ಕನ್ನಡ ಸುದ್ದಿ  /  ಕರ್ನಾಟಕ  /  National Youth Festival: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ; ಯುವಕರಲ್ಲಿ ಉತ್ಸಾಹ ತುಂಬಿಲಿದೆ: ಸಿಎಂ

National Youth Festival: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ; ಯುವಕರಲ್ಲಿ ಉತ್ಸಾಹ ತುಂಬಿಲಿದೆ: ಸಿಎಂ

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವವನ್ನು ಪ್ರಧಾನಿ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ಇದು ದೇಶ ಹಾಗೂ ರಾಜ್ಯದ ಯುವಕರಲ್ಲಿ ಉತ್ಸಾಹ ತುಂಬಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಸಿಎಂ ಬೊಮ್ಮಾಯಿ ಮಾತನಾಡಿದರು.
ಮಾಧ್ಯಮಗಳೊಂದಿಗೆ ಸಿಎಂ ಬೊಮ್ಮಾಯಿ ಮಾತನಾಡಿದರು.

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸುವುದರಿಂದ ದೇಶ ಹಾಗೂ ರಾಜ್ಯದ ಯುವಕರಲ್ಲಿ ಹುರುಪು ಹಾಗೂ ಉತ್ಸಾಹ ತುಂಬಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಖಿಲ ಭಾರತ ಯುವಜನೋತ್ಸವ ಪ್ರಥಮ ಬಾರಿಗೆ ಈ ಭಾಗದಲ್ಲಿ ಒಂದು ವಾರಗಳ ಕಾಲ ನಡೆಯಲಿದೆ. ಭಾರತದ ಜನಸಂಖ್ಯಾ ಲಾಭವನ್ನು ಪ್ರಧಾನಿಗಳು ತಿಳಿಸಿದ್ದಾರೆ. ಜನಸಂಖ್ಯೆ ಅಭಿವೃದ್ಧಿಗೆ ಮಾರಕ ಎನ್ನುತ್ತಿದ್ದುದನ್ನು ಪರಿವರ್ತಿಸಿ ಜನಸಂಖ್ಯೆಯನ್ನು ಬಳಸಿಕೊಂಡು ದೇಶ ಕಟ್ಟಬಹುದು. ಶೇ.40 ರಷ್ಟು ಯುವಜನಾಂಗವಿರುವ ದೇಶದಲ್ಲಿ ಅವರಿಗೆ ಕೌಶಲ್ಯ ತರಬೇತಿ ನೀಡಿ ಅವಕಾಶ ಕಲ್ಪಿಸಿದರೆ ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಸಾಧ್ಯ ಎಂದು ಮನಗಂಡು ಯುವಕರಿಗೆ ಅಗತ್ಯ ಕ್ಷೇತ್ರಗಳಲ್ಲಿ ಹೊಸ ಯೋಜನೆಗಳನ್ನು ಪ್ರಧಾನಮಂತ್ರಿ ಗಳು ರೂಪಿಸಿದ್ದಾರೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಥಮ ಬಾರಿಗೆ ಮೂರು ವರ್ಷಗಳಲ್ಲಿ ಹಲವಾರು ಡಿಗ್ರಿಗಳನ್ನು ಪಡೆಯಬಹುದಾಗಿದೆ. ಬಹುಮಾಧ್ಯಮ ಶಿಕ್ಷಣವನ್ನು ದೇಶದಲ್ಲಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.

ಕೌಶಲ್ಯಾಭಿವೃದ್ಧಿಗೆ ಒತ್ತು

ಕೌಶಲ್ಯಾಭಿವೃದ್ಧಿಗೆ ಸ್ಕಿಲ್ ಇಂಡಿಯಾ, ಮುದ್ರಾ ಯೋಜನೆ, ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಮೂಲಕ ಒಲಂಪಿಕ್ಸ್ ನಲ್ಲಿ ಪ್ರಥಮ ಬಾರಿಗೆ ದೊಡ್ಡ ಪ್ರಮಾಣದ ಸಾಧನೆಯಾಗಿದೆ. ಸಂಸ್ಕೃತಿ ವಲಯದಲ್ಲಿಯೂ ಯುವಕರಿಗೆ ಸಮಗ್ರ ಅವಕಾಶ ನೀಡುವ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವರು ಹುಬ್ಬಳಿಗೆ ಆಗಮಿಸುವುದರಿಂದ ಯುವಜನೋತ್ಸವ ಯಶಸ್ವಿಯಾಗುವುದು ನಿಶ್ಚಿತ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ತನಿಖೆಯಲ್ಲಿ ಸತ್ಯ ಹೊರಬರಲಿದೆ

ಸ್ಟಾಂಟ್ರೋ ರವಿ ಇಪ್ಪತ್ತು ವರ್ಷಗಳ ಇತಿಹಾಸವಿದೆ. ಯಾವ ಸರ್ಕಾರಗಳಿತ್ತು, ಯಾರ ಸಂಬಂಧ ವಿತ್ತು, ಆಸ್ತಿಪಾಸ್ತಿ ಜಪ್ತಿ ಮಾಡುವುದು ಎಲ್ಲಾ ರೀತಿಯ ತನಿಖೆ ಮಾಡಲು ಆದೇಶ ಮಾಡಲಾಗಿದೆ. ತನಿಖೆಯಲ್ಲಿ ಸತ್ಯ ಹೊರ ಬರಲಿದೆ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಅಂತಿಮ ವರದಿ ಬಂದ ನಂತರ ಸ್ಪಷ್ಟತೆ

ಪಂಚಮಸಾಲಿ ಮೀಸಲಾತಿ ಬಗ್ಗೆ ಸ್ವಾಮೀಜಿಗಳು ಗಡುವು ನೀಡಿರುವ ಬಗ್ಗೆ ಇದೇ 10 ರಂದು ಮಾತನಾಡಿದ್ದ ಸಿಎಂ, ಈಗಾಗಲೇ ಪ್ರವರ್ಗ 2ಕ್ಕೆ ಬರಬೇಕಿರುವ ಸಮುದಾಯಗಳಿಗೆ ಮೊದಲ ನಿರ್ಣಯ ಕೈಗೊಂಡಿದೆ. ಬರುವ ದಿನಗಳಲ್ಲಿ ಪ್ರಮಾಣ ಎಷ್ಟು ಹೆಚ್ಚಾಗುತ್ತದೆ ಎನ್ನುವುದು ಅಂತಿಮ ವರದಿ ಬಂದ ನಂತರ ತಿಳಿಯಲಿದೆ. ಸಂವಿಧಾನಬದ್ಧವಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿಯ ಮೇಲೆ ತೀರ್ಮಾನವಾಗುತ್ತದೆ. ಅದನ್ನು ಶೀಘ್ರವಾಗಿ ಸಲ್ಲಿಸಲು ಸೂಚಿಸಿದ್ದು. ಅದು ಬಂದ ನಂತರ ಸ್ಪಷ್ಟತೆ ದೊರೆಯಲಿದೆ ಎಂದಿದ್ದರು.

ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಸ್ಪಷ್ಟತೆ ಕೇಳುವುದು ಸಾಮಾನ್ಯ, ಅವುಗಳಿಗೆ ನಮ್ಮ ಬಳಿ ಪರಿಹಾರವಿದೆ. ಕೂಡಲೇ ಅವುಗಳಿಗೆ ಉತ್ತರ ನೀಡಿ ಪರಿಸರ ಇಲಾಖೆಯ ತೀರುವಳಿ ಪಡೆಯಲಾಗುವುದು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಕೋಲಾರ ದಿಂದ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಅವರ ಆಯ್ಕೆ. ಪ್ರತಿ ರಾಜಕಾರಣಿ, ನಾಯಕನ ನಡೆ ಚುನಾವಣೆಯಲ್ಲಿ ತಿಳಿಯುತ್ತದೆ. ನಮ್ಮ ನಡೆ, ನಿಲುವು, ನಿರ್ಧಾರಗಳನ್ನು ಚುನಾವಣೆ ಓರೆಗೆ ಹಚ್ಚುತ್ತದೆ. ಕೋಲಾರ ಆಯ್ಕೆ ಬಗ್ಗೆ ವ್ಯಾಖ್ಯಾನಿಸುವುದಿಲ್ಲ. ಇದು ಅವರ ಹಾಗೂ ಅವರ ಪಕ್ಷದ ನಿರ್ಧಾರ. ಈ ಬಗ್ಗೆ ಕೋಲಾರದ ಜನತೆ ತೀರ್ಮಾನ ಮಾಡಲಿದ್ದಾರೆ ಎಂದರು.

ಜನರಿಗೆ ಸತ್ಯ ತಿಳಿದಿದೆ

ಪೇ ಸಿಎಂ, ಸ್ಕ್ಯಾಮ್ ಸಂಕ್ರಾಂತಿಗೆ ಜನರಿಂದ ಸ್ಪಂದನೆ, ಬೆಂಬಲ ಸಿಗುವುದಿಲ್ಲ. ಜನರಿಗೆ ಸತ್ಯ ಯಾವುದೆಂದು ತಿಳಿದಿದೆ. ಸ್ಟಾಂಟ್ರೋ ರವಿ ಅವರ ಕಾಲದಲ್ಲಿ ಜೈಲಿನಿಂದ ಬಿಡುಗಡೆ ಯಾಗಿದ್ದು ಇದಕ್ಕೆ ಅವರೇ ಉತ್ತರ ನೀಡಬೇಕು ಎಂದರು.

IPL_Entry_Point