ಮೈಸೂರು: ರೌಡಿಶೀಟರ್ ಕಾರ್ತಿಕ್ ಹತ್ಯೆ ಪ್ರಕರಣ; ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರು: ರೌಡಿಶೀಟರ್ ಕಾರ್ತಿಕ್ ಹತ್ಯೆ ಪ್ರಕರಣ; ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಮೈಸೂರು: ರೌಡಿಶೀಟರ್ ಕಾರ್ತಿಕ್ ಹತ್ಯೆ ಪ್ರಕರಣ; ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಮೈಸೂರಿನಲ್ಲಿ ನಡೆದಿದ್ದ ರೌಡಿಶೀಟರ್ ಕಾರ್ತಿಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಹಿಳೆ ಸಹಿತ ಏಳು ಜನರ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

ರೌಡಿಶೀಟರ್ ಕಾರ್ತಿಕ್ ಹತ್ಯೆ ಪ್ರಕರಣ
ರೌಡಿಶೀಟರ್ ಕಾರ್ತಿಕ್ ಹತ್ಯೆ ಪ್ರಕರಣ

ಮೈಸೂರು: ಮೈಸೂರಿನಲ್ಲಿ ನಡೆದಿದ್ದ ರೌಡಿಶೀಟರ್ ಕಾರ್ತಿಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಲ್ಲಾ ಪೊಲೀಸರು ಕೊಲೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಅಡಗಿದ್ದ ಕೊಲೆ ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಅವರನ್ನು ಆರೋಪಿಗಳಾದ ಪ್ರವೀಣ್, ಆನಂದ್ ಗೌಡ, ಅವಿನಾಶ್, ಚಂದು, ರವಿ, ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ಸೆರೆಗೆ ಮೂರು ತಂಡ ನಿಯೋಜಿಸಿದ್ದ ಮೈಸೂರು ಜಿಲ್ಲಾ ಎಸ್ಪಿ ವಿಷ್ಣುವರ್ಧನ್, ಪ್ರಕರಣ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೈಸೂರು ದಕ್ಷಿಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶೇಖರ್, ಬನ್ನೂರು ಠಾಣೆ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್, ಜಯಪುರ ಪಿಎಸ್ಐ ಪ್ರಕಾಶ್ ಅತ್ತಿಮನಿ, ಇಲವಾಲ ಠಾಣೆ ಪಿಎಸ್ಐ ಮಹೇಶ್ ಕುಮಾರ್ ಅವರ ನೇತೃತ್ವದ ತಂಡಕ್ಕೆ ಲಾಕ್ ಸಿಕ್ಕಿ ಬಿದ್ದಿರುವ ಕೊಲೆ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ದೊರೆತ ಮಾಹಿತಿಯಂತೆ ಈ ಕೊಲೆ ಹಣಕ್ಕಾಗಿ ಅಲ್ಲ, ಆಂಟಿಯಿಂದಾಗಿ ನಡೆಯಿತು ಎಂದು ಮೈಸೂರು‌ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ಹೇಳಿಕೆ ನೀಡಿದ್ದಾರೆ. ಕಾರ್ತಿಕ್ ಮೈಸೂರಿನ ನಿವಾಸಿ ಆಗಿದ್ದ. ವರುಣದ ಪೋಲಿಸ್ ಠಾಣೆ ಮತ್ತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಕಾರ್ತಿಕ್ ಮೇಲೆ ಪ್ರಕರಣ ದಾಖಲು ಆಗಿದ್ದವು. ಈತನ ಕೊಲೆ ಪ್ರಕರಣದಲ್ಲಿ 7 ಜನ ಆರೋಪಿಗಳು ಇದ್ದಾರೆ. ಒಬ್ಬ ಮಹಿಳೆ ಸೇರಿದಂತೆ ಎಲ್ಲಾ 7 ಆರೋಪಿಗಳ ಬಂಧನವಾಗಿದೆ. ಒಂದು ಹುಡುಗಿಯ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಈ ಹಿಂದೆ ಹುಡುಗಿಯ ವಿಚಾರಕ್ಕೆ ಪ್ರವೀಣ್ ಮತ್ತು ಕಾರ್ತಿಕ್ ಮಧ್ಯೆ ಜಗಳ ಶುರುವಾಗಿದೆ. ನಂತರ ಪ್ರವೀಣ್ ನನ್ನು ಕೊಲೆ ಮಾಡುವುದಾಗಿ ಕಾರ್ತಿಕ್ ಹೇಳಿದ್ದ. ಹಾಗಾಗಿ ಕಾರ್ತಿಕ್‌ನನ್ನು ಪ್ರವೀಣ್ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಇದೆ. ಕಾರ್ತಿಕ್ ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, 7 ಜನ ಆರೋಪಿಗಳು ಕೂಡ ಕಾರ್ತಿಕ್‌ಗೆ ಗೊತ್ತಿರುವವರೇ ಆಗಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕಾರ್ತಿಕ್‌ನನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ಬಳಿಕ ಮೃತ ದೇಹದ ಮುಂದೆ ಡ್ಯಾನ್ಸ್ ಮಾಡಿ ಪೋಟೋ ತೆಗೆದುಕೊಂಡು ಹೋಗಿದ್ದಾರೆ. ಕಾರ್ತಿಕ್ ಮೇಲೆ ದ್ವೇಷ ಇತ್ತು ಹಾಗಾಗಿ ಆರೋಪಿಗಳು ಪೋಟೋ ತೆಗೆದುಕೊಂಡಿದ್ದಾರೆ. ಇನ್ನೂ ತನಿಖೆ ನಡೆಯುತ್ತಿದೆ, ಹಾಗಾಗಿ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ಮೈಸೂರು ಜಿಲ್ಲಾ ಎಸ್ಪಿ‌ ವಿಷ್ಣುವರ್ಧನ್ ಹೇಳಿದ್ದಾರೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in