ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025ಕ್ಕೆ ಅರ್ಜಿ ಆಹ್ವಾನ, ಪುಸ್ತಕ ಸಲ್ಲಿಸಲು ಫೆಬ್ರವರಿ 28 ಕೊನೆ ದಿನ
ಕನ್ನಡ ಸುದ್ದಿ  /  ಕರ್ನಾಟಕ  /  ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025ಕ್ಕೆ ಅರ್ಜಿ ಆಹ್ವಾನ, ಪುಸ್ತಕ ಸಲ್ಲಿಸಲು ಫೆಬ್ರವರಿ 28 ಕೊನೆ ದಿನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025ಕ್ಕೆ ಅರ್ಜಿ ಆಹ್ವಾನ, ಪುಸ್ತಕ ಸಲ್ಲಿಸಲು ಫೆಬ್ರವರಿ 28 ಕೊನೆ ದಿನ

ಸಾಹಿತ್ಯ ಅಕಾಡೆಮಿಯು 2025ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಾಗಿ ಭಾರತೀಯ ಲೇಖಕರು, ಲೇಖಕರ ಹಿತೈಷಿಗಳು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ. 2019, 2020, 2021, 2022 ಮತ್ತು 2023ರಲ್ಲಿ ಮೊದಲು ಪ್ರಕಟವಾದ ಪುಸ್ತಕವನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025ಕ್ಕೆ ಅರ್ಜಿ ಆಹ್ವಾನ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025ಕ್ಕೆ ಅರ್ಜಿ ಆಹ್ವಾನ

ಸಾಹಿತ್ಯ ಅಕಾಡೆಮಿಯು 2025ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಾಗಿ ಭಾರತೀಯ ಲೇಖಕರು, ಲೇಖಕರ ಹಿತೈಷಿಗಳು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ. 2019, 2020, 2021, 2022 ಮತ್ತು 2023ರಲ್ಲಿ ಮೊದಲು ಪ್ರಕಟವಾದ ಪುಸ್ತಕವನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಬಹುಮಾನ ಮತ್ತು ಫಲಕವನ್ನು ಹೊಂದಿರುತ್ತದೆ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಫೆಬ್ರವರಿ 28, 2025ರೊಳಗೆ ಸಲ್ಲಿಸಬೇಕು ಎಂದು ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯ ಅಕಾಡೆಮಿಯು 1955ರಿಂದ ಪ್ರತಿವರ್ಷ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡುತ್ತ ಬಂದಿದೆ. 24 ಭಾರತೀಯ ಭಾಷೆಗಳ ಪುಸ್ತಕಗಳಿಗೆ ಪ್ರಶಸ್ತಿ ನೀಡುತ್ತಿದೆ. ಅಸ್ಸಾಮ್‌, ಬೆಂಗಾಳಿ, ಬೊಡೊ, ದೊಗ್ರಿ, ಇಂಗ್ಲಿಷ್‌, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ರಾಜಸ್ಥಾನಿ, ಸಂಸ್ಕೃತ, ಸಿಂಧಿ, ಸಂತಲಿ, ತಮಿಳು, ತೆಲುಗು, ಉರ್ದು ಭಾಷೆಗಳ ಕೃತಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.

ಪ್ರಶಸ್ತಿಯ ಕುರಿತು ಹೆಚ್ಚಿನ ವಿವರ ಪಡೆಯಲು sahitya-akademi.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡುವ ಕಾರ್ಯ ಸುಮಾರು 12 ತಿಂಗಳು ನಡೆಯುತ್ತದೆ. ವಿಜೇತರಿಗೆ 1 ಲಕ್ಷ ರೂ ನಗದು ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಭಾರತೀಯ ಭಾಷೆಗಳ ಉತ್ತಮ ಸಾಹಿತಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವುದು ಹಾಗು ಸಾಹಿತ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗುರುತಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ತಂದೆ ಮತ್ತು ಮಗ ಜೋಡಿ ಯಾರು ಗೊತ್ತೆ?

ಕನ್ನಡದ ನಾಲ್ಕು ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ತಂದೆ ಮತ್ತು ಮಗ ಜೋಡಿ. ಡಿವಿ ಗುಂಡಪ್ಪ ಅವರು 1967ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಅವರ ಪುತ್ರ ಬಿಜಿಎಲ್‌ ಸ್ವಾಮಿ ಅವರು 1978ರಲ್ಲಿ ಇದೇ ಪ್ರಶಸ್ತಿ ಪಡೆದಿದ್ದಾರೆ. ಕುವೆಂಪು ಅವರಿಗೆ 1955ರಲ್ಲಿ ಮತ್ತು ಕೆಪಿ ಪೂರ್ಣಚಂದ್ರ ತೇಜಸ್ವಿ ಅವರಿಗೆ 1987ರಲ್ಲಿ ಪ್ರಶಸ್ತಿ ದೊರಕಿತ್ತು.

Whats_app_banner