ಆಷಾಢ ಶುಕ್ರವಾರ2024: ಮೈಸೂರು ಚಾಮುಂಡಿಬೆಟ್ಟದಲ್ಲಿ ಸಿದ್ದತೆ, ಭಕ್ತರೇ ಬರುವ ಮುನ್ನ ಇದನ್ನೆಲ್ಲಾ ಗಮನಿಸಿ
ಕನ್ನಡ ಸುದ್ದಿ  /  ಕರ್ನಾಟಕ  /  ಆಷಾಢ ಶುಕ್ರವಾರ2024: ಮೈಸೂರು ಚಾಮುಂಡಿಬೆಟ್ಟದಲ್ಲಿ ಸಿದ್ದತೆ, ಭಕ್ತರೇ ಬರುವ ಮುನ್ನ ಇದನ್ನೆಲ್ಲಾ ಗಮನಿಸಿ

ಆಷಾಢ ಶುಕ್ರವಾರ2024: ಮೈಸೂರು ಚಾಮುಂಡಿಬೆಟ್ಟದಲ್ಲಿ ಸಿದ್ದತೆ, ಭಕ್ತರೇ ಬರುವ ಮುನ್ನ ಇದನ್ನೆಲ್ಲಾ ಗಮನಿಸಿ

Mysore Chamundi Temple ಆಷಾಢ ಮಾಸ ಆರಂಭಗೊಂಡರೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ದೇವಿಯ ವೈಭವ ಲೋಕವೇ ತೆರೆದುಕೊಳ್ಳುತ್ತದೆ. ಭಕ್ತರ ದಂಡು ಆಗಮಿಸುತ್ತದೆ. ಈ ಬಾರಿಯೂ ಬೆಟ್ಟದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಮೈಸೂರಿನ ಚಾಮುಂಡಿಬೆಟ್ಟದಲ್ಲ ಆಷಾಢ ಮಾಸಕ್ಕೆ ಸಿದ್ದತೆಗಳಾಗಿವೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲ ಆಷಾಢ ಮಾಸಕ್ಕೆ ಸಿದ್ದತೆಗಳಾಗಿವೆ.

ಮೈಸೂರು: ಈಗಾಗಲೇ ಆಷಾಢ ಮಾಸ ಶುರುವಾಗಿದೆ. ಆಷಾಢ ಮಾಸದ ಶುಕ್ರವಾರಗಳಂದು ಹಲವು ಕಡೆ ವಿಶೇಷ ಪೂಜೆಗಳು ನಡೆಯಲಿವೆ. ಇದರಲ್ಲಿ ಮೈಸೂರಿನ ಅಧಿದೇವತೆ, ನಾಡದೇವತೆ ಚಾಮುಂಡೇಶ್ವರಿ ತಾಯಿಗೂ ವಿಶೇಷ ಪೂಜೆಗಳು ಸಲ್ಲಲಿವೆ. ಶುಕ್ರವಾರ ಚಾಮುಂಡಿಬೆಟ್ಟ ಭಕ್ತರಿಂದ ತುಂಬಿ ಹೋಗಿರಲಿದೆ. ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ 2024 ರ ಆಷಾಢ ಮಾಸದ ಶುಕ್ರವಾರಗಳು ಜುಲೈ 12, 19, 26, ರಂದು, ವರ್ದಂತಿಯು ಜುಲೈ 27 ರಂದು ಮತ್ತು ಆಗಸ್ಟ್ 02 ಕಡೆಯ ಆಷಾಢ ಶುಕ್ರವಾರ ಕಾರ್ಯಕ್ರಮಗಳು ಇರಲಿವೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಮೈಸೂರು ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಗಳು ತಯಾರಿ ಮಾಡಿಕೊಂಡಿವೆ. ಚಾಮುಂಡಿಬೆಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ 2024 ರ ಆಷಾಢಮಾಸದ ಪ್ರಯುಕ್ತ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎನ್ನುವುದು ಮೈಸೂರು ಡಿಸಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ವಿವರಣೆ.

  • ಆಷಾಢ ಮಾಸದ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ಪ್ರವೇಶಕ್ಕೆ ಯಾವುದೇ ಪಾಸ್ ವ್ಯವಸ್ಥೆಯನ್ನು ಮಾಡಿಲ್ಲ. ಆದ್ದರಿಂದ ಸಾರ್ವಜನಿಕರು ಅನುಕೂಲಕ್ಕಾಗಿ ವಿಶೇಷವಾಗಿ ವ್ಯವಸ್ಥೆಯನ್ನು ಮಾಡಲಾಗಿರುವ ರೂ.300 ಗಳ ಪ್ರವೇಶ, ರೂ50 ಗಳ ಪ್ರವೇಶ ಮತ್ತು ಸರ್ವದರ್ಶನದ ಮೂಲಕ ದೇವಾಲಯಕ್ಕೆ ಪ್ರವೇಶವನ್ನು ಪಡೆಯಬಹುದು.
  • ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ 2024 ರ ಆಷಾಡ ಮಾಸದ ಶುಕ್ರವಾರಗಳು ಜುಲೈ 12, 19, 26, ರಂದು, ವರ್ದಂತಿಯು ಜುಲೈ 27 ರಂದು ಮತ್ತು ಆಗಸ್ಟ್ 02 ಕಡೆಯ ಆಷಾಢ ಶುಕ್ರವಾರ ಈ ಐದು ದಿನಗಳು ಮಾತ್ರ ದೇವಾಲಯದ ವತಿಯಿಂದ ಕೆ.ಎಸ್.ಆರ್.ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಚಾಮುಂಡಿಬೆಟ್ಟಕ್ಕೆ ಪ್ರಯಾಣಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವೈಯಕ್ತಿಕ ವಾಹನಕ್ಕೆ ಅವಕಾಶವಿಲ್ಲ
  • ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾರ್ವಜನಿಕ ವಾಹನಗಳನ್ನು ಚಾಮುಂಡಿಬೆಟ್ಟದ ಪ್ರವೇಶಕ್ಕೆ ನಿಷೇಧ ವಿಧಿಸಿದ್ದು, ಲಲಿತಾ ಮಹಲ್ ಪಾರ್ಕಿಂಗ್ನಲ್ಲಿಯೇ ಸಾರ್ವಜನಿಕರು ತಮ್ಮ ವಾಹನವನ್ನು ನಿಲ್ಲಿಸಿ, ಕೆ.ಎಸ್.ಆರ್.ಟಿಸಿ ವಾಹನಗಳ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಚಾಮುಂಡಿಬೆಟ್ಟಕ್ಕೆ ಆಗಮಿಸುವುದು.
  • ಚಾಮುಂಡಿಬೆಟ್ಟದ ಗ್ರಾಮಸ್ಥರು ಈ ಸಮಯದಲ್ಲಿ ಚಾಮುಂಡಿಬೆಟ್ಟ ಗ್ರಾಮದಲ್ಲಿ ವಿಳಾಸವಿರುವ ಆಧಾರ್ ಕಾರ್ಡ್ ಅನ್ನು ಹಾಜರುಪಡಿಸಿ/ ಪರಿಶೀಲನೆಗೆ ಒಳಪಡಿಸಿ ಪ್ರವೇಶವನ್ನು ಪಡೆಯಬಹುದು.
  • ಭಕ್ತಾದಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಲಲಿತಾಮಹಲ್ ಪಾರ್ಕಿಂಗ್ ಮತ್ತು ಮಹಿಷಾಸುರ ವೃತ್ತದ ಬಳಿ ಹಾಗೂ ವಿಶೇಷ ಪ್ರವೇಶದ ಬಳಿಯಲ್ಲಿಯೇ ಪ್ರವೇಶದ ಟಿಕೇಟ್ ಗಳನ್ನು ವಿತರಿಸುವ ವ್ಯವಸ್ಥೆಯನ್ನು ಮಾಡಲಾಗಿದ್ದು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ತುರ್ತುಚಿಕಿತ್ಸೆ ವ್ಯವಸ್ಥೆ ಹಾಗೂ ತುರ್ತು ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ.
  • ಭಕ್ತಾಧಿಗಳಿಗೆ ಪ್ರಸಾದವನ್ನು ವಿತರಿಸುವ ಸಾರ್ವಜನಿಕರು, ಕಡ್ಡಾಯವಾಗಿ ಪ್ರಸಾದ ವಿತರಿಸುವ ಮೊದಲು ಅಂಕಿತಾಧಿಕಾರಿಗಳು, ಆಹಾರ ನಿಯಂತ್ರಣ ಇಲಾಖೆಯವರಿಂದ ದೃಢೀಕರಣವನ್ನು ಪಡೆದು, ಜಿಲ್ಲಾಧಿಕಾರಿಗಳ ಕಛೇರಿಯ ಧಾರ್ಮಿಕ ದತ್ತಿ ಶಾಖೆಯಲ್ಲಿ ಅನುಮತಿಯ ಪತ್ರವನ್ನು ಪಡೆದು ತಮಗೆ ನಿಗದಿಪಡಿಸಿರುವ ಸಮಯದಲ್ಲಿ ಬಂದು ನಿಗದಿತ ಸ್ಥಳಗಳಲ್ಲಿ ಪ್ರಸಾದವನ್ನು ವಿತರಿಸುವುದು ಹಾಗೂ ಆ ಸ್ಥಳವನ್ನು ತಾವೆ ಸ್ವಚ್ಚಗೊಳಿಸಬೇಕು.
  • 2024ರ ಆಷಾಢ ಮಾಸವನ್ನು ಚಾಮುಂಡಿಬೆಟ್ಟದಲ್ಲಿ "ಪ್ಲಾಸ್ಟಿಕ್ ಮುಕ್ತ ಆಷಾಡ ಮಾಸವೆಂದು ಘೋಷಿಸಿರುವುದರಿಂದ" ಚಾಮುಂಡಿಬೆಟ್ಟಕ್ಕೆ ಯಾವುದೇ ಪ್ಲಾಸ್ಟಿಕ್ ತರುವುದನ್ನು ನಿಷೇದಿಸಲಾಗಿದೆ. ಒಂದು ವೇಳೆ ಪ್ಲಾಸ್ಟಿಕ್ ತಂದಲ್ಲಿ ದಂಡ ವಿಧಿಸಲಾಗುವುದು. ಚಾಮುಂಡಿಬೆಟ್ಟದಲ್ಲಿ ವ್ಯಾಪಾರ ಮಾಡುವ ವ್ಯಾಪಾರಸ್ಥರು, ಯಾವುದೇ ಪ್ಲಾಸ್ಟಿಕ್ ಬಳಸದಂತೆ ಹಾಗೂ ಯಾವುದೇ ಪೂಜಾ ಸಾಮಾಗ್ರಿಗಳನ್ನು ಪ್ಲಾಸ್ಟಿಕ್ ಬ್ಯಾಗ್ ಮತ್ತು ಇತರೆ ಪ್ಲಾಸ್ಟಿಕ್ ಮೂಲಕ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇದಿಸಿದೆ. ಒಂದು ವೇಳೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ದಂಡ ವಿದಿಸುವುದಲ್ಲದೆ ಅಂಗಡಿಯನ್ನು ತೆರವುಗೊಳಿಸಲಾಗುತ್ತದೆ.
  • ಆಷಾಢಮಾಸದಲ್ಲಿ ಚಾಮುಂಡಿಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳ ಸಂಖ್ಯೆ ಅಧಿಕವಾಗುವುದರಿಂದ ಭದ್ರ್ರತಾ ಹಿತದೃಷ್ಟಿಯಿಂದ ಸೂಕ್ತ ಭದ್ರತೆಗೆ ಸಿಸಿ ಕಾಮೆರಾ ವ್ಯವಸ್ಥೆಯ ಜೊತೆಗೆ ಧ್ವನಿ ವರ್ಧಕದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಕ್ತಾದಿಗಳು ಸಹಕರಿಸಬೇಕು ಎನ್ನುವುದು ಡಿಸಿ ಲಕ್ಷ್ಮಿಕಾಂತ ರೆಡ್ಡಿ ಮನವಿ.

Whats_app_banner