ನೀಟ್‌ ಪರೀಕ್ಷೆ2025 ಮೇ 4 ರಂದು ಭಾನುವಾರ ನಿಗದಿ; ಕರ್ನಾಟಕದ ಅಭ್ಯರ್ಥಿಗಳು ಈ ಸೂಚನೆಗಳನ್ನು ಗಮನಿಸಿ
ಕನ್ನಡ ಸುದ್ದಿ  /  ಕರ್ನಾಟಕ  /  ನೀಟ್‌ ಪರೀಕ್ಷೆ2025 ಮೇ 4 ರಂದು ಭಾನುವಾರ ನಿಗದಿ; ಕರ್ನಾಟಕದ ಅಭ್ಯರ್ಥಿಗಳು ಈ ಸೂಚನೆಗಳನ್ನು ಗಮನಿಸಿ

ನೀಟ್‌ ಪರೀಕ್ಷೆ2025 ಮೇ 4 ರಂದು ಭಾನುವಾರ ನಿಗದಿ; ಕರ್ನಾಟಕದ ಅಭ್ಯರ್ಥಿಗಳು ಈ ಸೂಚನೆಗಳನ್ನು ಗಮನಿಸಿ

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಹೋಗ ಬಯಸುವವರಿಗೆ ನೀಟ್‌ ಪರೀಕ್ಷೆ 2025 ಮೇ 4ರ ಭಾನುವಾರ ನಿಗದಿಯಾಗಿದೆ. ಈ ಸಂಬಂಧ ವಿದ್ಯಾರ್ಥಿಗಳು ಈ ಸೂಚನೆಗಳನ್ನು ಪಾಲಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸೂಚಿಸಿದೆ.

ನೀಟ್‌ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು, ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.
ನೀಟ್‌ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು, ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ ಈಗಾಗಲೇ ಪಿಯುಸಿ ಪರೀಕ್ಷೆ ಮುಗಿದು ಫಲಿತಾಂಶವೂ ಬಂದಿದೆ. ವೃತ್ತಿಪರ ಕೋರ್ಸ್‌ಗಳಿಗೆ ಹೋಗುವವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿ ಸಿಇಟಿ 2025 ಪರೀಕ್ಷೆಯನ್ನು ಮುಗಿಸಿಯಾಯ್ತು. ಇನ್ನೇನಿದ್ದರೂ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಹೋಗ ಬಯಸುವವರಿಗೆ ನೀಟ್‌ ಪರೀಕ್ಷೆ (NEET UG 2025) ಬಾಕಿಯಿದೆ. ಮೊದಲಿನಿಂದಲೂ ಮೇ ಮೊದಲ ಭಾನುವಾರದಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್‌ ಪರೀಕ್ಷೆಯನ್ನು ಆಯೋಜಿಸುತ್ತಾ ಬಂದಿದೆ. ಈ ವರ್ಷದ ಮೇ 4ರಂದು ನೀಟ್‌ ಪರೀಕ್ಷೆ ನಿಗದಿಯಾಗಿದೆ. ಅಡ್ಮಿಟ್‌ ಕಾರ್ಡ್‌ ಡೌನ್‌ಲೌಡ್‌ ಸೇರಿದಂತೆ ಹಲವು ಸೂಚನೆಗಳನ್ನು ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಿಗೆ ನೀಡಲಾಗಿದೆ. ಕೊನೆ ಹಂತದ ತಯಾರಿ, ಪರೀಕ್ಷೆಗೆ ಹೋಗುವ ಮುನ್ನ ಮಾಡಿಕೊಳ್ಳಬೇಕಾದ ಸಿದ್ದತೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಹಲವು ಸೂಚನೆಗಳನ್ನು ನೀಡಿದೆ.

2025 ರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆಯಲ್ಲಿ ಎದುರಿಸುತ್ತಿರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಿಂದ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಾಗ ಪ್ರವೇಶ ಪತ್ರವು ಅತ್ಯಂತ ಅವಶ್ಯಕವಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಪ್ರವೇಶ ಪತ್ರವಿಲ್ಲದೆ ಅಭ್ಯರ್ಥಿಗಳನ್ನು ಒಳಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ಪ್ರವೇಶ ಪತ್ರದ ಬಿಡುಗಡೆಗೆ ಸಂಬಂಧಿಸಿದ ನವೀಕರಣಗಳನ್ನು ಪಡೆಯಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ನೊಂದಿಗೆ ಸಂಪರ್ಕದಲ್ಲಿರಬಹುದು ಎನ್ನುವ ಸೂಚನೆ ನೀಡಲಾಗಿದೆ.

ಪ್ರವೇಶ ಪತ್ರ

ನೀಟ್‌ ಯುಜಿ 2025 ಪರೀಕ್ಷೆಯನ್ನು 2025 ರ ಮೇ 4 ರಂದು ಮಧ್ಯಾಹ್ನ 2:00 ರಿಂದ ಸಂಜೆ 5:00 ವರೆಗೆ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ದಿನಾಂಕವನ್ನು ಘೋಷಿಸಿದ್ದು, ಪರೀಕ್ಷೆಯನ್ನು ಕಾಗದದ ರೂಪದಲ್ಲಿ ನಡೆಸಲಾಗುವುದು. ಅಂದರೆ ವಿದ್ಯಾರ್ಥಿಗಳು ನಿಗದಿತ ಕೇಂದ್ರಗಳಿಗೆ ಆಗಮಿಸಿ ಮೂರು ಗಂಟೆ ಕಾಲ ಪರೀಕ್ಷೆ ಬೆಯಬೇಕಾಗುತ್ತದೆ. ಅಭ್ಯರ್ಥಿಗಳು ಮಧ್ಯಾಹ್ನ 1.30 ಕ್ಕೆ ಪ್ರವೇಶದ ಮುಕ್ತಾಯ ಸಮಯಕ್ಕಿಂತ ಸಾಕಷ್ಟು ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಪರೀಕ್ಷೆಯು ಆಫ್‌ಲೈನ್‌ನಲ್ಲಿ ಲಭ್ಯವಿರುತ್ತದೆ ಮತ್ತು ಅಭ್ಯರ್ಥಿಗಳು ಪ್ರಶ್ನೆಗಳಿಗೆ ಉತ್ತರಿಸಲು ನೀಲಿ ಅಥವಾ ಕಪ್ಪು ಪೆನ್ನು ಕೊಂಡೊಯ್ಯಬೇಕಾಗುತ್ತದೆ.

ಭಾರತದಲ್ಲಿ ಎಂಬಿಬಿಎಸ್‌, ಬಿಡಿಎಸ್‌, ಮತ್ತು ಇತರ ವೈದ್ಯಕೀಯ ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನೀಟ್‌ ಪ್ರವೇಶ ಪತ್ರ 2025 ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಇರುವ ಏಕೈಕ ಪ್ರವೇಶ ಪರೀಕ್ಷೆಯಾಗಿರುವುದರಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪರೀಕ್ಷೆಗಳನ್ನು ನಡೆಸುತ್ತದೆ. ಪರೀಕ್ಷಾಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುತ್ತಾರೆ. ಪ್ರವೇಶ ಪತ್ರಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದು ಸಿಗಲಿದೆ.

ಪರೀಕ್ಷೆ ಹೇಗೆ

3 ಗಂಟೆಗಳ (180 ನಿಮಿಷಗಳು) ಪರೀಕ್ಷೆಯು 13 ಭಾಷೆಗಳಲ್ಲಿ ಇರಲಿದೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳು ತಾವು ಉತ್ತಮ ಭಾಷೆಯಲ್ಲಿ ಪರೀಕ್ಷೆಯನ್ನು ಬರೆಯುವ ಆಯ್ಕೆಯನ್ನು ಹೊಂದಿರುತ್ತಾರೆ.

ನೀಟ್‌ ಪರೀಕ್ಷೆಯು ಸ್ಪಷ್ಟ ಮತ್ತು ನೇರವಾದ ಮಾದರಿಯಲ್ಲಿರಲಿದೆ. ಇದು ನಾಲ್ಕು ವಿಷಯಗಳನ್ನು ಒಳಗೊಂಡಿದೆ: ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ. ಇದು 180 ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿದೆ. ಪ್ರತಿ ಪ್ರಶ್ನೆಗೆ ನಾಲ್ಕು ಆಯ್ಕೆಗಳಿವೆ. ವಿದ್ಯಾರ್ಥಿಗಳು ಪ್ರತಿ ಸರಿಯಾದ ಉತ್ತರಕ್ಕೆ +4 ಅಂಕಗಳನ್ನು ಪಡೆಯುತ್ತಾರೆ. ಆದರೆ ತಪ್ಪು ಉತ್ತರಕ್ಕೆ ಒಂದು ಅಂಕವನ್ನು ಕಡಿತಗೊಳಿಸಲಾಗುತ್ತದೆ. ಉತ್ತರಿಸದೆ ಉಳಿದಿರುವ ಪ್ರಶ್ನೆಗಳಿಗೆ ಶೂನ್ಯ ಅಂಕಗಳನ್ನು ನೀಡಲಾಗುತ್ತದೆ. ಪರೀಕ್ಷಾ ಪಠ್ಯಕ್ರಮವು 11 ಮತ್ತು 12 ನೇ ತರಗತಿಗಳನ್ನು ಆಧರಿಸಿರದೆ.

ತಯಾರಿ ಹೀಗಿರಲಿ

ನೀಟ್‌ ಪ್ರವೇಶ ಪರೀಕ್ಷೆಯು ನಾಲ್ಕು ವಿಷಯಗಳ ವ್ಯಾಪ್ತಿಯಲ್ಲಿದ್ದರೂ ವಿಷಯಾಧಾರಿತವಾಗಿಯೇ ಇರಲಿದೆ. ಇದರಿಂದ ವಿದ್ಯಾರ್ಥಿಗಳು ನಿಗದಿತ ವಿಷಯದ ಓದಿನ ಜತೆಗೆ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಗಮನಿಸಿಕೊಳ್ಳಬೇಕು. ಕೌಶಲ್ಯವನ್ನು ಪರೀಕ್ಷಿಸುವ ರೀತಿಯಲ್ಲಿಯೇ ಪ್ರಶ್ನೆಗಳು ಇರುವುದರಿಂದ ವಿದ್ಯಾರ್ಥಿಗಳು ಮುಖ್ಯವಾಗಿ ವಿಷಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕು. ಇದರಿಂದ ಯಾವ ರೀತಿ ಪ್ರಶ್ನೆ ಕೇಳಿದರೂ ಉತ್ತರಿಸಲು ಸಹಕಾರಿಯಾಗುತ್ತದೆ. ಹಿಂದಿನ ವರ್ಷದಲ್ಲಿ ಹೆಚ್ಚು ಅಂಕ ಪಡೆಯವದವರು ಮರು ವರ್ಷವೂ ಪ್ರಯತ್ನಿಸುತ್ತಾರೆ. ಇದರಿಂದ ನೀಟ್‌ ಪರೀಕ್ಷೆಗೆ ವರ್ಷದಿಂದ ವರ್ಷಕ್ಕೆ ಸ್ಪರ್ಧೆ ಏರುತ್ತಲೇ ಇದೆ. ಇದಕ್ಕಾಗಿ ಸರಿಯಾಗಿ ತಯಾರಿ ಮಾಡಿಕೊಳ್ಳಬೇಕು ಎಂದು ಮೈಸೂರಿನ ವಿಜಯವಿಠ್ಠಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್‌.ಸತ್ಯಪ್ರಸಾದ್‌ ಹೇಳುತ್ತಾರೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.