Karnataka News Live December 19, 2024 : ಡಿ 31 ರಿಂದ ಸರ್ಕಾರಿ ಬಸ್ ಸೇವೆ ಇರಲ್ಲ, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ, ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ 5 ಮುಖ್ಯ ಬೇಡಿಕೆಗಳಿವು
ಎಚ್ಟಿ ಕನ್ನಡ ಲೈವ್ ಅಪ್ಡೇಟ್ಸ್ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Thu, 19 Dec 202404:15 PM IST
KSRTC Strike: ಕರ್ನಾಕಟದಲ್ಲಿ ಡಿ 31 ರಿಂದ ಸರ್ಕಾರಿ ಬಸ್ ಸೇವೆ ಇರಲ್ಲ. ಕೆಎಸ್ಆರ್ಟಿಸಿ ಮುಷ್ಕರ ನಡೆಯಲಿದೆ. ಸರಳವಾಗಿ ಹೇಳಬೇಕು ಎಂದರೆ ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಅವರ 5 ಮುಖ್ಯ ಬೇಡಿಕೆಗಳ ವಿವರ ಇಲ್ಲಿದೆ.
Thu, 19 Dec 202401:44 PM IST
- ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನ ಪರಿಷತ್ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೀರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿಟಿ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Thu, 19 Dec 202412:50 PM IST
- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಗದ್ದಲ, ಹೈಡ್ರಾಮಾ ಬೆನ್ನಲ್ಲೇ ಸುವರ್ಣ ಸೌಧದ ಎಲ್ಲಾ ಗೇಟ್ಗಳನ್ನು ಬಂದ್ ಮಾಡಿ ಭಾರಿ ಭದ್ರತೆ ನೀಡಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಎಂಎಲ್ಸಿ ಸಿಟಿ ರವಿ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆದಿದೆ. ಸಚಿವೆ ಪೊಲೀಸ್ ದೂರನ್ನೂ ನೀಡಿದ್ದಾರೆ.
Thu, 19 Dec 202412:34 PM IST
Essay Contest: ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಖುಷಿ ಸುದ್ದಿ ನೀಡಿದೆ ಸದಾತನ ಟ್ರಸ್ಟ್. ಪ್ರಬಂಧ ಬರೆದು ಕಳುಹಿಸಿ ಒಟ್ಟು 1.5 ಲಕ್ಷ ರೂಪಾಯಿಗೂ ಹೆಚ್ಚು ಬಹುಮಾನಗಳನ್ನು ಗೆಲ್ಲುವ ಅವಕಾಶ ಇದು. ನೋಂದಣಿಗೆ ಡಿ.31 ಕೊನೇ ದಿನ, ಪ್ರಬಂಧ ಕಳುಹಿಸಲು ಜನವರಿ 14 ಕೊನೇ ದಿನ. ಸ್ಪರ್ಧಾ ನಿಯಮ ಮತ್ತು ವಿವರ ಇಲ್ಲಿದೆ.
Thu, 19 Dec 202412:30 PM IST
CT Ravi: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶದ ನಡುವೆ, ವಿಧಾನ ಪರಿಷತ್ ಕಲಾಪ ಮುಂದೂಡಲ್ಪಟ್ಟ ಸಮಯದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅವಾಚ್ಯ ಪದ ಬಳಕೆ ಮಾಡಿದ್ದು ಕ್ರಿಮಿನಲ್ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಪ್ರಕರಣ ಸಂಬಂಧ ಯಾರು ಏನು ಹೇಳಿದರು ಎಂಬ ವಿವರ ಇಲ್ಲಿದೆ.
Thu, 19 Dec 202411:57 AM IST
CT Ravi: ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪಕ್ಕೆ ಸಂಬಂಧಿಸಿ ಎಂಎಲ್ಸಿ ಸಿಟಿ ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲಿ ಅವರು ಆರು ಅಂಶಗಳನ್ನು ವಿವರಿಸಿದ್ದಾರೆ. ಆ ವಿವರ ಇಲ್ಲಿದೆ.
Thu, 19 Dec 202411:50 AM IST
- ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಒಬ್ಬ ಶಾಸಕನಿಗೆ ರಕ್ಷಣೆ ಇಲ್ಲ ಎಂದಾದರೆ, ರಾಜ್ಯದ ಇತರ ಜನರ ಪರಿಸ್ಥಿತಿ ಏನು? ಸುವರ್ಣ ಸೌಧದ ಮೊಗಸಾಲೆಯಲ್ಲಿ ಹೋಗುತ್ತಿದ್ದಾಗ ನನ್ನ ಮೇಲೆ ಹಲ್ಲೆ ಮಾಡಲು ಬಂದಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳಿಕೊಂಡು ದಾಳಿ ನಡೆಸಿದ್ದಾರೆ ಎಂದು ಸಿಟಿ ರವಿ ಹೇಳಿದ್ದಾರೆ.
Thu, 19 Dec 202410:17 AM IST
Ambedkar Row: ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ ವ್ಯಕ್ತವಾದ ಬಳಿಕ ವಿಧಾನ ಪರಿಷತ್ ಕಲಾಪ ಮುಂದೂಡಲ್ಪಟ್ಟ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ನಾಯಕ ಸಿಟಿ ರವಿ ಅವಾಚ್ಯ ಪದ ಬಳಸಿದ ಆರೋಪ ವ್ಯಕ್ತವಾಗಿದೆ. ಅಂಬೇಡ್ಕರ್ ವಿವಾದ ನಡುವೆ ಈಗ ಸಿಟಿ ರವಿ ಆಡಿದ್ದರೆನ್ನಲಾದ ಹಗುರ ಮಾತು ಬಿಜೆಪಿ ನಾಯಕರಿಗೆ ಮತ್ತೊಂದು ತಲೆನೋವಾಗಿದೆ.
Thu, 19 Dec 202409:55 AM IST
- ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಬೆಂಗಳೂರು ಹಾಗೂ ಮೈಸೂರಿನಿಂದಲೂ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಇರಲಿದೆ. ಕನ್ನಡ ಹಬ್ಬಕ್ಕೆ ಬರುವವರಿಗಾಗಿ ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಯೋಜಿಸಲಾಗಿದೆ.
Thu, 19 Dec 202405:38 AM IST
Kannada Sahitya Sammelana: ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆಯಿಂದ ಮೂರು ದಿನ ಸಾಹಿತ್ಯ ಕಂಪು ಸಕ್ಕರೆ ನಾಡನ್ನು ಆವರಿಸಲಿದ್ದು, ಕನ್ನಡಿಗರು ಮಂಡ್ಯ ನಗರ ಆತಿಥ್ಯಕ್ಕೆ ತಲೆದೂಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದ 5 ಮುಖ್ಯ ಅಂಶಗಳು ಇಲ್ಲಿವೆ.
Thu, 19 Dec 202403:11 AM IST
- ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಡಿಸೆಂಬರ್ 18ರ ಬುಧವಾರ ನಡೆಯಿತು. ವಾದ, ಪ್ರತಿವಾದಗಳನ್ನು ಆಲಿಸಿರುವ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 19ರ ಗುರುವಾರಕ್ಕೆ ಮುಂದೂಡಿದೆ.
Thu, 19 Dec 202402:30 AM IST
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಡಳಿತದಲ್ಲಿ ಆಮೂಲಾಗ್ರ ಬದಲಾವಣೆ ತರಲು ಕರ್ನಾಟಕ ಸರ್ಕಾರವು ಹೊಸ ವಿಧೇಯಕವನ್ನು ಮಂಡಿಸಿ ಒಪ್ಪಿಗೆ ಪಡೆದುಕೊಂಡಿದೆ.
Thu, 19 Dec 202402:28 AM IST
- ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಪರಿಣಾಮವಾಗಿ ಪ್ರಥಮ ದರ್ಜೆ ಸಹಾಯಕಿ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಸರಕು ವಾಹನಗಳನ್ನು ನಿಷೇಧಿಸಿರುವ ವರದಿಯೂ ಇಲ್ಲಿದೆ.
Thu, 19 Dec 202401:40 AM IST
- ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಚಳಿ ತೀವ್ರಗೊಳ್ಳುತ್ತಿದ್ದು, ಜನರು ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಡಿಸೆಂಬರ್ 19ರ ಗುರುವಾರವೂ ಬೀದರ್, ವಿಜಯಪುರ ಹಾಗೂ ಕಲಬುರಗಿಯಲ್ಲಿ ಚಳಿ ಮುಂದುವರಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಮಂಜಿನ ವಾತಾವರಣ ಮುಂದುವರಿದಿದೆ.
Thu, 19 Dec 202401:30 AM IST
- ಸಿರಿಧಾನ್ಯವನ್ನು ಉತ್ತೇಜಿಸುವ ಜತೆಗೆ ಅಡುಗೆ ಮಾಡುವವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕೃಷಿ ಇಲಾಖೆ "ಸಿರಿಧಾನ್ಯ" ಮತ್ತು "ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆಯನ್ನು ಆಯೋಜಿಸಿದೆ.