Chamarajanagar News: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅದ್ದೂರಿಯಾಗಿ ನಡೆದ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವ; ಫೋಟೊಸ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Chamarajanagar News: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅದ್ದೂರಿಯಾಗಿ ನಡೆದ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವ; ಫೋಟೊಸ್

Chamarajanagar News: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅದ್ದೂರಿಯಾಗಿ ನಡೆದ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವ; ಫೋಟೊಸ್

  • ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ನಡುವೆ ದಟ್ಟ ಕಾನನದಲ್ಲಿ ಇರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಗೋಪಾಲಸ್ವಾಮಿ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿದೆ. ಅದರ ಫೋಟೊಸ್ ಇಲ್ಲಿದೆ. 

ಪ್ರತಿ ವರ್ಷದಂತೆ ಈ ಬಾರಿಯೂ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿಂದು (ಏಪ್ರಿಲ್ 4ರಂದು) ಶ್ರೀ ಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು.
icon

(1 / 6)

ಪ್ರತಿ ವರ್ಷದಂತೆ ಈ ಬಾರಿಯೂ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿಂದು (ಏಪ್ರಿಲ್ 4ರಂದು) ಶ್ರೀ ಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು.

ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವದಲ್ಲಿ ಸಹಸ್ರಾರು ಮಂದಿ ಭಕ್ತರು ಭಾಗಿಯಾದರು. ನೆತ್ತಿ ಸುಡುತ್ತಿದ್ದ ಬಿರು ಬಿಸಿಲಿನ ನಡುವೆಯೂ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
icon

(2 / 6)

ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವದಲ್ಲಿ ಸಹಸ್ರಾರು ಮಂದಿ ಭಕ್ತರು ಭಾಗಿಯಾದರು. ನೆತ್ತಿ ಸುಡುತ್ತಿದ್ದ ಬಿರು ಬಿಸಿಲಿನ ನಡುವೆಯೂ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

ಗೋಪಾಲಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕೈಂಕರ್ಯಗಳನ್ನು ಪರಂಪರೆಗೆ ಅನುಗುಣವಾಗಿ ಅರ್ಚಕ ವೃಂದ ನೆರವೇರಿಸಿ ಇಡೀ ವಿಶ್ವಕ್ಕೆ ಒಳಿತಾಗುವಂತೆ ಪ್ರಾರ್ಥಿಸಿದೆ.
icon

(3 / 6)

ಗೋಪಾಲಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕೈಂಕರ್ಯಗಳನ್ನು ಪರಂಪರೆಗೆ ಅನುಗುಣವಾಗಿ ಅರ್ಚಕ ವೃಂದ ನೆರವೇರಿಸಿ ಇಡೀ ವಿಶ್ವಕ್ಕೆ ಒಳಿತಾಗುವಂತೆ ಪ್ರಾರ್ಥಿಸಿದೆ.

ರಥವನ್ನು ವಿವಿಧ ಬಣ್ಣಗಳ ಬಾವುಟಗಳು ಹಾಗು ಹೂವುಗಳು, ತಳಿರು ತೋರಣಗಳನ್ನು ಕಟ್ಟಿ ಅಲಂಕರಿಸಲಾಗಿತ್ತು. ಮಧ್ಯಾಹ್ನ 12.30ರ ಶುಭ ಘಳಿಗೆಯಲ್ಲಿ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
icon

(4 / 6)

ರಥವನ್ನು ವಿವಿಧ ಬಣ್ಣಗಳ ಬಾವುಟಗಳು ಹಾಗು ಹೂವುಗಳು, ತಳಿರು ತೋರಣಗಳನ್ನು ಕಟ್ಟಿ ಅಲಂಕರಿಸಲಾಗಿತ್ತು. ಮಧ್ಯಾಹ್ನ 12.30ರ ಶುಭ ಘಳಿಗೆಯಲ್ಲಿ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಬ್ರಹ್ಮ ರಥೋತ್ಸವ ಹಿನ್ನೆಲೆಯಲ್ಲಿ ಗೋಪಾಲಸ್ವಾಮಿಗೆ ವಿವಿಧ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹಿನ್ನೆಲೆಯಲ್ಲಿ, ರಥೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರ ಅನುಕೂಲಕ್ಕಾಗಿ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿತ್ತು.
icon

(5 / 6)

ಬ್ರಹ್ಮ ರಥೋತ್ಸವ ಹಿನ್ನೆಲೆಯಲ್ಲಿ ಗೋಪಾಲಸ್ವಾಮಿಗೆ ವಿವಿಧ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹಿನ್ನೆಲೆಯಲ್ಲಿ, ರಥೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರ ಅನುಕೂಲಕ್ಕಾಗಿ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿತ್ತು.

ಆಹಾರ, ಆರೋಗ್ಯ, ಫ್ಯಾಷನ್, ಮಕ್ಕಳ ಕಾಳಜಿ, ದಾಂಪತ್ಯ, ಲವ್, ರಿಲೇಷನ್‌ಶಿಪ್… ಬದುಕಿನ ಖುಷಿ ಹೆಚ್ಚಿಸುವ ಎಷ್ಟೋ ವಿಷಯಗಳು ಇಲ್ಲಿವೆ. ದಿನಕ್ಕೊಮ್ಮೆ ಇಲ್ಲಿಗೆ ಬನ್ನಿ, ಪಾಸಿಟಿವ್ ಎನರ್ಜಿ ಫೀಲ್ ಮಾಡಿ.
icon

(6 / 6)

ಆಹಾರ, ಆರೋಗ್ಯ, ಫ್ಯಾಷನ್, ಮಕ್ಕಳ ಕಾಳಜಿ, ದಾಂಪತ್ಯ, ಲವ್, ರಿಲೇಷನ್‌ಶಿಪ್… ಬದುಕಿನ ಖುಷಿ ಹೆಚ್ಚಿಸುವ ಎಷ್ಟೋ ವಿಷಯಗಳು ಇಲ್ಲಿವೆ. ದಿನಕ್ಕೊಮ್ಮೆ ಇಲ್ಲಿಗೆ ಬನ್ನಿ, ಪಾಸಿಟಿವ್ ಎನರ್ಜಿ ಫೀಲ್ ಮಾಡಿ.


ಇತರ ಗ್ಯಾಲರಿಗಳು