ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾರ್ಚ್ 24ಕ್ಕೆ ಸರಳ ಸಾಮೂಹಿಕ ವಿವಾಹ; ಅರ್ಜಿ ಆಹ್ವಾನ, ನೋಂದಣಿ ದಿನಾಂಕ, ಅಗತ್ಯ ದಾಖಲೆಗಳ ವಿವರ ಇಲ್ಲಿದೆ
ಕನ್ನಡ ಸುದ್ದಿ  /  ಕರ್ನಾಟಕ  /  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾರ್ಚ್ 24ಕ್ಕೆ ಸರಳ ಸಾಮೂಹಿಕ ವಿವಾಹ; ಅರ್ಜಿ ಆಹ್ವಾನ, ನೋಂದಣಿ ದಿನಾಂಕ, ಅಗತ್ಯ ದಾಖಲೆಗಳ ವಿವರ ಇಲ್ಲಿದೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾರ್ಚ್ 24ಕ್ಕೆ ಸರಳ ಸಾಮೂಹಿಕ ವಿವಾಹ; ಅರ್ಜಿ ಆಹ್ವಾನ, ನೋಂದಣಿ ದಿನಾಂಕ, ಅಗತ್ಯ ದಾಖಲೆಗಳ ವಿವರ ಇಲ್ಲಿದೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್ 24 ರಂದು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಚಿಸಲಾಗಿದ್ದು, ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ, ನಿಯಮಗಳು ಹಾಗೂ ಇತರೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

2025ರ ಮಾರ್ಚ್ 24 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2025ರ ಮಾರ್ಚ್ 24 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 2025ರ ಮಾರ್ಚ್ 24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿಯನ್ನು ಪಡೆದು, ಇದೇ ಕಚೇರಿಗೆ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫೆಬ್ರವರಿ 20 ರವರಿಗೆ ನೋಂದಣಿಗೆ ಅವಕಾಶ

ಮಾರ್ಚ್ 24 ರಂದು ಬೆಳಗ್ಗೆ 11.00 ರಿಂದ 12.00ರ ವರೆಗೆ ನೆರವೇರುವ ವೃಷಭ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದೆ. ಫೆಬ್ರವರಿ 20 ರೊಳಗೆ ವಧು-ವರರು ನಿಗದಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಫೆಬ್ರವರಿ 24ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುತ್ತದೆ. ಫೆಬ್ರವರಿ 28 ರಂದು ಅಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಮಾರ್ಚ್ 5ರಂದು ವಧುವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ಸರಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಸಲ್ಲಿಸಲು ಏನೆಲ್ಲಾ ಅಗತ್ಯ ದಾಖಲೆಗಳು ಬೇಕು

ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 2 ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅಥವಾ ಗ್ರಾಮ ಆಡಳಿತಾಧಿಕಾರಿಯಿಂದ ಅಥವಾ ತಹಶೀಲ್ದಾರರಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಸಾಮೂಹಿಕ ವಿವಾಹದಲ್ಲಿ ವಧು-ವರರಿಗೆ ಸಹಾಯಹಸ್ತ

ಸರಳ ಸಾಮೂಹಿಕ ವಿವಾಹವಾಗುವ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್, ಶಲ್ಯ, ಪೇಟ, ಬಾಸಿಂಗ್ ಇತ್ಯಾದಿಗಳಿಗಾಗಿ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.5 ಸಾವಿರ ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣ, ಕಾಲುಂಗುರ ಇತ್ಯಾದಿಗಳಿಗೆ10 ಸಾವಿರ ರೂಪಾಯಿ ನೀಡಲಾಗುತ್ತದೆ. ಸುಮಾರು 40 ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ನೀಡಲಾಗುವುದು. ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು.

ಷರತ್ತು ಹಾಗೂ ನಿಯಮಗಳನ್ನು ಶ್ರೀ ದೇವಳದ ಸೂಚನಾ ಫಲಕ ಅಥವಾ ಕಚೇರಿ ವೇಳೆಯಲ್ಲಿ ಖುದ್ದಾಗಿ ಬಂದು ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 08257-281224, 236200, 281700, 281265 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಅಥವಾ ಶ್ರೀ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

Whats_app_banner