ಮೈಸೂರು: ಪ್ರಾಪರ್ಟಿ ರಿಟರ್ನ್ ಪೆರೇಡ್; ಕೋಟ್ಯಾಂತರ ರೂಪಾಯಿ ಮೌಲ್ಯದ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಿದ ಪೋಲಿಸರು
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರು: ಪ್ರಾಪರ್ಟಿ ರಿಟರ್ನ್ ಪೆರೇಡ್; ಕೋಟ್ಯಾಂತರ ರೂಪಾಯಿ ಮೌಲ್ಯದ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಿದ ಪೋಲಿಸರು

ಮೈಸೂರು: ಪ್ರಾಪರ್ಟಿ ರಿಟರ್ನ್ ಪೆರೇಡ್; ಕೋಟ್ಯಾಂತರ ರೂಪಾಯಿ ಮೌಲ್ಯದ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಿದ ಪೋಲಿಸರು

ಮೈಸೂರಿನ ವಿವಿಧ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮವನ್ನು ಪೊಲೀಸರು ಆಯೋಜಿಸಿದ್ದರು.

ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ
ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ

ಮೈಸೂರು: ಮೈಸೂರಿನ ವಿವಿಧ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಿಸುವ ಕಾರ್ಯಕ್ರಮವನ್ನು ಮೈಸೂರು ಪೊಲೀಸರು ಆಯೋಜನೆ ಮಾಡಿದ್ದರು. ಪ್ರಾಪರ್ಟಿ ರಿಟರ್ನ್ ಪೆರೇಡ್‌ನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾಲುಗಳನ್ನು ವಾರಸುದಾರಿಗೆ ಹಿಂದಿರುಗಿಸಲಾಯಿತು. ಕಳೆದ 8 ತಿಂಗಳ ಅವಧಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳಲ್ಲಿ ಪತ್ತೆಯಾದ ಮಾಲುಗಳನ್ನು ಈ ಸಂದರ್ಭದಲ್ಲಿ ವಾರಸುದಾರರಿಗೆ ವಾಪಸ್ ಮಾಡಲಾಯಿತು.

2 ದರೋಡೆ, 4 ಸುಲಿಗೆ, 21 ಸರಗಳ್ಳತನ ಪ್ರಕರಣ, 34 ಕಳ್ಳತನ, 6 ಮನೆಗಳ್ಳತನ, 69 ವಾಹನ ಕಳವು 69 ಪ್ರಕರಣಗಳ ಪತ್ತೆಯಾಗಿದ್ದು, 20 ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಅವರಿಂದ ಒಟ್ಟು 4,23,60,000 ಮೌಲ್ಯದ 5 ಕೆಜಿ 320 ಗ್ರಾಂ ಚಿನ್ನಾಭರಣ, 6 ಕೆಜಿ 246 ಗ್ರಾಂ ಬೆಳ್ಳಿಯ ಪದಾರ್ಥಗಳು, 52 ದ್ವಿಚಕ್ರವಾಹನಗಳು, 9 ಕಾರುಗಳು, 8 ಗೂಡ್ಸ್ ವಾಹನಗಳು ಸೇರಿದಂತೆ 13,54,500 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿತ್ತು.

ದಸ್ತಗಿರಿ ಮಾಡಿರುವ 20 ಕಳ್ಳರಲ್ಲಿ ಇಬ್ಬರು ಅಂತರ ರಾಜ್ಯ ಕಳ್ಳರು ಕೂಡ ಇದ್ದಾರೆ. ಪ್ರಾಪರ್ಟಿ ರಿಟರ್ನ್ ಪೆರೇಡ್ ನಲ್ಲಿ ಭಾಗಿಯಾದ ವೇಳೆ ಮಾಹಿತಿ ಹಂಚಿಕೊಂಡ ಮೈಸೂರು ನಗರ ಪೋಲಿಸ್ ಕಮಿಷನರ್ ಸೀಮಾ ಲಾಟ್ಕರ್, ನಗರದ ವಿವಿಧ ಪೋಲಿಸ್ ಠಾಣೆ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.

ಚಿನ್ನಾಭರಣ ಕಳೆದುಕೊಂಡಿದ್ದವರು ಮತ್ತು ಹಣ ಕಳೆದು‌ಕೊಂಡಿದ್ದವರು ಇದೀಗ ವಾಪಸ್ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಜತೆಗೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸರಿಗೆ ಪ್ರಶಂಸನಾ ಪತ್ರ ವಿತರಣೆ ಮಾಡಲಾಯಿತು. ಪೊಲೀಸರ ಕಾರ್ಯ ಸಾಧನೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೈಸೂರು ನಗರ ಡಿಸಿಪಿಗಳಾದ ಸುಂದರ್ ರಾಜ್, ಮುತ್ತುರಾಜ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in