈಸಿ ಸ್ಥಿತಿಯನ್ನು ನೋಡಲು ಮತ್ತು ಸ್ಪಷ್ಟೀಕರಣ ಅಥವಾ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ನಿಶುಲ್ಕ ಸಹಾಯವಾಣಿ -1967/14445/1800 425 9339 ಗೆ ಕರೆ ಮಾಡಬಹುದು.

ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಏನು ಸೂಚನೆ

ಸರ್ಕಾರದ ಸೂಚನೆ ಪ್ರಕಾರ ನಡೆಯತ್ತಿರುವ ಈ ಅಭಿಯಾನದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಾಲ್ತಿ ಇರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್‌ಪಿಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಡೀಕರಣ ಪತ್ರಗಳಿದ್ದಲ್ಲಿ ಅವುಗಳನ್ನು ಕೊಂಡೊಯ್ದು ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಯಲ್ಲಿ ಇ ಕೆವೈಸಿ ಮಾಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.